ಕನ್ನಡಪ್ರಭ ವಾರ್ತೆ ರಾಯಚೂರು
ಸ್ಥಳೀಯ ಕೆಇಬಿ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನವ ಹಕ್ಕುಗಳ ಸಂಘಟನೆಯ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯಾದ್ಯಂತ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಬಾರದಂತೆ ಮುಂಜಾಗೃತಾ ಕ್ರಮವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುತ್ತಿದ್ದು, ಇಂದು ಬೂತ್ಗಳಲ್ಲಿ ಲಸಿಕೆ ಹಾಕಲಾಗುತ್ತಿದೆ. ಮಾ.4 ರಿಂದ ಮಾ.6ರವರೆಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯಿಂದ ಮನೆ ಮನೆಗೆ ತೆರಳಿ ಲಸಿಕೆಯನ್ನು ಹಾಕಲಾಗುತ್ತದೆ ಎಂದು ತಿಳಿಸಿದರು.ನಗರ ಶಾಸಕ ಡಾ.ಎಸ್.ಶಿವರಾಜ ಪಾಟೀಲ್ ಮಾತನಾಡಿ, ಪೋಲಿಯೋ ಕಾಯಿಲೆಯು ಮುಂಜಾಗೃತಾ ಕ್ರಮಗಳನ್ನು ವಹಿಸಿಕೊಳ್ಳುವಂತಹ ಕಾಯಿಲೆಯಾಗಿದ್ದು, ಪೋಲಿಯೋ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವುದು ಅತ್ಯಂತ ಅಗತ್ಯವಾಗಿದೆ ಎಂದರು.
ಲಸಿಕೆ ಅಭಿಯಾನದಡಿ ಜಿಲ್ಲೆಯಲ್ಲಿ 1 ರಿಂದ 5 ವರ್ಷದ 2.50 ಲಕ್ಷ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಿಸುವ ಗುರಿ ಹೊಂದಿದ್ದು, ಮೊದಲ ದಿನ ವಿವಿಧ ಸ್ಥಳಗಳಲ್ಲಿ ಲಸಿಕೆ ಹಾಕಿದ್ದು, ಮುಂದಿನ ದಿನಗಳಲ್ಲಿ ಮನೆ ಮನೆಗೆ ಹೋಗಿ ಲಸಿಕೆ ಹಾಕಿಸುವ ಕಾರ್ಯವನ್ನು ಸಹ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಪಂ ಸಿಇಒ ರಾಹುಲ್ ತುಕಾರಾಮ ಪಾಂಡ್ಚೆ, ತಹಸೀಲ್ದಾರ್ ಸುರೇಶ ವರ್ಮಾ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ನಂದಿತಾ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಕುಮಾರ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಶಾಕೀರ ಮೊಯಿನುದ್ದಿನ್, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಜ್ವಲ್ ಕುಮಾರ, ಅಕ್ಷರ ದಾಸೋಹ ಅಧಿಕಾರಿ ಈರಣ್ಣ, ಚಂದ್ರಕಾಂತ, ಮಹೇಶ, ಮಂಜುನಾಥ, ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.