ಶಿವಮೊಗ್ಗ: ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನು ಗೌರವಿಸುವ ಉದ್ದೇಶದಿಂದ ಸೈನಿಕ ಧ್ವಜ ದಿನಾಚರಣೆಯನ್ನು ಪ್ರತಿ ವರ್ಷ ಕೈಗೊಳ್ಳಲಾಗುತ್ತಿದ್ದು, ಧ್ವಜ ವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರು ಮತ್ತು ಅವರ ಅವಲಂಬಿತರಿಗೆ ನೆರವಾಗೋಣ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ಪುರೋಹಿತರಾದ ನಾಗರಾಜ್ ಎಂಬುವವರು ಧ್ವಜ ದಿನಾಚರಣೆ ಅಂಗವಾಗಿ 25000 ರು.ಗಳ ವಂತಿಗೆಯನ್ನು ನೀಡಿದ್ದು ಅವರನ್ನು ಜಿಲ್ಲಾಧಿಕಾರಿಗಳು ಇದೇ ಸಂದರ್ಭದಲ್ಲಿ ಗೌರವಿಸಿ, ನಾಗರಾಜ್ರವರು ಎಲ್ಲರಿಗೂ ಪ್ರೇರಣೆ ಎಂದರು.
ಸೈನಿಕ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ(ಪ್ರ)ರಾದ ಡಾ.ಸಿ.ಎ.ಹಿರೇಮಠ ಮಾತನಾಡಿ, ಈ ಬಾರಿ ಧ್ವಜ ವಂತಿಗೆಯ ಸಂಗ್ರಹದಲ್ಲಿ ಉತ್ತಮವಾಗಿ ಗುರಿ ಸಾಧನೆ ಮಾಡಲಾಗಿದೆ. ಧ್ವಜ ದಿನದ ಅಂಗವಾಗಿ ಸಂಗ್ರಹವಾಗುವ ವಂತಿಗೆ ಹಣದಿಂದ ನಿವೃತ್ತ ಸೈನಿಕರು, ಅವರ ಅವಲಂಬಿತರಿಗೆ ಅನುಕೂಲ ಮಾಡಿಕೊಡಲಾಗುವುದು. ವಂತಿಗೆ ಹಣ ಹೆಚ್ಚಾದರೆ ಹೆಚ್ಚಿನ ಅನುಕೂಲ ಸಾಧ್ಯವಾಗುತ್ತದೆ. ಆದ್ದರಿಂದ ಅಧಿಕಾರಿಗಳು, ಸಾರ್ವಜನಿಕ ಸಹಕಾರ ಸಿಕ್ಕರೆ ಒಳ್ಳೆಯದು ಎಂದರು.ಈ ಸಂದರ್ಭದಲ್ಲಿ ಜಿಲ್ಲೆಯ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು, ಮಾಜಿ ಸೈನಿಕರ ಅವಲಂಬಿತರು, ಎನ್ಸಿಸಿ ಅಧಿಕಾರಿಗಳು, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.