ಮುಳಗುಂದ: ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜನಮಾನಸದಲ್ಲಿ ತನ್ನ ಭಕ್ತಿ ಹಾಗೂ ಕಾಯಕದಿಂದ ಮನೆ ಮಾತಾಗಿದ್ದಾಳೆ. ಕೌಟುಂಬಿಕ ಸಂಕಷ್ಟ ಮೆಟ್ಟಿ ನಿಂತು, ಆದರ್ಶ ಮೌಲ್ಯಗಳನ್ನು ಬದುಕಿನಲ್ಲಿ ರೂಢಿಸಿಕೊಂಡು ಸಾಮಾಜಿಕ ಹಾಗೂ ಧಾರ್ಮಿಕ ಚಿಂತನೆಯಲ್ಲಿ ಸಾಧನೆಗೈದ ಮಹಾಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸ್ತ್ರೀ ಕುಲಕ್ಕೆ ಮಾದರಿ ಎಂದು ಎಂ.ಡಿ. ಬಟ್ಟೂರ ಹೇಳಿದರು.
ನೀಲಗುಂದ ಗುದ್ನೇಶ್ವರ ಮಠದ ಪ್ರಭುಲಿಂಗ ದೇವರು ಮಾತನಾಡಿ, ಸಮಾಜದ ಉದ್ಧಾರಕ್ಕಾಗಿ, ಭಕ್ತಿಯ ಸಾಕಾರಮೂರ್ತಿಯಾದ ಶಿವಶರಣೆ ಹೇಮರಡ್ಡಿ ಮಲ್ಲಮ್ಮಳ ಧರ್ಮ ನಿಷ್ಠೆ, ಧಾರ್ಮಿಕ ಭಾವನೆಯೂ ಎಂದಿಗೂ ಆದರ್ಶಪ್ರಾಯವಾಗಿದೆ ಎಂದರು.
ಈ ವೇಳೆ ಕಾಶಿನಾಥ ಮರಿದೇವರಮಠ, ಫಕ್ಕೀರಯ್ಯ ಅಮೋಘಿಮಠ, ಬಸವರಾಜ ಬಾತಾಖಾನಿ, ಜಗದೀಶ ಬಟ್ಟೂರ ಸೇರಿದಂತೆ ಸುತ್ತಮುತ್ತಲಿ ಗ್ರಾಮಗಳ ರಡ್ಡಿ ಸಮಾಜ ಬಾಂಧವರು ಇದ್ದರು.