ಹುಬ್ಬಳ್ಳಿ:
ಇಲ್ಲಿನ ತಬೀಬ್ ಲ್ಯಾಂಡ್ನಲ್ಲಿರುವ ಕಾರ್ಯನಿರ್ವಾಹಕ ಎಂಜಿನಿಯರ್, ಕಾರ್ಯ ಮತ್ತು ಪಾಲನಾ, ನಗರ ವಿಭಾಗ, ಹೆಸ್ಕಾಂ ಕಚೇರಿಯಲ್ಲಿ ನೂತನ ವಾಹನಕ್ಕೆ ಪೂಜೆ ಸಲ್ಲಿಸಿ ಲೋಕಾರ್ಪಣೆಗೊಳಿಸಿದರು.
ಹುಬ್ಬಳ್ಳಿ ನಗರ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಜಯಪ್ರದಾ ಅವರು ನೂತನ ವಾಹನದ ವಿಶೇಷತೆ, ಅದರ ಕಾರ್ಯವಿಧಾನದ ಕುರಿತು ವ್ಯವಸ್ಥಾಪಕ ನಿರ್ದೇಶಕರಿಗೆ ಮಾಹಿತಿ ನೀಡಿದರು.ಬಳಿಕ ಅಧಿಕಾರಿಗಳ ಸಭೆ ನಡೆಸಿದ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ, ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಸುವುದು ಹೆಸ್ಕಾಂ ಮುಖ್ಯ ಧ್ಯೇಯವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ನೂತನ ವಾಹನದ ವಿಶೇಷತೆ..
11 ಕೆವಿ ಭೂಗತ ವಿದ್ಯುತ್ ಕೇಬಲ್ಗಳಲ್ಲಿ ದೋಷ ಕಂಡು ಹಿಡಿಯುವ ವಾಹನ ಅತ್ಯಾಧುನಿಕ ಸೌಲಭ್ಯಗಳಿಂದ ಕೂಡಿದ್ದು, ಲಿನಿಕ್ಸ್ ಆಪರೇಟಿಂಗ್ ಸಾಫ್ಟ್ವೇರ್ ಹೊಂದಿದೆ. ಸಂಪೂರ್ಣ ಸುರಕ್ಷತೆಯಿಂದ ಕೂಡಿದ್ದು, ಇದರ ನಿರ್ವಹಣೆ ಸರಳವಾಗಿದೆ. ಹುಬ್ಬಳ್ಳಿ ನಗರ ವ್ಯಾಪ್ತಿಯಲ್ಲಿ 878 ಕಿಮೀ ನಷ್ಟು ಭೂಗತ ವಿದ್ಯುತ್ ಕೇಬಲ್ ಇದೆ. ಸದ್ಯ ನೂತನ ವಾಹನದ ಸಹಾಯದಿಂದ ಕಡಿಮೆ ಅವಧಿಯಲ್ಲೇ ದೋಷ ಪತ್ತೆ ಮಾಡಬಹುದು. ಕೇವಲ 10ರಿಂದ 15 ನಿಮಿಷಗಳಲ್ಲಿ ಭೂಮಿಯೊಳಗಿನ ವಿದ್ಯುತ್ ಕೇಬಲ್ನ ದೋಷವನ್ನು ನಿಖರವಾಗಿ ಪತ್ತೆ ಹಚ್ಚಬಹುದಾಗಿದೆ. ಇದರಿಂದ ಸಮಯ ಹಾಗೂ ಶ್ರಮ ಕೂಡ ಉಳಿತಾಯವಾಗಿ, ಗ್ರಾಹಕರಿಗೆ ಅತಿ ಕಡಿಮೆ ಅವಧಿಯಲ್ಲಿ ಭೂಗತ ಕೇಬಲ್ನಲ್ಲಿನ ದೋಷ ಕಂಡು ಹಿಡಿದು ಸರಿಪಡಿಸಿ, ವಿದ್ಯುತ್ ಸರಬರಾಜು ಮಾಡಬಹುದಾಗಿದೆ ಎಂದು ಹೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.