‘ಸಮಾಧಾನ ಮಹೋತ್ಸವ’ಕ್ಕೆ ಹೈಕೋರ್ಟ್ ಅನುಮತಿ

KannadaprabhaNewsNetwork |  
Published : Mar 21, 2026, 02:15 AM IST
(ಮಸ್ಟ್) ಎಕ್ಸಲಂಟ್ ಸಂಸ್ಥೆಯಿಂದ 29 ವಿದ್ಯಾರ್ಥಿಗಳು ನವೋದಯ ಶಾಲೆಗಳಿಗೆ ಆಯ್ಕೆ | Kannada Prabha

ಸಾರಾಂಶ

ಫೆಲೋಶಿಪ್ ಆಫ್ ಉಡುಪಿ ಚರ್ಚಸ್ ವತಿಯಿಂದ ಮಿಷನ್ ಕಾಂಪೌಂಡಿನಲ್ಲಿ ಶುಕ್ರವಾರದಿಂದ 3 ದಿನಗಳ ಕಾಲ ನಡೆಯುತ್ತಿರುವ ತಮಿಳ‍ುನಾಡಿನ ಮೋಹನ್ ಸಿ.ಲಾಝರಸ್ ಅವರ ಪ್ರವಚನದ ‘ಸಮಾಧಾನ ಮಹೋತ್ಸವ’ಕ್ಕೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತ ಪಡಿಸಿ, ಕಾರ್ಯಕ್ರಮವನ್ನು ನಡೆಸಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದವು. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಸಂಘಟಕರು ಕಾರ್ಯಕ್ರಮ ನಡೆಸಲು ರಾಜ್ಯ ಹೈಕೋರ್ಟ್ ನಿಂದ ಪರವಾನಿಗೆಯನ್ನು ತಂದಿದ್ದಾರೆ.

ಉಡುಪಿ: ಫೆಲೋಶಿಪ್ ಆಫ್ ಉಡುಪಿ ಚರ್ಚಸ್ ವತಿಯಿಂದ ಮಿಷನ್ ಕಾಂಪೌಂಡಿನಲ್ಲಿ ಶುಕ್ರವಾರದಿಂದ 3 ದಿನಗಳ ಕಾಲ ನಡೆಯುತ್ತಿರುವ ತಮಿಳ‍ುನಾಡಿನ ಮೋಹನ್ ಸಿ.ಲಾಝರಸ್ ಅವರ ಪ್ರವಚನದ ‘ಸಮಾಧಾನ ಮಹೋತ್ಸವ’ಕ್ಕೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತ ಪಡಿಸಿ, ಕಾರ್ಯಕ್ರಮವನ್ನು ನಡೆಸಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದವು. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಸಂಘಟಕರು ಕಾರ್ಯಕ್ರಮ ನಡೆಸಲು ರಾಜ್ಯ ಹೈಕೋರ್ಟ್ ನಿಂದ ಪರವಾನಿಗೆಯನ್ನು ತಂದಿದ್ದಾರೆ. ಮೋಹನ್ ಸಿ.ಲಾಝರಸ್ ಅವರ ಈ ಕಾರ್ಯಕ್ರಮದ ಬಗ್ಗೆ ಜಿಲ್ಲೆಯ ಅಧಿಕಾರಿಗಳಿಗೆ 20 ದಿನಗಳ ಮೊದಲೇ ಮಾಹಿತಿ ನೀಡಲಾಗಿತ್ತು. ಆದರೆ ಕೆಲವೊಂದು ಸಂಘಟನೆಗಳು ಈ ಮಹೋತ್ಸವವನ್ನು ಮಾಡಲು ಬಿಡುವುದಿಲ್ಲ ಎಂಬ ಬೆದರಿಕೆಯನ್ನು ಒಡ್ಡಿದ್ದವು. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಪ್ರವಚನಕಾರರನ್ನು ಬದಲಾಯಿಸಲು ಸೂಚಿಸಿದ್ದರು. ಆದರೆ ಈ ಕಾರ್ಯಕ್ರಮಕ್ಕೆ ಐದಾರು ತಿಂಗಳಿಂದಲೇ ತಯಾರಿ ಆಗಿದ್ದು ಯಾವುದೇ ರೀತಿಯ ಸಮಸ್ಯೆ ಆಗಬಾರದು ಎಂಬ ನಿಟ್ಟಿನಲ್ಲಿ ಸಂಘಟಕರು ಹೈಕೋರ್ಟಿಗೆ ಮನವಿ ಸಲ್ಲಿಸಿದ್ದರು. ಈಗ ಕಾರ್ಯಕ್ರಮವನ್ನು ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ ಎಂದು ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷ ಪ್ರಶಾಂತ್ ಜತ್ತನ್ನ ತಿಳಿಸಿದ್ದಾರೆ.

ಈ ಮೂಲಕ ನ್ಯಾಯಾಲಯವು ನಮ್ಮ ಮೂಲಭೂತ ಹಕ್ಕುಗಳನ್ನು ಎತ್ತಿ ಹಿಡಿದಿದೆ ಮತ್ತು ಕಾರ್ಯಕ್ರಮಕ್ಕೆ ಸೂಕ್ತ ಭದ್ರತೆಯನ್ನು ಒದಗಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದೆ. ಕ್ರೈಸ್ತ ಬಂಧುಗಳು ಗಾಳಿಸುದ್ದಿಗೆ ಕಿವಿಗೊಡದೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಶಾಂತ್ ಜತ್ತನ್ನ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೈಸಿಯಾ ಘೋಷಣೆ ಕ್ರೈಸ್ತ ಬಂಧುಗಳಿಗೆ ವಿಶ್ವಾಸದ ಅಡಿಪಾಯ: ಬಿಷಪ್ ಜೆರಾಲ್ಡ್ ಲೋಬೊ
ಶರಣರ ತತ್ವಗಳು ಬದುಕಿಗೆ ಪ್ರೇರಣೆ: ಡಾ. ಸವಿತಾ ಸಿದ್ದನೂರ