ಕನ್ನಡಪ್ರಭ ವಾರ್ತೆ ಬೆಂಗಳೂರು
ಜಮೀನು ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ದೇವನಹಳ್ಳಿ ತಾಲೂಕು ವಲಯ ಅರಣ್ಯ ಅಧಿಕಾರಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರ ನ್ಯಾಯಪೀಠ ಈ ಆದೇಶ ಮಾಡಿತು.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಕಿರಣ್ ಎಂ.ರೋಣ ಅವರು ವಾದಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಕಸಬಾ ಹೋಬಳಿಯಲ್ಲಿ ಚಿಕ್ಕಸಣ್ಣೆ ಮತ್ತು ಭುವನಹಳ್ಳಿಯನ್ನು ಒಳಗೊಂಡ 59 ಎಕರೆ 8 ಗುಂಟೆ ಪ್ರದೇಶವನ್ನು ರಾಜ್ಯದ ಅರಣ್ಯ ಪ್ರದೇಶವೆಂದು ಮೈಸೂರು ಅರಣ್ಯ ನಿಯಂತ್ರಣ ಕಾಯ್ದೆಯ ಸೆಕ್ಷನ್ 17ರ ಅನುಸಾರ 1921ರ ಜ.8ರಂದು ಅಧಿಸೂಚನೆ ಹೊರಡಿಸಿದೆ. ಅದರಲ್ಲಿ ಭುವನಹಳ್ಳಿ ರಾಜ್ಯ ಅರಣ್ಯ ಬ್ಲಾಕ್ನಲ್ಲಿರುವ ಚಿಕ್ಕಸಣ್ಣೆಯ ಸರ್ವೇ ನಂಬರ್ 69ರಲ್ಲಿ (ಹಳೆಯ ಸರ್ವೇ ನಂಬರ್ 67) ವ್ಯಾಜ್ಯಕ್ಕೆ ಒಳಪಟ್ಟಿರುವ 8 ಎಕರೆ 35 ಗುಂಟೆ ಜಮೀನು ಕೂಡಾ ಸೇರಿದೆ. ಇದರಲ್ಲಿ ಮೇಲ್ಮನವಿಯ ಪ್ರತಿವಾದಿ ಮೊಹಮ್ಮದ್ ಸನಾವುಲ್ಲಾ ಮತ್ತು ಅವರ ಕಡೆಯವರು ವ್ಯಾಜ್ಯ ಪ್ರದೇಶದಲ್ಲಿ ಲೇಔಟ್ ನಿರ್ಮಾಣ ಮಾಡಿದ್ದಾರೆ. ಅರಣ್ಯ ಪ್ರದೇಶದ ಮೇಲೆ ಮೂರನೇ ವ್ಯಕ್ತಿ ಸ್ವತ್ತಿನ ಅಧಿಕಾರ ಹೊಂದಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆಕ್ಷೇಪಿಸಿದರು.ಅದನ್ನು ಪರಿಗಣಿಸಿದ ನ್ಯಾಯಾಲಯ ಈ ಮೇಲಿನಂತೆ ಆದೇಶಿಸಿದೆ. ಜತೆಗೆ, ಪ್ರತಿವಾದಿಯಾಗಿರುವ ಚಿಕ್ಕಸಣ್ಣೆ ಗ್ರಾಮದ ಸಗಟು ಹಣ್ಣಿನ ವ್ಯಾಪಾರಿ ಎಂ.ಎ.ಮೊಹಮದ್ ಸನಾವುಲ್ಲಾಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.ಪ್ರಕರಣದ ವಿವರ:
ಸ್ವತ್ತಿಗೆ ಸಂಬಂಧಿಸಿದ ಅಸಲು ದಾವೆಯಲ್ಲಿ ವಿಚಾರಣೆ ನಡೆಸಿದ್ದ ದೇವನಹಳ್ಳಿಯ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ, ಪ್ರತಿವಾದಿಗಳಿಗೆ ಸ್ವತ್ತಿನ ಅಧಿಕಾರ ಘೋಷಣೆ ಮಾಡುವಂತೆ ಸರ್ಕಾರಕ್ಕೆ ನಿರ್ದೇಶಿಸಿ 2023ರ ಡಿ.15ರಂದು ಆದೇಶಿಸಿತ್ತು. ಅದನ್ನು ಪ್ರಶ್ನಿಸಿರುವ ರಾಜ್ಯ ಸರ್ಕಾರ, ಅರಣ್ಯ ಇಲಾಖೆಗೆ ಸೇರಿದ ಜಮೀನನ್ನು ಕಂದಾಯ ಇಲಾಖೆ ಹರಾಜು ಹಾಕಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಮೇಲ್ಮನವಿ ಸಲ್ಲಿಸಿದೆ.