ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳು ಹಾಗೂ ತಂತ್ರಜ್ಞರೊಂದಿಗೆ ಸಭೆ ನಡೆಸಿದ ಅವರು, ಪ್ರಸಕ್ತ ಸಾಲಿನಲ್ಲಿ ಈವರೆಗೆ ಗುರುತಿಸಲಾಗಿರುವ 130 ಪ್ರಕರಣಗಳಲ್ಲಿ 5 ಜನರು ಮೃತರಾಗಿರುವುದು ಅತ್ಯಂತ ನೋವಿನ ಸಂಗತಿ. ಸಕಾಲದಲ್ಲಿ ಕಾಯಿಲೆಗೆ ಚಿಕಿತ್ಸೆ ದೊರೆಯುವಂತೆ ವೈದ್ಯಾಧಿಕಾರಿಗಳು ವಿಶೇಷ ಗಮನಹರಿಸಬೇಕು ಎಂದು ಸೂಚನೆ ನೀಡಿದರು.
ಮಂಗನ ಕಾಯಿಲೆ ನಿಯಂತ್ರಣಕ್ಕೆ ಈ ಹಿಂದೆ ಬಳಸುತ್ತಿದ್ದ ತೈಲವನ್ನು ಹಲವು ಕಾರಣಗಳಿಂದಾಗಿ ಹಿಂಪಡೆಯಲಾಗಿದೆ. ಅಲ್ಲದೇ ಕಾಯಿಲೆಯ ನಿಯಂತ್ರಣಕ್ಕೆ ಔಷಧ ಸಂಶೋಧಿಸಲು ಐದು ವರ್ಷಗಳ ಹಿಂದೆ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಮನವಿ ಮಾಡಿಕೊಳ್ಳಲಾಗಿತ್ತು. ಅಲ್ಲದೇ, ಇತ್ತೀಚೆಗೆ ಕೇಂದ್ರ ವೈದ್ಯಕೀಯ ಸಚಿವರೊಂದಿಗೆ ಈ ಕುರಿತು ಚರ್ಚೆ ನಡೆಸಲಾಗಿದೆ. ಜಿಲ್ಲಾಸ್ಪತ್ರೆಗಳಲ್ಲಿ ಮಾತ್ರೆಗಳ ಕೊರತೆ ಇದ್ದ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿದಲ್ಲಿ ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದರು.ಸ್ವಚ್ಛತೆ ನಿರ್ಲಕ್ಷಿಸಿದರೆ ಪರವಾನಗಿ ರದ್ದು:
ಆಯುಷ್ಮಾನ್ ಭಾರತ್ ಯೋಜನೆಯಡಿ ಬಡತನ ರೇಖೆಯ ಕೆಳಗಿನ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವು ಕಡೆಗಳಲ್ಲಿ ಚಿಕಿತ್ಸೆಗೆ ದಾಖಲಾದ ವ್ಯಕ್ತಿಯಿಂದ ಹಣ ವಸೂಲಾತಿ ಮಾಡುತ್ತಿರುವ ಬಗ್ಗೆ ಆರೋಪ ಕೇಳಿಬಂದಿದೆ. ಅಂತಹ ಘಟನೆಗಳು ಮರುಕಳಿಸಿ ದೂರುಗಳು ದಾಖಲಾದಲ್ಲಿ ಅಂತಹ ಅಧಿಕಾರಿ-ಸಿಬ್ಬಂದಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಆಯುಷ್ಮಾನ್ ಯೋಜನೆಯ ನೋಂದಣಿ ಸಂದರ್ಭದಲ್ಲಿ ತಾಂತ್ರಿಕ ಸಮಸ್ಯೆಗಳ ನೆಪವೊಡ್ಡಿ, ಸಾರ್ವಜನಿಕರಿಗೆ ಅನಗತ್ಯ ಕಿರಿಕಿರಿ ಉಂಟು ಮಾಡುತ್ತಿರುವುದು ಕಂಡುಬಂದಿದೆ. ಇಂತಹ ವಿಷಯಗಳಲ್ಲಿ ದೂರುಗಳು ದಾಖಲಾದಲ್ಲಿ ಆರೋಗ್ಯಮಿತ್ರ ಸಿಬ್ಬಂದಿ ಮತ್ತು ಸಂಬಂಧಿಸಿದ ಕಾರ್ಯಕ್ರಮ ಸಂಯೋಜಕರ ವಿರುದ್ಧ ಕ್ರಮ ಅನಿವಾರ್ಯ. ಆರೋಗ್ಯ ಇಲಾಖೆಯ ಎಲ್ಲ ಹಂತದ ಅಧಿಕಾರಿ-ಸಿಬ್ಬಂದಿ ತಮ್ಮ ಜವಾಬ್ದಾರಿ ಅರಿತು ಪ್ರಾಮಾಣಿಕವಾಗಿ ಸಾರ್ವಜನಿಕ ಸೇವೆ ಸಲ್ಲಿಸುವಂತೆ ಸೂಚನೆ ನೀಡಿದರು.