ರಾಣಿಬೆನ್ನೂರಿನ ವಾಗೀಶ ನಗರದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶರಭಿ ಗುಗ್ಗಳದ ಅಂಗವಾಗಿ ಧರ್ಮಸಭೆ ನಡೆಯಿತು. ಇದಕ್ಕೂ ಮೊದಲು ಗುಗ್ಗಳ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ರಾಣಿಬೆನ್ನೂರು: ಭಾರತೀಯ ಸಂಸ್ಕೃತಿಯಲ್ಲಿ ದೇವರಿಗೆ ಉನ್ನತ ಸ್ಥಾನವಿದ್ದು, ನಮ್ಮ ನಂಬಿಕೆ ಎಲ್ಲ ಕಾರ್ಯಗಳಿಗೂ ಯಶಸ್ಸು ನೀಡುತ್ತದೆ ಎಂದು ಹೊನ್ನಾಳಿ ಹಿರೇಕಲ್ಮಠದ ಡಾ. ಒಡೆಯರ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರು ನುಡಿದರು.
ಇಲ್ಲಿನ ವಾಗೀಶ ನಗರದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶರಭಿ ಗುಗ್ಗಳದ ಅಂಗವಾಗಿ ಜರುಗಿದ ಧರ್ಮಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ನಾವು ಮಾಡುವ ಕಾಯಕದಲ್ಲಿ ಭಗವಂತನನ್ನು ಕಾಣಲಾಗುತ್ತದೆ. ಈ ಪರಂಪರೆಯನ್ನು ಉಳಿಸಿಕೊಳ್ಳಲು ಅನೇಕ ಹಿರಿಯರ ಶ್ರಮವಿದೆ. ಇಂದಿಗೂ ಧಾರ್ಮಿಕ ಭಾವನೆಯನ್ನು ಬೆಳೆಸಿಕೊಂಡು ಮುನ್ನಡೆಯುತ್ತಿರುವುದು ಸಂತಸ ತಂದಿದೆ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.