ಜೇನು ಸಾಕಣೆಯಿಂದ ಅಧಿಕ ಇಳುವರಿ: ಡಾ. ಕೆಂಚಾರೆಡ್ಡಿ

KannadaprabhaNewsNetwork |  
Published : Apr 21, 2026, 02:45 AM IST
19-ಎನ್ಪಿ ಕೆ-3.ನಾಪೋಕ್ಲು ಕೆಪಿಎಸ್ ಶಾಲೆಯ ಜನರಲ್ ಕೆ.ಎಸ್. ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ  ಕೊಡವ ಕೌಟುಂಬಿಕ ಹಾಕಿ ಟೂರ್ನಿಯ ಚೇನಂಡ ಕಪ್ ಹಾಕಿ ಉತ್ಸವದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಜೇನು ಕೃಷಿ ತರಬೇತಿ ಕಾರ್ಯಗಾರ.19-ಎನ್ಪಿ ಕೆ-4.ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಕೆಂಚಾರೆಡ್ಡಿ ಜೇನು ಕೃಷಿ ತರಬೇತಿ ಕಾರ್ಯಗಾರದಲ್ಲಿ ಪಾಲ್ಗೊಂಡು ಮಾರ್ಗದರ್ಶನ ಮಾಡಿದರು.  | Kannada Prabha

ಸಾರಾಂಶ

ಬೆಳೆಗಾರರು ಜೇನು ಸಾಕಣೆ ಮಾಡುವುದರಿಂದ ಅಧಿಕ (ಫಸಲು) ಇಳುವರಿ ಜೊತೆಗೆ ಆರ್ಥಿಕವಾಗಿ ಸದೃಢವಾಗಲು ಸಾಧ್ಯ ಎಂದು ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಕೆಂಚಾರೆಡ್ಡಿ ಹೇಳಿದರು.

ಕನ್ನಡಪ್ರಭವಾರ್ತೆ ನಾಪೋಕ್ಲು

ಬೆಳೆಗಾರರು ಜೇನು ಸಾಕಣೆ ಮಾಡುವುದರಿಂದ ಅಧಿಕ (ಫಸಲು) ಇಳುವರಿ ಜೊತೆಗೆ ಆರ್ಥಿಕವಾಗಿ ಸದೃಢವಾಗಲು ಸಾಧ್ಯ ಎಂದು ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಕೆಂಚಾರೆಡ್ಡಿ ಹೇಳಿದರು.

ಇಲ್ಲಿನ ಕೆಪಿಎಸ್ ಶಾಲೆಯ ಜನರಲ್ ಕೆ.ಎಸ್. ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಕೊಡವ ಕೌಟುಂಬಿಕ ಹಾಕಿ ಟೂರ್ನಿಯ ಚೇನಂಡ ಕಪ್ ಹಾಕಿ ಉತ್ಸವದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಜೇನು ಕೃಷಿ ತರಬೇತಿ ಕಾರ್ಯಗಾರದಲ್ಲಿ ಪಾಲ್ಗೊಂಡು ಮಾತನಾಡಿದರು.

ಕೊಡಗಿನ ಜೇನಿಗೆ ಸಾಕಷ್ಟು ಬೇಡಿಕೆ ಇದೆ. ಆದರೆ ಉತ್ತಮ ದರ್ಜೆಯ ಜೇನು ಲಭಿಸುತ್ತಿಲ್ಲ. ಇತರೆಡೆಗಳಿಂದ ಜೇನನ್ನು ತಂದು ಕೊಡಗಿನ ಜೇನು ಹೆಸರಿನಲ್ಲಿ ಮಾರಾಟ ಮಾಡುತ್ತಿರುವುದರಿಂದ ಜೇನು ಕಲಬೆರಕೆಯಾಗುತ್ತಿದೆ. ಇದನ್ನು ತಪ್ಪಿಸಲು ಕೃಷಿಕರು ಹೆಚ್ಚಿನ ಪ್ರಮಾಣದಲ್ಲಿ ಕೊಡಗಿನ ಜೇನನ್ನು ಉತ್ಪಾದನೆ ಮಾಡಬೇಕು ಎಂದರು. ಕೊಡಗಿನಲ್ಲಿ ಜೇನು ಕೃಷಿಗೆ ವಿಪುಲ ಅವಕಾಶವಿದೆ. ಜೇನುಸೇವನೆಯಿಂದ ಆರೋಗ್ಯಕ್ಕೆ ಒಳಿತು. ಜೇನನ್ನು ಔಷಧಿಯಾಗಿಯೂ ಬಳಸುತ್ತಿರುವುದರಿಂದ ಗುಣಮಟ್ಟದ ಜೇನಿಗೆ ಸಾಕಷ್ಟು ಬೇಡಿಕೆ ಇದ್ದು ಗುಣಮಟ್ಟದ ಜೇನಿಗೆ ಉತ್ತಮ ಬೇಡಿಕೆ ಇದೆ. ಆದರೆ ಉತ್ಪಾದನೆ ಇಲ್ಲ.

ಜೇನಿನ ಉತ್ಪಾದನೆಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎಂದು ಜೇನು ಕುಟುಂಬಗಳ ಸಾಕಣೆ ಮತ್ತು ನಿರ್ವಹಣೆ, ಮುನ್ನೆಚ್ಚರಿಕೆ ಕ್ರಮ, ಜೇನು ಸಾಕಣೆಯಿಂದ ಆಗುವ ಲಾಭ ಸೇರಿದಂತೆ ಸಮಗ್ರ ಮಾಹಿತಿಯನ್ನು ಸ್ಲೈಡ್ ಚಿತ್ರಗಳ ಮೂಲಕ ನೀಡಿ ರೈತರಲ್ಲಿರುವ ಪ್ರಶ್ನೆಗಳಿಗೆ ಉತ್ತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಪ್ಪೂರು ನದಿಕೊರೆತ ಪ್ರದೇಶಕ್ಕೆ ಶಾಸಕ ಯಶ್ ಪಾಲ್ ಭೇಟಿ
ಅಗ್ನಿ ಅವಘಡಗಳಿಗೆ ಸುರಕ್ಷತಾ ಕ್ರಮ ತಿಳಿದುಕೊಳ್ಳುವುದು ಅವಶ್ಯಕ: ಲಕ್ಷ್ಮಿಕುಮಾರ್