ಕನ್ನಡಪ್ರಭ ವಾರ್ತೆ ಮೈಸೂರು
ವಿಸ್ತರಣಾ ಶಿಕ್ಷಣ ಘಟಕ, ಸಾವಯವ ಕೃಷಿ ಸಂಶೋಧನಾ ಕೇಂದ್ರ, ರಾಷ್ಟ್ರೀಯ ಬೀಜ ಪ್ರಾಯೋಜನೆ ಸಂಯುಕ್ತವಾಗಿ ಮೈಸೂರಿನ ನಾಗನಹಳ್ಳಿಯ ಸಾವಯವ ಕೃಷಿ ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮುಂಗಾರು ಪೂರ್ವ ತಾಂತ್ರಿಕ ಆಂದೋಲನ- 2024 ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ತಾಲೂಕುಗಲ್ಲಿ ಈಗಾಗಲೇ ಮುಂಗಾರಿನ ಕೃಷಿ ಚಟುವಟಿಕೆಗಳು ಪ್ರಾರಂಭವಾಗಿದ್ದು, ಭತ್ತ, ರಾಗಿ, ಮುಸುಕಿನಜೋಳ ಜಿಲ್ಲೆಯ ಬಹು ಮುಖ್ಯ ಬೆಳೆಗಳಾಗಿವೆ. ಈ ನಿಟ್ಟಿನಲ್ಲಿ ಕೃಷಿ ವಿವಿ ಅಭಿವೃದ್ಧಿಪಡಿಸಿರುವ ನೂತನ ತಳಿಗಳು ಹಾಗೂ ವೈಜ್ಞಾನಿಕ ತಾಂತ್ರಿಕತೆಗಳನ್ನು ಅಳವಡಿಸಿಕೊಂಡು ಉತ್ತಮ ಬೆಳೆ ಬೆಳೆದು ರೈತರು ತಮ್ಮ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳಲು ಈ ಕಾರ್ಯಕ್ರಮವು ನೆರವಾಗಲಿದೆ ಎಂದರು.ಇಂದು ಕೃಷಿ ಕಾರ್ಮಿಕರು ಕೃಷಿ ಚಟುವಟಿಕೆಗಳಿಗೆ ಸಿಗುವುದು ಬಹಳ ವಿರಳವಾಗಿರುವುದಂದ ಕೃಷಿ ಯಂತ್ರೋಪಕರಣಗಳ ಮಾಹಿತಿಯನ್ನು ರೈತರು ಅರಿತುಕೊಂಡರೆ ದೇಶದ ಆರ್ಥಿಕ ಪ್ರಗತಿಗೆ ಸಹಕರಿಸಬಹುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಡಾ.ಸಿ.ರಾಮಚಂದ್ರ ಮಾತನಾಡಿ, ಮುಂಗಾರು ಹಂಗಾಮಿಗೆ ಸೂಕ್ತವಾದ ತಂತ್ರಜ್ಞಾನಗಳು ಮತ್ತು ಕೃಷಿ ಪರಿಕರಗಳ ಪ್ರದರ್ಶನ ಮತ್ತು ರಾಷ್ಟ್ರೀಯ ಬೀಜ ಯೋಜನೆಯಲ್ಲಿ ಲಭ್ಯವಿರುವ ಬಿತ್ತನೆ ಬೀಜಗಳ ಮಾರಾಟ ವ್ಯವಸ್ಥೆ ಮಾಡಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಓಡಿಪಿ ನಿರ್ದೇಶಕ ಫಾದರ್ ಅಲೆಕ್ಸ್ ಪ್ರಶಾಂತ್ ಸಿಕ್ವೇರಾ, ಪ್ರಗತಿಪರ ರೈತ ಬನ್ನಿಕುಪ್ಪೆಯ ಲೋಕೇಶ್, ಕೃಷಿ ವಿವಿ ಸಂಶೋಧನಾ ನಿರ್ದೇಶನಾಲಯದ ತಾಂತ್ರಿಕ ಅಧಿಕಾರಿ ಡಾ.ಸಿ.ಉಮಾಶಂಕರ್, ಶಶಿರೇಖಾ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಸಂಸ್ಥೆಯ ತಾಲೂಕು ಸಂಯೋಜನಾಧಿಕಾರಿ ರಾಕೇಶ್, ಓಡಿಪಿ ಸಂಸ್ಥೆಯ ಎಫ್.ಪಿ.ಓ ಸಂಯೋಜಕ ಜಾನ್ ರಾಡ್ರಿಗ್ರಸ್, ವಿಸ್ತರಣಾ ಶಿಕ್ಷಣ ಘಟಕದ ಕ್ಷೇತ್ರ ಸಹಾಯಕರಾದ ಆಸಿಫ್ ಪಾಷಾ, ಧರಣೇಶ್, ಸಂದೇಶ್ ಇದ್ದರು.
ತಾಂತ್ರಿಕ ಅಧಿವೇಶನ- ವಸ್ತುಪ್ರದರ್ಶನ
ವಸ್ತುಪ್ರದರ್ಶನ ಮಳಿಗೆಗಳಲ್ಲಿ ಕೃಷಿ ವಿವಿ ಶಿಫಾರಸುಗೊಂಡ ನೂತನ ತಾಂತ್ರಿಕತೆಗಳು ಹಾಗೂ ತಳಿಗಳ ಮಾಹಿತಿಯನ್ನು ಚಾರ್ಟ್ ಗಳನ್ನು ಅಳವಡಿಸಲಾಗಿತ್ತು. ಅಲ್ಲದೆ, ರಾಷ್ಟ್ರೀಯ ಬೀಜ ಪ್ರಾಯೋಜನೆ ವತಿಯಿಂದ ರೈತರಿಗಾಗಿ ಕೃಷಿ ವಿವಿ ನೂತನ ತಳಿಗಳಾದ ಕೆಎಂಪಿ-220, ಕೆಆರ್ ಎಚ್ 4 ಹಾಗೂ ಆರ್ ಎನ್ಆರ್- 15048 ಭತ್ತದ ತಳಿಗಳು, ಕೆಎಂಆರ್ 630 ಹಾಗೂ 365 ರಾಗಿ ತಳಿಗಳು, ಎಚ್ಎ-5 ಅವರೆ ತಳಿ ಬಿತ್ತನೆ ಬೀಜದ ಮಾರಾಟ ವ್ಯವಸ್ಥೆಯನ್ನು ಮಾಡಲಾಗಿತ್ತು. ಒಟ್ಟು 222 ರೈತರು, ರೈತ ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಿತ್ತನೆ ಬೀಜಗಳನ್ನು ಖರೀದಿಸಿದರು.