ಮಳೆಯ ಆರ್ಭಟಕ್ಕೆ ನೆಮ್ಮಾರು ಬಳಿ ಗುಡ್ಡ ಕುಸಿತ : ಸಂಚಾರ ಅಸ್ತವ್ಯಸ್ತ.

KannadaprabhaNewsNetwork |  
Published : Jun 16, 2025, 03:59 AM ISTUpdated : Jun 16, 2025, 04:00 AM IST
ೇ್‌ | Kannada Prabha

ಸಾರಾಂಶ

ಶೃಂಗೇರಿ, ತಾಲೂಕಿನಾದ್ಯಂತ ಮೃಗಶಿರ ಮಳೆ ಆರ್ಭಟ ಜೋರಾಗಿದ್ದು ಭಾನುವಾರವೂ ಎಡಬಿಡದೆ ಭಾರೀ ಮಳೆ ಸುರಿಯಿತು. ಶನಿವಾರ ರಾತ್ರಿ ಮಳೆ, ಗಾಳಿ ಆರ್ಭಟಕ್ಕೆ ಮಂಗಳೂರು- ಶಿವಮೊಗ್ಗ ಸಂಪರ್ಕದ ರಾಷ್ಟ್ರೀಯ ಹೆದ್ದಾರಿ 169 ರ ನೆಮ್ಮಾರು ಸಮೀಪ ಗುಡ್ಡ ಕುಸಿದು ರಸ್ತೆ ಮೇಲೆ ಬಿದ್ದ ಪರಿಣಾಮ ರಾತ್ರಿಯಿಂದಲೇ ಸಂಚಾರ ಅಸ್ತವ್ಯಸ್ತಗೊಂಡು ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು.

ತುಂಬಿ ಹರಿಯುತ್ತಿರುವ ತುಂಗೆ ।

ಕನ್ನಡಪ್ರಭ ವಾರ್ತೆ, ಶೃಂಗೇರಿ

ತಾಲೂಕಿನಾದ್ಯಂತ ಮೃಗಶಿರ ಮಳೆ ಆರ್ಭಟ ಜೋರಾಗಿದ್ದು ಭಾನುವಾರವೂ ಎಡಬಿಡದೆ ಭಾರೀ ಮಳೆ ಸುರಿಯಿತು. ಶನಿವಾರ ರಾತ್ರಿ ಮಳೆ, ಗಾಳಿ ಆರ್ಭಟಕ್ಕೆ ಮಂಗಳೂರು- ಶಿವಮೊಗ್ಗ ಸಂಪರ್ಕದ ರಾಷ್ಟ್ರೀಯ ಹೆದ್ದಾರಿ 169 ರ ನೆಮ್ಮಾರು ಸಮೀಪ ಗುಡ್ಡ ಕುಸಿದು ರಸ್ತೆ ಮೇಲೆ ಬಿದ್ದ ಪರಿಣಾಮ ರಾತ್ರಿಯಿಂದಲೇ ಸಂಚಾರ ಅಸ್ತವ್ಯಸ್ತಗೊಂಡು ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು.

ಜೋರು ಗಾಳಿಗೆ ಮರಗಳು ಧರೆಗುರುಳಿ ಬೀಳುತ್ತಿವೆ. ಕಳೆದ 4 ದಿನಗಳಿಂದ ನಿರಂತರ ಭಾರೀ ಮಳೆ ಸುರಿಯುತ್ತಿದೆ. ಹಳ್ಳಕೊಳ್ಳಗಳು, ಕೆರೆಗಳು, ನದಿಗಳು ತುಂಬಿವೆ. ಕೆರೆಕಟ್ಟೆ, ನೆಮ್ಮಾರು ಸುತ್ತಮುತ್ತಲ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ತುಂಗಾನದಿಯಲ್ಲಿ ನೀರಿನ ಮಟ್ಟ ಹೆಚ್ಚಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ತಗ್ಗು ಪ್ರದೇಶಗಳೆಲ್ಲ ಜಲಾವೃತಗೊಂಡಿವೆ. ಮಳೆ ಇದೇ ರೀತಿ ಮುಂದುವರಿದಲ್ಲಿ ಪ್ರವಾಹದ ಭೀತಿ ಎದುರಾಗುವ ಆತಂಕವಿದೆ.

ಕಿಗ್ಗಾ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರೀ ಮಳೆಯಿಂದ ನಂದಿನಿ, ನಳಿನಿ ನದಿಗಳಲ್ಲಿ ನೀರಿನ ಮಟ್ಟ ಮೀರಿವೆ. ಹೊಲಗೆದ್ದೆ, ಹಳ್ಳಗಳಲ್ಲಿ ನೀರು ಉಕ್ಕಿ ಹರಿಯುತ್ತಿದೆ. ಶ್ರೀಮಠದ ತುಂಗಾ ನದಿ ತೀರದ ಕಪ್ಪೆ ಶಂಕರ ದೇವಾಲಯ ಜಲಾವೃತಗೊಂಡಿದ್ದು, ಪ್ರವಾಹ ಪೀಡಿತ ಪ್ರದೇಶ ಗಾಂಧಿ ಮೈದಾನಕ್ಕೂ ಸಮೀಪದಲ್ಲಿಯೇ ನದಿಯ ಹರಿವು ಇರುವುದರಿಂದ ಯಾವುದೇ ಕ್ಷಣದಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಗಳಿವೆ. ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ, ಗುಡ್ಡ, ಭೂ ಕುಸಿತ, ರಸ್ತೆ ಮಣ್ಣು, ಕೆಸರು ಮಯವಾಗುತ್ತಿರುವುದರಿಂದ ಸಂಚಾರಕ್ಕೆ ಅಡಚಣೆಯಾಗಿದೆ. ಮಳೆ ನಡುವೆಯೂ ಶೃಂಗೇರಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ವೀಕೆಂಡ್ ಭಾನುವಾರ ಪಟ್ಟಣದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದರು.

--ಬಾಕ್ಸ್--

ವಾಡಿಕೆಗಿಂತ ಹೆಚ್ಚು ಮಳೆ

ಈ ವರ್ಷ ವಾಡಿಕೆಗಿಂತ ಹೆಚ್ಚು ಮುಂಗಾರು ಪೂರ್ವ ಮಳೆಯಾಗಿದೆ. ಮೇ ತಿಂಗಳ 2ನೇ ವಾರದಿಂದ ಮುಂಗಾರು ಪೂರ್ವ ಮಳೆ ಆರಂಭಗೊಂಡು ಜೂನ್ ಮೊದಲ ವಾರದವರೆಗೂ ಸುರಿದಿದೆ. 4-5 ದಿನಗಳ ಕಾಲ ಬಿಡುವು ನೀಡಿದ್ದರೂ ಮತ್ತೆ ಈಗ ಆರ್ಭಟಿಸಲಾರಂಬಿಸಿದೆ. ಮಳೆ ಬಿಡುವು ನೀಡಿದ್ದರಿಂದ ಅಡಕೆ ತೋಟಗಳಲ್ಲಿ ಔಷಧಿ ಸಿಂಪಡಣೆ ಕೆಲ ಚುರಕುಗೊಂಡಿದ್ದು ಮತ್ತೆ ಈಗ ಮಳೆಯಿಂದ ಸ್ಥಗಿತಗೊಂಡಿದೆ.

15 ಶ್ರೀ ಚಿತ್ರ 1-

ಶೃಂಗೇರಿ ಸುತ್ತಮುತ್ತ ಭಾರೀ ಮಳೆ ಸುರಿಯುತ್ತಿರುವುದರಿಂದ ಶನಿವಾರ ರಾತ್ರಿ ನೆಮ್ಮಾರು ಸಮೀಪ ರಾಷ್ಟ್ರೀಯ ಹೆದ್ದಾರಿ ರಸ್ತೆ ಮೇಲೆ ಗುಡ್ಡಕುಸಿದಿರುವುದು.

15 ಶ್ರೀ ಚಿತ್ರ 2-

ಶೃಂಗೇರಿ ಸುತ್ತಮುತ್ತ ಮಳೆಯಾಗುತ್ತಿರುವುದರಿಂದ ತುಂಬಿ ಹರಿಯುತ್ತಿರುವ ತುಂಗಾ ನದಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ