ಬಸವಾದಿ ಶರಣರ ಹಿಂದೂ ಸಮಾವೇಶ

KannadaprabhaNewsNetwork |  
Published : Dec 29, 2025, 03:30 AM IST
 | Kannada Prabha

ಸಾರಾಂಶ

ಬಬಲೇಶ್ವರದ ಶಾರದಾ ಸ್ಕೂಲ್ ವಿಶಾಲ ಮೈದಾನದಲ್ಲಿ ಬಸವಾದಿ ಶರಣರ ಹಿಂದೂ ಸಮಾವೇಶ ಡಿ.29 ರಂದು ನಡೆಯಲಿದ್ದು, ಹಲವಾರು ಹರ-ಗುರು-ಚರ ಮೂರ್ತಿಗಳ ಪಾವನ ಸಾನ್ನಿಧ್ಯದಲ್ಲಿ ಈ ಸಮಾವೇಶ ನಡೆಯಲಿದೆ.

ಕನ್ನಡಪ್ರಭ ವಾರ್ತೆ ವಿಜಯಪುರ

ಬಬಲೇಶ್ವರದ ಶಾರದಾ ಸ್ಕೂಲ್ ವಿಶಾಲ ಮೈದಾನದಲ್ಲಿ ಬಸವಾದಿ ಶರಣರ ಹಿಂದೂ ಸಮಾವೇಶ ಡಿ.29 ರಂದು ನಡೆಯಲಿದ್ದು, ಹಲವಾರು ಹರ-ಗುರು-ಚರ ಮೂರ್ತಿಗಳ ಪಾವನ ಸಾನ್ನಿಧ್ಯದಲ್ಲಿ ಈ ಸಮಾವೇಶ ನಡೆಯಲಿದೆ. ಸಮಾವೇಶಕ್ಕೆ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದ್ದು, 60/100 ಅಳತೆಯ ಬೃಹತ್ ವೇದಿಕೆ ರೂಪಿಸಲಾಗಿದೆ. 10 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಬಸವಾದಿ ಶರಣರ ಹಿಂದೂ ಸಮಾವೇಶದಲ್ಲಿ 500ಕ್ಕೂ ಹೆಚ್ಚು ಮಠಾಧೀಶರು ಭಾಗವಹಿಸುವ ನಿರೀಕ್ಷೆ ಇದೆ. ಹಿಂದೂ ಧರ್ಮ ಚಿಂತಕರಾದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಅನೇಕರು ಭಾಗವಹಿಸಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕನ್ಹೇರಿ ಶ್ರೀಗಳಿಗೂ ಸಹ ಈ ಸಮಾವೇಶದಲ್ಲಿ ಭಾಗವಹಿಸುವಂತೆ ಕೋರಲಾಗಿದೆ.

ಸಮಾರಂಭಕ್ಕೆ ವಿಜಯಪುರದಿಂದಲೂ 2 ಸಾವಿರಕ್ಕೂ ಹೆಚ್ಚು ಬೈಕ್ ರ‍್ಯಾಲಿ ಮೂಲಕ ಯುವಕರು ಪ್ರಯಾಣ ಬೆಳೆಸಲಿದ್ದು, ಈ ಬೈಕ್ ರ‍್ಯಾಲಿ ಸಾರವಾಡಕ್ಕೆ ತಲುಪಲಿದೆ. ಅಲ್ಲಿ ಸಾವಿರಾರು ಯುವಕರು ಬೈಕ್ ರ‍್ಯಾಲಿ ಮೂಲಕ ಸಾಗಲಿದ್ದಾರೆ. ಶಾಂತವೀರ ವೃತ್ತದಿಂದ 4 ಸಾವಿರ ಮಹಿಳೆಯರು ಪೂರ್ಣಕುಂಭ ಹೊತ್ತು ಮೆರವಣಿಗೆಯಲ್ಲಿ ಭಾಗವಹಿಸಲಿದ್ದು, ಅಣ್ಣ ಬಸವೇಶ್ವರ ವೃತ್ತ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೇರಿದಂತೆ ಅನೇಕ ಮಾರ್ಗದಲ್ಲಿ ಈ ಕುಂಭ ಮೆರವಣಿಗೆ ಸಾಗಲಿದ್ದು, ಸಮಾವೇಶ ನಡೆಯಲಿರುವ ಸ್ಥಳಕ್ಕೆ ತಲುಪಲಿದೆ. ಹಿಂದೂ ಧರ್ಮ ಸಂಘಟನೆ ಏಕೈಕ ಉದ್ದೇಶದೊಂದಿಗೆ ಈ ಸಮಾವೇಶ ಆಯೋಜಿಸಲಾಗುತ್ತಿದೆ. ಅನೇಕ ಪೂರ್ವಭಾವಿ ಸಭೆಗಳನ್ನು ಬೆಳಗಾವಿ, ವಿಜಯಪುರ, ಬಬಲೇಶ್ವರದಲ್ಲಿ ನಡೆಸಲಾಗಿದೆ, ಸಾವಿರಾರು ಜನರು ಈ ಸಮಾವೇಶದಲ್ಲಿ ಭಾಗವಹಿಸುತ್ತಾರೆ, 500ಕ್ಕೂ ಹೆಚ್ಚು ಮಠಾಧೀಶರು ಭೌಗವಹಿಸಲಿದ್ದಾರೆ ಎಂದು ಸಮಾವೇಶದ ಸಂಚಾಲಕರಾದ ರವಿಕಾಂತ ಬಗಲಿ ವಿವರಣೆ ನೀಡಿದರು.

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಪ್ರಮುಖರಾದ ವಿಜುಗೌಡ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಚಂದ್ರಶೇಖರ ಕವಟಗಿ, ಭೀಮಾಶಂಕರ ಹದನೂರ, ರಾಜು ಬಿರಾದಾರ, ಪ್ರಭು ಹಿರೇಮಠ, ಮಲ್ಲು ಕನ್ನೂರ, ಈರಣ್ಣ ಶಿರಮಗೊಂಡ, ಉಮೇಶ ಕೋಳಕೂರ, ಕಲ್ಲಪ್ಪ ಕೊಡಬಾಗಿ ವಿಜಯ ಜೋಶಿ, ಸಿದ್ದು ಮಲ್ಲಿಕಾರ್ಜುನಮಠ, ವಿಕಾಸ ಪದಕಿ, ಬಾಲರಾಜ ರೆಡ್ಡಿ, ಸಂಪತ ಕಾಳೆ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಬಿಎ ಚುನಾವಣೆಗೆ ಕಾಂಗ್ರೆಸ್‌ ಅರ್ಜಿಗೆ ₹50 ಸಾವಿರ!
ನೀರಿನ ಬಿಲ್‌ ಬಾಕಿದಾರರಿಗೆ ಶುಭ ಸುದ್ದಿ : ಬಡ್ಡಿ, ದಂಡ ಪೂರ್ಣ ಮನ್ನಾ।