ಹಾಸನ: ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಆಯೋಜಿಸಲಾಗುತ್ತಿರುವ ‘ಹಿಂದೂ ಮಹಾಗಣಪತಿ-೨೦೨೬’ ಗಣೇಶೋತ್ಸವದ ಅಂಗವಾಗಿ ನಗರದಲ್ಲಿ ಮೃತ್ತಿಕಾ(ಮಣ್ಣು) ಪೂಜೆ ಹಾಗೂ ಪೀಠಪೂಜೆಯು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿಸಲಾಯಿತು. ಗಣೇಶೋತ್ಸವದ ಸಿದ್ಧತೆಗಳಿಗೆ ಚಾಲನೆ ನೀಡುವ ಅಂಗವಾಗಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಹಿಂದೂ ಸಮಾಜದ ಹಿರಿಯರು, ಮಹಿಳೆಯರು, ಸಂಘ ಪರಿವಾರದ ಪ್ರಮುಖರು ಹಾಗೂ ಹಿಂದೂ ಕಾರ್ಯಕರ್ತರು ಪಾಲ್ಗೊಂಡಿದ್ದರು. ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಮೃತ್ತಿಕಾ ಪೂಜೆ ಹಾಗೂ ಪೀಠಪೂಜೆ ನೆರವೇರಿಸಿ, ಗಣೇಶೋತ್ಸವವು ಶಾಂತಿ, ಸೌಹಾರ್ದತೆ ಹಾಗೂ ಭಕ್ತಿಭಾವದಿಂದ ನಡೆಯುವಂತಾಗಲಿ ಎಂದು ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರು ಹಾಗೂ ಕಾರ್ಯಕರ್ತರು ಗಣೇಶೋತ್ಸವದ ಮುಂದಿನ ಕಾರ್ಯಕ್ರಮಗಳ ಕುರಿತು ಚರ್ಚಿಸಿದರು.