ಕನ್ನಡಪ್ರಭ ವಾರ್ತೆ ಭಟ್ಕಳ
ಹೆಬಳೆಯಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿ, ಇಂದಿರಾ ಗಾಂಧಿಯವರು ಪ್ರಧಾನಿ ಆಗಿದ್ದ ಸಂದರ್ಭದಲ್ಲಿ ಏಕಾಂಗಿಯಾಗಿ ಪಾಕಿಸ್ತಾನದೊಂದಿಗೆ ಯುದ್ದ ಮಾಡಿ ಭಾರತವನ್ನು ಗೆಲ್ಲಿಸಿದ್ದಾರೆ ಎನ್ನುವುದನ್ನು ಬಿಜೆಪಿಯವರು ತಿಳಿದುಕೊಳ್ಳಬೇಕು. ಬಿಜೆಪಿಯವರದ್ದು ಬರೀ ಸುಳ್ಳು ಪ್ರಚಾರವಾಗಿದೆ. ಬಿಜೆಪಿಯವರು ಜಾತಿ ಜಾತಿ ಮಧ್ಯೆ ಬೆಂಕಿ ಹಚ್ಚಿ ರಾಜಕೀಯವಾಗಿ ಬೆಳೆಯುತ್ತಿದ್ದಾರೆ. ಆದರೆ, ಕಾಂಗ್ರೆಸ್ನಲ್ಲಿ ಯಾವುದೇ ರೀತಿಯ ಜಾತಿ, ಧರ್ಮ ಭೇದವಿಲ್ಲ. ಎಲ್ಲ ಜಾತಿ ಜನಾಂಗದವರಿಗೆ ನ್ಯಾಯ ಕೊಡುವ ಪಕ್ಷವಾಗಿದ್ದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದ ಅವರು ಬಿಜೆಪಿಯವರ ಸುಳ್ಳು ನಂಬಬೇಡಿ ಎಂದರು. ಅಂಜಲಿ ನಿಂಬಾಳ್ಕರರಿಗೆ ಉಡಿತುಂಬಿದ ಕಾರ್ಯಕರ್ತೆಯರು
ಕನ್ನಡಪ್ರಭ ವಾರ್ತೆ ಭಟ್ಕಳಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಅವರಿಗೆ ಬೆಳಕೆಯಲ್ಲಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಉಡಿ ತುಂಬಿ ಬಹುಮತದಿಂದ ಗೆದ್ದು ಬರುವಂತೆ ಹಾರೈಸಿದರು. ಅಂಜಲಿ ನಿಂಬಾಳ್ಕರ ಅವರಿಗೆ ಉಡಿ ತುಂಬುವ ಸಂದರ್ಭದಲ್ಲಿ ಸಚಿವ ಮಂಕಾಳ ವೈದ್ಯ ಅವರ ಪತ್ನಿ ಪುಷ್ಪಲತಾ ವೈದ್ಯ, ಪುತ್ರಿ ಬೀನಾ ವೈದ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಯನಾ ನಾಯ್ಕ, ಪ್ರಮುಖರಾದ ಜಯಲಕ್ಷ್ಮೀ ಗೊಂಡ, ಮೀನಾಕ್ಷಿ ನಾಯ್ಕ, ನಾಗವೇಣಿ ಗೊಂಡ ಸೇರಿದಂತೆ ಹಲವು ಮಹಿಳಾ ಪ್ರಮುಖರು, ಕಾರ್ಯಕರ್ತರಿದ್ದರು.
ಕನ್ನಡಪ್ರಭ ವಾರ್ತೆ ಭಟ್ಕಳ
ದರ್ಶನದ ಸಂದರ್ಭದಲ್ಲಿ ಶುಭ ಸಂಕೇತ ಎನ್ನುವಂತೆ ಮಹಾಸತಿ ದೇವಿ ತಲೆ ಮೇಲಿದ್ದ ಸಿಂಗಾರ ಪ್ರಸಾದ ಕೆಳಗೆ ಬಿದ್ದಿದೆ. ಅರ್ಚಕರು ಶುಭವಾಗಲಿ ಎಂದು ಹಾರೈಸಿ ಅಂಜಲಿ ನಿಂಬಾಳ್ಕರ್ ಸೇರಿದಂತೆ ಅವರ ಜೊತೆಗಿದ್ದವರಿಗೆ ತೀರ್ಥ ಪ್ರಸಾದ ವಿತರಿಸಿದರು.