ಕನ್ನಡಪ್ರಭ ವಾರ್ತೆ ಮದ್ದೂರು
ಶೋಭಾಯಾತ್ರೆ ಅಂಗವಾಗಿ ಪ್ರಮುಖ ಬೀದಿಗಳಲ್ಲಿ ಅಳವಡಿಸಿದ್ದ ಭಗವಾ ಧ್ವಜ ಯಾತ್ರೆಗೆ ಮೆರುಗು ನೀಡಿತು. ಪ್ರವಾಸಿ ಮಂದಿರದ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದಲ್ಲಿ ಮನ್ಮುಲ್ ನಿರ್ದೇಶಕ, ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ, ವಿಶ್ವ ಹಿಂದೂ ಪರಿಷತ್ತಿನ ಶಾಮಿಯಾನ ಗುರುಸ್ವಾಮಿ ಸೇರಿದಂತೆ ಸಮಿತಿ ಮುಖಂಡರು ಗೋಪೂಜೆ ಮಾಡುವ ಮೂಲಕ ಶೋಭಾಯಾತ್ರೆಗೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಎಸ್.ಪಿ.ಸ್ವಾಮಿ, ಹಿಂದೂಗಳನ್ನು ಒಗ್ಗೂಡಿಸುವ ಉದ್ದೇಶದಿಂದ ಯಾವುದೇ ಜಾತಿ, ಭೇದವಿಲ್ಲದೆ ಇಂದು ಸಮಾಜೋತ್ಸವ ಮತ್ತು ಶೋಭಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.ನಂತರ ಭಾರತ ಮಾತೆ ಭಾವಚಿತ್ರದೊಂದಿಗೆ ವೀರಗಾಸೆ ಮತ್ತು ಜಾನಪದ ಕಲಾತಂಡಗಳ ಆಕರ್ಷಕ ಪ್ರದರ್ಶನದದೊಂದಿಗೆ ಹಳೇ ಎಂ.ಸಿ.ರಸ್ತೆ ಮೂಲಕ ಪೇಟೆ ಬೀದಿ, ಕೋಟೆ ಬೀದಿ ಸೇರಿದಂತೆ ಹಳೇ ಬಸ್ ನಿಲ್ದಾಣದವರೆಗೆ ಶೋಭಾಯಾತ್ರೆ ನಡೆಸಲಾಯಿತು. ಶೋಭಾಯಾತ್ರೆಯಲ್ಲಿ ಸಮಾಜೋತ್ಸವ ಆಯೋಜನ ಸಮಿತಿಯ ಅವಿನಾಶ್, ತಾಲೂಕು ಪ್ರಚಾರಕ ಅರವಿಂದ್, ತಾಲೂಕು ಬಿಜೆಪಿ ಅಧ್ಯಕ್ಷ ಶಿವದಾಸ ಸತೀಶ್, ಮುಖಂಡರಾದ ಕೆ.ಎಸ್.ಮಲ್ಲಿಕಾರ್ಜುನ್, ಸುನಿಲ್ ಕುಮಾರ್, ಎಂ.ಜೆ.ಮಧುಕುಮಾರ್, ಎಂ.ಎಸ್.ಜಗನ್ನಾಥ್, ಎಂ.ಎಸ್.ವೀರಭದ್ರಸ್ವಾಮಿ, ಜಿ.ಸಿ.ಮಹೇಂದ್ರ, ಗೆಜ್ಜಲಗೆರೆ ಶೇಖರ, ಕೆ.ಕೃಷ್ಣ, ಮನು ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.
ಕನ್ನಡಪ್ರಭ ವಾರ್ತೆ ಮಂಡ್ಯ
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅಂದು ಮಧ್ಯಾಹ್ನ ೪.೩೦ರಂದು ನಡೆಯುವ ಕಾರ್ಯಕ್ರಮದಲ್ಲಿ ಶ್ರೀರಾಮಯೋಗೀಶ್ವರ ಮಠದ ಶ್ರೀ ಶಿವಬಸವ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಚಾಮರಾಜನಗರ ಜಿಲ್ಲೆ, ಮಾರ್ಟಳ್ಳಿ ಹನೂರಿನ ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ, ನಿವೃತ್ತ ಯೋಧ ಆರ್.ಲೂಯಿಸ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದರು.
ಶಿವಳ್ಳಿ ಸುತ್ತಮುತ್ತಲ ಎಲ್ಲ ಗ್ರಾಮಗಳಿಂದಲೂ ಹಿಂದೂ ಕಾರ್ಯಕರ್ತರು ಭಾಗವಹಿಸುವರು. ಒಂದು ಸಾವಿರಕ್ಕೂ ಹೆಚ್ಚು ಮಂದಿಗೆ ಆಸನದ ವ್ಯವಸ್ಥೆ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ೫ ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಮುಖಂಡರಾದ ಎಸ್.ಕೆ. ನಾಗರಾಜು, ವೇಣುಗೋಪಾಲ್, ಕುಮಾರ್, ವೆಂಕಟೇಶ್ ಅವರು ಗೋಷ್ಠಿಯಲ್ಲಿದ್ದರು.