ಕನ್ನಡಪ್ರಭ ವಾರ್ತೆ ಮೈಸೂರು
ಚಾಮುಂಡಿಬೆಟ್ಟಕ್ಕೆ ಭಾನುವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ದೇವಾಲಯ ಹಿಂದೂಗಳ ದೇವಾಲಯ ಅಲ್ಲ ಎಂದಿದ್ದಾರೆ. ಹಿಂದೂಗಳದ್ದಲ್ಲ ಎಂದರೆ ಮತ್ಯಾರದ್ದು? ನಿಮಗೆ ಧೈರ್ಯ, ಗಂಡಸ್ತನ ಇದ್ದರೆ ಮಸೀದಿ ಮುಂದೆ ನಿಂತು ಇದು ಮುಸ್ಲಿಮರದ್ದಲ್ಲ ಎಂದು ಹೇಳ್ತೀರಾ ಎಂದು ಪ್ರಶ್ನಿಸಿದರು.
ಪದೇ ಪದೇ ಹಿಂದೂ ದೇವಾಲಯಗಳ ಟಾರ್ಗೆಟ್ ಯಾಕೆ? ಚುನಾವಣೆ ಬಂದಾಗ ಮತ ರಾಜಕೀಯ ಮಾಡಿ. ಚುನಾವಣೆ ವೇಳೆ ಮುಸಲ್ಮಾನರ ಮೂಗಿಗೆ ತುಪ್ಪ ಸುರಿಯಿರಿ. ಆದರೆ, ಈಗ ಯಾಕೆ ಮತ ಓಲೈಕೆ ರಾಜಕಾರಣ ಎಂದು ಅವರು ಕಿಡಿಕಾರಿದರು.ಸೆ.1ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೆ ಎಲ್ಲ ಹಿಂದೂಗಳು ಬರಬೇಕು. ಚಾಮುಂಡಿಬೆಟ್ಟದ ಬಗ್ಗೆ ಪದೇ ಪದೇ ಮಾತನಾಡಿದರೆ ಚಾಮುಂಡೇಶ್ವರಿ ಚಲೋ ಕೂಡ ಮಾಡ್ತೀವಿ. ಟೂಲ್ ಕಿಟ್ ಆಗಿ ಚಾಮುಂಡೇಶ್ವರಿ ದೇವಾಲಯ ಬಳಸಿದರೆ ಹಿಂದೂಗಳು ಸಹಿಸಲ್ಲ. ಚಾಮುಂಡೇಶ್ವರಿ ತಾಯಿಯಿಂದಾನೇ ಕಾಂಗ್ರೆಸ್ ಅವನತಿ ಪ್ರಾರಂಭವಾಗುತ್ತದೆ ಎಂದು ಎಚ್ಚರಿಸಿದರು.
ಪರದೆಯ ಹಿಂದೆ ಕೆಲಸ ಮಾಡಿದವರು ಯಾರು ಎಂಬುದು ಬಹಿರಂಗ ಆಗಬೇಕು. ಧರ್ಮಸ್ಥಳ ಪ್ರಕರಣದಲ್ಲಿ ವಿದೇಶದಿಂದ ಹಣಕಾಸಿನ ನೆರವು ಆಗಿದೆ. ಆದ್ದರಿಂದ ಸತ್ಯಾಂಶ ಹೊರಬರಬೇಕಾದರೆ ಎನ್ಐಎ ಅಥವಾ ಸಿಬಿಐ ತನಿಖೆಗೆ ಪ್ರಕರಣವನ್ನು ಒಪ್ಪಿಸಲೇಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.ತುಂಗಭದ್ರಾ ನೀರಿಂದ ಮಂಜುನಾಥನ ಅಭಿಷೇಕ ಮಾಡುವೆ; ಜನಾರ್ದನರೆಡ್ಡಿ:ಇತ್ತೀಚೆಗೆ ಧರ್ಮಸ್ಥಳದಲ್ಲಿ ನಡೆದ ಘಟನೆಯಿಂದ ಭಕ್ತರಲ್ಲಿ ಅಶಾಂತಿ ಮೂಡಿದೆ. ಈ ಕಾರಣಕ್ಕೆ ತುಂಗಭದ್ರಾ ನದಿಯ ನೀರಿನಿಂದ ಧರ್ಮಸ್ಥಳ ಮಂಜುನಾಥನಿಗೆ ಅಭಿಷೇಕ ನೆರವೇರಿಸಲಾಗುವುದು ಎಂದು ಶಾಸಕ ಗಾಲಿ ಜಾನರ್ದನ ರೆಡ್ಡಿ ಹೇಳಿದರು.
ಗಂಗಾವತಿ ತಾಲೂಕಿನ ಆನೆಗೊಂದಿಯ ಚಿಂತಾಮಣಿ ಬಳಿ ತುಂಗಭದ್ರಾ ನದಿಯಲ್ಲಿ ಗಂಗೆ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ದೇಶದಲ್ಲಿರುವ ಹಿಂದೂ ಧಾರ್ಮಿಕ ಕೇಂದ್ರಗಳು ಸೇರಿದಂತೆ ದೇವಾಲಯಗಳಿಗೆ ಅಪಪ್ರಚಾರ ನಿರಂತರವಾಗಿ ನಡೆಯುತ್ತಿದೆ ಎಂದರು. ಬಳ್ಳಾರಿ ಮೂಲದ ಅನ್ಯಧರ್ಮದ ವ್ಯಕ್ತಿಯೊಬ್ಬ ಧರ್ಮಸ್ಥಳ ಕ್ಷೇತ್ರದ ಮೇಲೆ ಅಪಪ್ರಚಾರ ನಡೆಸಲು ಮುಂದಾಗಿದ್ದಾನೆ. ಅವನಿಗೆ ಕೆಲವರು ಕೈ ಜೋಡಿಸಿದ್ದಾರೆ. ಇದಕ್ಕೆ ಮುಸುಕುಧಾರಿಗಳು ಬೆಂಬಲವಿದೆ. ದೆಹಲಿ ಮಟ್ಟದ ಐಎಎಸ್ ಅಧಿಕಾರಿಗಳು, ಶಶಿಕಾಂತ ಸೆಂಥಿಲ್ ಜತೆಗೆ ಹಲವರು ಭಾಗಿಯಾಗಿದ್ದಾರೆ. ಈ ಕುರಿತು ಎನ್ಐಎಯಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಮೈಸೂರು ದಸರಾ ಉದ್ಘಾಟನೆ ವಿಚಾರವಾಗಿ ಬಾನು ಮುಸ್ತಾಕ್ ಹೂ ಮುಡಿದು, ಪೂಜೆ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಿದರೆ ಅಭ್ಯಂತರ ಇಲ್ಲ ಎಂದರು.