ಮಂಗಳೂರು: ದೆಹಲಿಯ ಜಂತರ್ಮಂತರ್ನಲ್ಲಿ ಪ್ರತಿಭಟನೆ ವೇಳೆ ಸಂಸದ ಪಪ್ಪು ಯಾದವ್ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸನಾತನ ಧರ್ಮ ಮತ್ತು ಅಯೋಧ್ಯೆಯ ರಾಮಮಂದಿರ ಬಗ್ಗೆ ಅವಹೇಳನ ಮಾಡಿರುವುದನ್ನು ಖಂಡಿಸಿ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ದ.ಕ. ಮಂಗಳೂರು ಇದರ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.ಪ್ರತಿಭಟನೆಯನ್ನುದ್ದೇಶಿಸಿ ಕೇರಳ ಹಿಂದು ಐಕ್ಯ ವೇದಿಕೆ ಮುಖಂಡ ಕುಂಟಾರು ರವೀಶ್ ತಂತ್ರಿ ಮಾತನಾಡಿ, ದೇಶದಲ್ಲಿ ಧರ್ಮ ಜಾಗೃತಿಯಾಗುವುದನ್ನು ಸಹಿಸಲು ಸಾಧ್ಯವಾಗದೆ ಕೆಲವರು ಸಣ್ಣಪುಟ್ಟ ಕಾರಣಗಳನ್ನು ಹಿಡಿದುಕೊಂಡು ಧರ್ಮನಿಂದನೆ ಮಾಡುತ್ತಿದ್ದಾರೆ. ಪಪ್ಪು ಯಾದವ್ ಸಂಸದನಾಗಲು ಯೋಗ್ಯವಲ್ಲದ ವ್ಯಕ್ತಿ. ಯಾರನ್ನೋ ಮೆಚ್ಚಿಸಲು ಹಿಂದು ಧರ್ಮವನ್ನು ನಿರಂತರವಾಗಿ ನಿಂದನೆ ಮಾಡುತ್ತಿದ್ದಾರೆ ಎಂದರು.
ಪ್ರತಿಭಟನಾಕಾರರು ಪಪ್ಪು ಯಾದವ್ ಮತ್ತು ರಾಹುಲ್ ಗಾಂಧಿಯ ಭಾವಚಿತ್ರವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.