ರಾಜ್ಯದ ಆರ್ಥಿಕತೆಗೆ ಅಮೂಲ್ಯ ಕೊಡುಗೆ ನೀಡುವ ಕರಾವಳಿ ಜಿಲ್ಲೆಯ ಮೀನುಗಾರಿಕೆ ಹಾಗೂ ಬಂದರು ಅಭಿವೃದ್ಧಿಗೆ ಯಾವುದೇ ಅನುದಾನ ನೀಡದೆ, ಉಡುಪಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು, ಬ್ರಹ್ಮಾವರ ಕೃಷಿ ಕಾಲೇಜು ಘೋಷಣೆಯ ಭರವಸೆಯೂ ಈಡೇರಿಲ್ಲ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ್, ಹೈಕೋರ್ಟ್ ನ್ಯಾಯವಾದಿ ಶ್ರೀನಿಧಿ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಉಡುಪಿ
ರಾಹುಕಾಲ ಎಂಬ ಕಾರಣಕ್ಕೆ ನಿಗದಿತ ಸಮಯಕ್ಕಿಂತ 45 ನಿಮಿಷ ಬೇಗ ಬಜೆಟ್ ಆರಂಭಿಸಿದ ಸಿಎಂ, ರಾಜ್ಯದ ಹಿಂದೂಗಳಿಗೆ ಮೋಸ ಮಾಡಿದ್ದಲ್ಲದೇ ಉಡುಪಿ ಜಿಲ್ಲೆಗೂ ಯಾವ ಯೋಜನೆಗಳನ್ನು ಘೋಷಿಸಿಲ್ಲ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ್, ಹೈಕೋರ್ಟ್ ನ್ಯಾಯವಾದಿ ಶ್ರೀನಿಧಿ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.ರಾಜ್ಯದ ಆರ್ಥಿಕತೆಗೆ ಅಮೂಲ್ಯ ಕೊಡುಗೆ ನೀಡುವ ಕರಾವಳಿ ಜಿಲ್ಲೆಯ ಮೀನುಗಾರಿಕೆ ಹಾಗೂ ಬಂದರು ಅಭಿವೃದ್ಧಿಗೆ ಯಾವುದೇ ಅನುದಾನ ನೀಡದೆ, ಉಡುಪಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು, ಬ್ರಹ್ಮಾವರ ಕೃಷಿ ಕಾಲೇಜು ಘೋಷಣೆಯ ಭರವಸೆಯೂ ಈಡೇರಿಲ್ಲ. ಉಡುಪಿ ಜಿಲ್ಲಾಸ್ಪತ್ರೆ ಕಾಮಗಾರಿ ಸೇರಿದಂತೆ ಪ್ರಾಕೃತಿಕ ವಿಕೋಪ ಪರಿಹಾರ ಮೊತ್ತ ಏರಿಕೆ, ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ, ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ಅನುದಾನದ ಬಗ್ಗೆ ಯಾವುದೇ ಘೋಷಣೆ ಮಾಡದೇ ಸಿದ್ದರಾಮಯ್ಯನವರು ತಮ್ಮ ದಾಖಲೆಯ 16ನೇ ಬಜೆಟ್ನಲ್ಲಿ ಕಾಂಗ್ರೆಸ್ ಶಾಸಕರಿಲ್ಲ ಎಂಬ ಕಾರಣಕ್ಕೆ ಜಿಲ್ಲೆಯನ್ನು ನಿರ್ಲಕ್ಷ್ಯಿಸಿರುವುದು ಸ್ಪಷ್ಟವಾಗಿದೆ.ವಕ್ಫ್ ಬೋರ್ಡ್ಗೆ 150 ಕೋಟಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ 1000 ಕೋಟಿ, ಅಲ್ಪಸಂಖ್ಯಾತ ಮಹಿಳೆಯರ ಸ್ವಯಂ ರಕ್ಷಣೆಗೆ ಕ್ರಮ, ತಾಲೂಕುಗಳಲ್ಲಿ ಅಲ್ಪಸಂಖ್ಯಾತರ ಸಭಾಂಗಣ ನಿರ್ಮಾಣಕ್ಕೆ 50 ಲಕ್ಷ ಅನುದಾನ, 2 ಕೋಟಿ ವರೆಗಿನ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಸೇರಿದಂತೆ ಒಂದು ಸಮುದಾಯವನ್ನು ಓಲೈಸುವ ಮೂಲಕ ತನ್ನ ಓಟ್ ಬ್ಯಾಂಕ್ ಅನ್ನು ಭದ್ರಪಡಿಸುವ ಹಳೆ ಚಾಳಿಯನ್ನು ಬಜೆಟ್ನಲ್ಲಿ ಮುಂದುವರಿಸಿರುವುದು ವಿಪರ್ಯಾಸವೇ ಸರಿ.ಕಳೆದ ಬಾರಿ ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಕೇವಲ ಪತ್ರಕ್ಕೆ ಸೀಮಿತವಾದಂತೆ ಈ ಬಾರಿಯ ಬಜೆಟ್ನಲ್ಲಿನ ಯೋಜನೆಗಳು ಕೇವಲ ಕಾಗದಪತ್ರಕ್ಕೆ ಸೀಮಿತಗೊಳ್ಳದಿರಲಿ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಟೀಕಿಸಿದ್ದಾರೆ.ರಾಜ್ಯ ಹಾಗೂ ರಾಷ್ಟ್ರದ ಜನತೆಗೆ ಧಾರ್ಮಿಕ ನಂಬಿಕೆಗೆ ಸದಾ ಘಾಸಿಗೊಳಿಸುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಹುಕಾಲದ ನೆಪವೊಡ್ಡಿ ಬಜೆಟ್ ಅನ್ನು ನಿಗದಿತ ಅವಧಿಗೂ ಮುನ್ನ ಆರಂಭ ಮಾಡಿದ ಬಜೆಟ್ನಲ್ಲಿ ರಾಜ್ಯದ ಜನತೆಗೆ ರಾಹುಕಾಲ ಮಾತ್ರ ತಪ್ಪಿಸಿದ್ದು, ಆದರೆ ಕಂಟಕವನ್ನು ಇಡೀ ರಾಜ್ಯದ ಮೇಲೆ ಹೊರಿಸಿರುವುದು ಸಿದ್ದರಾಮಯ್ಯನವರ ಸಾಧನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.