ಹಿಂದೂಗಳು ಬಸವಣ್ಣನನ್ನು ವಿಶ್ವಗುರುವಾಗಲು ಬಿಡುತ್ತಿಲ್ಲ: ಜ್ಞಾನ ಪ್ರಕಾಶ ಸ್ವಾಮೀಜಿ

KannadaprabhaNewsNetwork |  
Published : Nov 11, 2025, 03:15 AM IST
ಸಮಾರಂಭದಲ್ಲಿ ಸೇರಿದ ಜನಸ್ತೋಮ. | Kannada Prabha

ಸಾರಾಂಶ

ಹಿಂದೂಗಳು ಬಸವಣ್ಣನನ್ನು ವಿಶ್ವಗುರುವಾಗಲು ಬಿಡುತ್ತಿಲ್ಲ. ಬಸವ-ಅಂಬೇಡ್ಕರರ ಬೀಜವನ್ನು ಮನೆ ಮನದಲ್ಲಿ ಬಿತ್ತಿದರೆ ಹಿಂದೂತ್ವದ ಬೀಜ ನಾಶವಾಗುವುದು ಎಂದು ಮೈಸೂರು ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಹೇಳಿದರು.

ಕನ್ನಡಪ್ರಭ ವಾರ್ತೆ ಹುನಗುಂದ

ಹಿಂದೂಗಳು ಬಸವಣ್ಣನನ್ನು ವಿಶ್ವಗುರುವಾಗಲು ಬಿಡುತ್ತಿಲ್ಲ. ಬಸವ-ಅಂಬೇಡ್ಕರರ ಬೀಜವನ್ನು ಮನೆ ಮನದಲ್ಲಿ ಬಿತ್ತಿದರೆ ಹಿಂದೂತ್ವದ ಬೀಜ ನಾಶವಾಗುವುದು ಎಂದು ಮೈಸೂರು ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಹೇಳಿದರು.

ಕೂಡಲಸಂಗಮ ಸಂಗಮೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಬಸವ-ಭೀಮ ಸಂಗಮ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮನುವಾದಕ್ಕೆ ಬೆಂಕಿ ಹಚ್ಚಿ, ಮಟ್ಟಹಾಕಿದ ಕ್ರಾಂತಿ ಭೂಮಿ ಕೂಡಲಸಂಗಮದಲ್ಲಿ ಬಸವ-ಭೀಮ ಸಂಗಮ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅರ್ಥಪೂರ್ಣ. ಬಂಧುತ್ವಕ್ಕೆ ಬೆಂಕಿ ಹಚ್ಚಿದ ಹಿಂದೂತ್ವ ಬೇಡ, ಬಂಧುತ್ವದ ಇಲ್ಲದ ಹಿಂದೂತ್ವ ದೇಶದ ಭೂಪಟ ಅಪಾಯಕಾರಿ. ಬಂಧುತ್ವದ ಭೂಮಿಯಲ್ಲಿ ಹಿಂದುತ್ವ ಬಿತ್ತಲು ಸಾಧ್ಯವಿಲ್ಲ, ಬಿತ್ತಲು ಬಿಡುವುದಿಲ್ಲ. ಹಿಂದುತ್ವದಲ್ಲಿ ಏನು ಇಲ್ಲ, ಅದು ಕೇವಲ ಮತಬ್ಯಾಂಕ್ ಆಗಿದೆ. ಬಸವ-ಭೀಮರ ಸಂಗವಾದರೆ ವಿಧಾನಸೌಧ, ಕೆಂಪುಕೋಟೆ ಬಸವ-ಭೀಮರ ಪಾಲಾಗುವುದು. ರಾಜ್ಯದ ರಾಜಕೀಯ, ಆರ್ಥಿಕ, ಸಾಮಾಜಿಕ ಬದಲಾವಣೆಗಾಗಿ ಈ ಕಾರ್ಯಕ್ರಮ ಹಮ್ಮಿಕೊಂಡಿದೆ. ಬಸವಣ್ಣನ ಅನುಯಾಯಿಗಳ ಹಿಂದೂತ್ವದ ಬೀಜ ನಾವಲ್ಲ, ನಾವು ಬಂಧುತ್ವದ ಬೀಜಗಳು ಎಂದು ಪ್ರತಿಜ್ಞೆ ಮಾಡಿ. ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ ಮಾತನಾಡಿ, ಜೈನ, ಲಿಂಗಾಯತ, ಬೌದ್ಧ ಧರ್ಮಗಳು, ಅವೈದಿಕ ಸಂಸ್ಕತಿ, ಪರಂಪರೆಯನ್ನು ಕೃಷ್ಣಾ ನದಿಯ ದಡದಲ್ಲಿ ಬೆಳೆದು ಬಂದಿದ್ದರಿಂದ ವೈದಿಕರು ಕೃಷ್ಣಾ ನದಿಯನ್ನು ಪವಿತ್ರ ನದಿಯ ಸ್ಥಾನದಲ್ಲಿ ಇಡಲಿಲ್ಲ. ವೈದಿಕರು ವೇದಗಳ ಮೂಲಕ ಸಮಾಜ ಒಡೆಯುವ ಕಾರ್ಯ ಮಾಡಿದರು, ಸಮಾನತೆಯ ಮೂಲಕ ಸಮಾಜ ಕಟ್ಟುವ ಕಾರ್ಯ ಬಸವಣ್ಣನವರು ಮಾಡಿದರು. ಬಲಪಂಥಿಯ ಸಿದ್ದಾಂತ ರಾಜಕಾರಣದಿಂದ ಇಂದು ಬಸವ ಭೀಮರ ವಿಚಾರಗಳು ಭಾವಚಿತ್ರಕ್ಕೆ ಸಿಮೀತಗೊಂಡಿದ್ದು, ಚಿಂತನೆಯಲ್ಲಿ ಬರುತ್ತಿಲ್ಲ ಬಹುತ್ವ ಭಾರತದಲ್ಲಿ ಬಸವ-ಭೀಮರ ವಿಚಾರಗಳನ್ನು ಭಿತ್ತಲು ಈ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.

ತಂಗಡಗಿಯ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ ಸಾನ್ನಿಧ್ಯ ವಹಿಸಿದರು. ಸಮಾರಂಭದಲ್ಲಿ ಮುಖಂಡರಾದ ಶರಣಪ್ಪ ಆಗಮದಿಹಾಳ, ಎಂ.ಗೋಪಿನಾಥನ, ಮಹಾಂತೇಶ ಅವಾರಿ, ಎಸ್.ಎಂ.ಪುರಾಣಿಕ, ಗಂಗಣ್ಣ ಬಾಗೇವಾಡಿ, ಶಿವಾನಂದ ಕಂಠಿ, ವಿಜಯಮಹಾಂತೇಶ ಗದ್ದನಕೇರಿ, ನಾಗರಾಜ ನಾಡಗೌಡ, ಶೇಖರಗೌಡ ಗೌಡರ ಮುಂತಾದವರು ಇದ್ದರು.ಬೇಧರಹಿತ ಸಮಾಜ ಕಟ್ಟುವುದು ಇಂದಿನ ತುರ್ತು ಅಗತ್ಯ. ಧರ್ಮಕ್ಕೆ ಮಾನವೀಯತೆ ಅಗತ್ಯ. ದಯೆ, ಜನಪರಕಾಳಜಿ, ಸಮಾನತೆಯಂಥ ತತ್ವಗಳ ನೆಲೆಗಟ್ಟಿನ ಮೇಲೆ ಬಸವಣ್ಣನ ವಿಚಾರಗಳಿದ್ದು, ಅದರ ಅಳವಡಿಕೆಯೇ ಭಾರತ ಸಂವಿಧಾನ. ಬಸವ-ಭೀಮರ ವಿಚಾರಧಾರೆಯ ಬಂಧುತ್ವ ಅನುಕರಣೆ ಇರಲಿ. ಅಂದಾಗ ಸಮಾನತೆಯ ಸೌಖ್ಯ ಸಮಾಜ ನಿರ್ಮಾಣ ಆಗಲು ಸಾಧ್ಯ. ಈ ಅಭಿಯಾನ ರಾಜ್ಯಾದ್ಯಂತ ನಡೆಯುತ್ತದೆ. ಜನಸ್ಪಂದನೆ ಇದ್ದರೆ ಸಾಕು, ಮೂಲಭೂತವಾದಿಗಳ ಮಟ್ಟಹಾಕಲು ಮುಂದಾಗೋಣ.

- ವಿಜಯಾನಂದ ಕಾಶಪ್ಪನವರ ಅಧ್ಯಕ್ಷರು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ