ಕಾಂಗ್ರೆಸ್‌ ಸರ್ಕಾರಕ್ಕೆ ಹಿಂದೂಗಳೇ ಟಾರ್ಗೆಟ್‌: ರೇಣುಕಾಚಾರ್ಯ

KannadaprabhaNewsNetwork |  
Published : Jan 08, 2024, 01:45 AM IST
7ಕೆಡಿವಿಜಿ5, 6-ದಾವಣಗೆರೆಯಲ್ಲಿ ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಮುಖಂಡರಾದ ಡಾ.ಟಿ.ಜಿ.ರವಿಕುಮಾರ, ಚಂದ್ರಶೇಖರ ಪೂಜಾರ, ಶಿವಪ್ರಕಾಶ, ಕಲ್ಲಿಂಗಪ್ಪ ಇತರರು ಇದ್ದರು.  | Kannada Prabha

ಸಾರಾಂಶ

ರಾಜ್ಯದಲ್ಲಿ ಹಿಂದೂಗಳ, ಕರ ಸೇವಕರನ್ನೇ ಸಿದ್ದರಾಮಯ್ಯ ಸರ್ಕಾರ ಗುರಿ ಮಾಡುತ್ತಿದೆ. ಇದು ರೈತ ವಿರೋಧಿ, ಹಿಂದು ವಿರೋಧಿ, ತುಘಲಕ್‌ ಸರ್ಕಾರವಾಗಿದೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ದಾಂಧಲೆ, ಗಲಭೆ ಪ್ರಕರಣದ ಆರೋಪಿಗಳ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ತಮ್ಮ ಬ್ರದರ್ಸ್‌ ಎನ್ನುತ್ತಾರೆ. ಪೊಲೀಸ್ ಠಾಣೆ, ವಾಹನಗಳು, ಜನ ಸಾಮಾನ್ಯರ ಮನೆಗಳಿಗೆ ನುಗ್ಗಿದವರು, ಮನೆ, ವಾಹನಗಳಿಗೆ ಬೆಂಕಿ ಹಚ್ಚಿದ್ದ ಆರೋಪಿಗಳ ಮೇಲಿನ ಕೇಸ್ ಹಿಂಪಡೆಯಲು ಮುಂದಾಗಿದ್ದಾರೆ.

ಹಿಂದೂಗಳ ಬಂಧನ ಮುಂದುವರಿಸಿದರೆ ಬೀದಿಗಳಿದು ಸರ್ಕಾರದ ವಿರುದ್ಧ ರಾಜ್ಯವ್ಯಾಪಿ ಹೋರಾಟ

ಕನ್ನಡಪ್ರಭ ವಾರ್ತೆ ದಾವಣಗೆರೆ

ಹಿಂದೂಗಳು, ಕರ ಸೇವಕರನ್ನೇ ಗುರಿಯಾಗಿಸಿಕೊಂಡ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದೂಗಳ ಬಂಧಿಸುವ ಕೆಲಸ ಮಾಡುತ್ತಿದ್ದು, ಈ ಸರ್ಕಾರಕ್ಕೆ ಹಿಂದೂಗಳೇ ಟಾರ್ಗೆಟ್ ಆಗಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್‌.ಅಶೋಕ್‌ ಹೋರಾಟ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಹಿಂದೂ ಪರ ಕಾರ್ಯಕರ್ತ ಶ್ರೀಕಾಂತ ಪೂಜಾರಿ ಪರ ಹೋರಾಟ ತೀವ್ರಗೊಂಡ ನಂತರ ಬಿಡುಗಡೆ ಮಾಡಲಾಗಿದೆ ಎಂದರು.

ರಾಜ್ಯದಲ್ಲಿ ಹಿಂದೂಗಳ, ಕರ ಸೇವಕರನ್ನೇ ಸಿದ್ದರಾಮಯ್ಯ ಸರ್ಕಾರ ಗುರಿ ಮಾಡುತ್ತಿದೆ. ಇದು ರೈತ ವಿರೋಧಿ, ಹಿಂದು ವಿರೋಧಿ, ತುಘಲಕ್‌ ಸರ್ಕಾರವಾಗಿದೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ದಾಂಧಲೆ, ಗಲಭೆ ಪ್ರಕರಣದ ಆರೋಪಿಗಳ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ತಮ್ಮ ಬ್ರದರ್ಸ್‌ ಎನ್ನುತ್ತಾರೆ. ಪೊಲೀಸ್ ಠಾಣೆ, ವಾಹನಗಳು, ಜನ ಸಾಮಾನ್ಯರ ಮನೆಗಳಿಗೆ ನುಗ್ಗಿದವರು, ಮನೆ, ವಾಹನಗಳಿಗೆ ಬೆಂಕಿ ಹಚ್ಚಿದ್ದ ಆರೋಪಿಗಳ ಮೇಲಿನ ಕೇಸ್ ಹಿಂಪಡೆಯಲು ಮುಂದಾಗಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಪಸಂಖ್ಯಾತರಿಗೆ ₹10 ಸಾವಿರ ಕೋಟಿ ಅನುದಾನ ಘೋಷಿಸುವ ಸಿದ್ದರಾಮಯ್ಯ ಸರ್ಕಾರಕ್ಕೆ ಹಿಂದೂಗಳ ಆರಾಧನಾ ಕೇಂದ್ರಗಳಾದ ದೇವಾಲಯ, ಮುಜರಾಯಿ ಇಲಾಖೆ ದೇವಸ್ಥಾನಗಳಿಗೆ ಕೊಡಲು ಹಣವಿಲ್ಲ. ತೀವ್ರ ಬರಕ್ಕೆ ತುತ್ತಾಗಿರುವ ರಾಜ್ಯದ ರೈತರಿಗೆ ಬರ ಪರಿಹಾರ ನೀಡಲು, ಬರ ಪರಿಹಾರ ಕಾರ್ಯ ಕೈಗೊಳ್ಳಲು ಹಣ ಇಲ್ಲವಂತೆ ಎಂದು ವ್ಯಂಗ್ಯವಾಡಿದರು.

ರಾಜ್ಯವ್ಯಾಪಿ ಬೀದಿಗಿಳಿದು ಹೋರಾಟ:

ಗೋಧ್ರಾ ಘಟನೆ ಮರುಕಳಿಸುತ್ತದೆನ್ನುವ ಮೂಲಕ ರಾಜ್ಯದ ಜನತೆಯಲ್ಲಿ ಭಯ ಹುಟ್ಟು ಹಾಕುವ ಕೆಲಸ ಬಿ.ಕೆ.ಹರಿಪ್ರಸಾದ್ ಮಾಡುತ್ತಿದ್ದಾರೆ. ಹಿಂದೂಗಳ ಬಂಧಿಸಿದರೆ, ಹಿಂದೂಗಳು, ಕರ ಸೇವಕರನ್ನೇ ಗುರಿಯಾಗಿಸಿ ತಂತ್ರ, ಕುತಂತ್ರಗಳನ್ನು ಕಾಂಗ್ರೆಸ್ ಸರ್ಕಾರ ಮುಂದುವರಿಸಿದರೆ ನಮ್ಮ ಕುಟುಂಬಗಳ ಸಮೇತ ಬೀದಿಗಳಿದು ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ. ರಾಜ್ಯದಲ್ಲೇನು ಷರಿಯಾ ಕಾನೂನು ಜಾರಿಗೊಳಿಸಲು ಹೊರಟಿದ್ದೀರಾ? ನಾವು ಇಡೀ ರಾಜ್ಯವ್ಯಾಪಿ ನಿಮ್ಮ ವಿರುದ್ಧ ಬೀದಿಗಿಳಿದು ಹೋರಾಟ ನಡೆಸುತ್ತೇವೆ. ಕರ ಸೇವಕರು, ಶ್ರೀರಾಮನ ಶಾಪವು ಕಾಂಗ್ರೆಸ್ ಸರ್ಕಾರಕ್ಕೆ ತಟ್ಟಲಿದೆ. ಹಿಂದೂಗಳ ಶಾಪವೇ ಕಾಂಗ್ರೆಸ್ ಸರ್ಕಾರದ ಪತನಕ್ಕೂ ಕಾರಣವಾಗಲಿದೆ. ಎಂದು ಆಕ್ರೋಶ ಹೊರ ಹಾಕಿದರು.

ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ, ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ.ಟಿ.ಜಿ.ರವಿಕುಮಾರ, ಹರಿಹರದ ಬಿಜೆಪಿ ಮುಖಂಡ ಚಂದ್ರಶೇಖರ ಪೂಜಾರ, ಪಾಲಿಕೆ ಸದಸ್ಯ ಆರ್.ಎಲ್‌.ಶಿವಪ್ರಕಾಶ, ಕಕ್ಕರಗೊಳ್ಳ ಕೆ.ಪಿ.ಕಲ್ಲಿಂಗಪ್ಪ, ರಾಜು ವೀರಣ್ಣ, ಅಣಜಿ ಬಸವರಾಜ, ಪ್ರವೀಣ ಜಾಧವ್ ಇತರರಿದ್ದರು.

ಸರ್ಕಾರಕ್ಕೆ ಪಾಠ ಕಲಿಸಲು ಜನರು ಕಾತರ

ಭೀಕರ ಬರ ಇದ್ದರೂ, ರೈತರಿಗೆ ಕೇವಲ 2 ಸಾವಿರ ರು. ಪರಿಹಾರ ನೀಡುವ ಮೂಲಕ ಕಾಂಗ್ರೆಸ್ ಸರ್ಕಾರವು ಅನ್ನದಾತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ. ಅಲ್ಪಸಂಖ್ಯಾತರ ತುಷ್ಟೀಕರಣ, ಓಲೈಕೆಯಲ್ಲಿ ತೊಡಗಿರುವ ಸಿದ್ದರಾಮಯ್ಯ, ಡಿಕೆ ಶಿವಕುಮಾರ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲು ರಾಜ್ಯದ ಜನತೆ ಇದಿರು ನೋಡುತ್ತಿದ್ದಾರೆ.

ಎಂ.ಪಿ.ರೇಣುಕಾಚಾರ್ಯ, ಮಾಜಿ ಸಚಿವ

............

ಕಾಂಗ್ರೆಸ್ ಸರ್ಕಾರ ವಿರುದ್ಧ ಇಂದು ಪ್ರತಿಭಟನೆ, ಮುತ್ತಿಗೆ

ಜ.8ರಂದು ಬೆಳಿಗ್ಗೆ 10.30ಕ್ಕೆ ಪಕ್ಷಾತೀತವಾಗಿ ಭಜನೆ ಮಾಡುವ ಮೂಲಕ ಹೋರಾಟ ಹಮ್ಮಿಕೊಂಡಿದ್ದೇವೆ. ದಾವಣಗೆರೆಯ ಪಿಜೆ ಬಡಾವಣೆಯ ಶ್ರೀರಾಮ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಹೊರಟು, ಬಡಾವಣೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಿದ್ದೇವೆ. ಹುಬ್ಬಳ್ಳಿಯಲ್ಲಿ ಶ್ರೀಕಾಂತ ಪೂಜಾರ್‌ಗೆ ಬಂಧಿಸಿದ್ದಿರಲ್ಲ, ಪೊಲೀಸರಿಗೆ, ಕಾಂಗ್ರೆಸ್ ಸರ್ಕಾರಕ್ಕೆ ತಾಕತ್ತಿದ್ದರೆ ನಮ್ಮನ್ನು ಬಂಧಿಸಲಿ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಎಂತಹ ಹೆಸರುಗಳು. ಆದರೆ, ತಮ್ಮದೇ ಹೆಸರಿಗೆ ತದ್ವಿರುದ್ಧವಾಗಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಟೀಕಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಮಲಾಕರ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್‌! - ಖಾಸಗಿ ಕ್ಷಣಗಳ ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್‌
ರಾಜಧಾನಿಯಲ್ಲಿ ಡ್ರಗ್ಸ್ ಬೇಟೆ : ಸಾವಿರ ವ್ಯಸನಿಗಳ ಸೆರೆ