ಹಿಂದುಗಳು ಸಂಘಟಿತರಾಗಿ ದೇಶ ಬಲಿಷ್ಠಗೊಳಿಸಿ: ಗುರುಪ್ರಸಾದ ಸ್ವಾಮೀಜಿ

KannadaprabhaNewsNetwork |  
Published : Mar 24, 2024, 01:33 AM IST
ಗೋಕಾಕದಲ್ಲಿ ಹಿಂದು ಜಾಗರಣ ಮುಖ್ಯ ವಕ್ತಾರ ಕ್ರಾಂತಿಯೋಗಿ  ಶ್ರೀ ಗುರುಪ್ರಸಾದ ಮಹಾಸ್ವಾಮಿಗಳು ಬೃಹತ್ ಹಲಿಗೆ ಹಬ್ಬ ಕಾರ್ಯಕ್ರಮ ಉದ್ಘಾಟಿಸಿದರು. | Kannada Prabha

ಸಾರಾಂಶ

ಗೋಕಾಕ ನಗರದ ಶ್ರೀ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಹಿಂದು ಜಾಗರಣ ವೇದಿಕೆಯವರು ಹಮ್ಮಿಕೊಂಡ ಬೃಹತ್ ಹಲಿಗೆ ಹಬ್ಬದ ಸಮಾರಂಭದಲ್ಲಿ ಹಿಂದು ಜಾಗರಣ ವೇದಿಕೆ ಮುಖ್ಯ ವಕ್ತಾರ ಕ್ರಾಂತಿಯೋಗಿ ಶ್ರೀ ಗುರುಪ್ರಸಾದ ಸ್ವಾಮೀಜಿ ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ವಿಶಿಷ್ಠ ಸ್ಥಾನವಿದೆ. ಹಬ್ಬ ಹರಿದಿನಗಳನ್ನು ಹೆಚ್ಚೆಚ್ಚು ಆಚರಣೆ ಮಾಡುವ ಮೂಲಕ ಹಿಂದು ಬಾಂಧವರು ಸಂಘಟಿತರಾಗಿ ದೇಶವನ್ನು ಬಲಿಷ್ಠಗೊಳಿಸುವಂತೆ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಗೋಕಾಕ

ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ವಿಶಿಷ್ಠ ಸ್ಥಾನವಿದೆ. ಹಬ್ಬ ಹರಿದಿನಗಳನ್ನು ಹೆಚ್ಚೆಚ್ಚು ಆಚರಣೆ ಮಾಡುವ ಮೂಲಕ ಹಿಂದು ಬಾಂಧವರು ಸಂಘಟಿತರಾಗಿ ದೇಶವನ್ನು ಬಲಿಷ್ಠಗೊಳಿಸುವಂತೆ ಹಿಂದು ಜಾಗರಣ ವೇದಿಕೆ ಮುಖ್ಯ ವಕ್ತಾರ ಕ್ರಾಂತಿಯೋಗಿ ಶ್ರೀ ಗುರುಪ್ರಸಾದ ಸ್ವಾಮೀಜಿ ಹೇಳಿದರು.

ಶುಕ್ರವಾರ ಸಂಜೆ ನಗರದ ಶ್ರೀ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಹಿಂದು ಜಾಗರಣ ವೇದಿಕೆಯವರು ಹಮ್ಮಿಕೊಂಡ ಬೃಹತ್ ಹಲಿಗೆ ಹಬ್ಬದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಜಗತ್ತಿನಲ್ಲಿಯೇ ಅತಿಹೆಚ್ಚು ಯುವಶಕ್ತಿಯನ್ನು ನಮ್ಮ ದೇಶ ಹೊಂದಿದೆ. ಯುವ ಸಮೂಹ ವ್ಯಸನಮುಕ್ತರಾಗಿ ದೇಶವನ್ನು ಬಲಿಷ್ಠಗೊಳಿಸಲು ಶ್ರಮಿಸಬೇಕು. ಶ್ರೇಷ್ಠ ಸಂಸ್ಕೃತಿಯ ಕಾರಣ ದೇಶ ಪಾಶ್ಚಾತ್ಯರ ದಾಳಿಗೆ ಬಗ್ಗದೇ ಬಲಿಷ್ಠವಾಗಿಯೇ ಉಳಿದಿದೆ. ಇಂತಹ ಶ್ರೇಷ್ಠ ಸಂಸ್ಕೃತಿಯನ್ನು ಉಳಿಸಿ ಮುಂದಿನ ಪೀಳಿಗೆಗೆ ನೀಡಬೇಕಾದ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ವೇದಿಕೆಯ ಮೇಲೆ ಹಿಂದು ಜಾಗರಣ ವೇದಿಕೆ ಬೆಳಗಾವಿ ಜಿಲ್ಲಾ ಸಂಚಾಲಕ ಸಮರ್ಥ ಖಾಸನೀಸ್‌, ಆರ್‌ಎಸ್‌ಎಸ್ ಪ್ರಮುಖ ಎಂ.ವೈ. ಹಾರುಗೇರಿ, ಹಿಂದು ಜಾಗರಣ ವೇದಿಕೆಯ ತಾಲೂಕು ಘಟಕದ ಅಂಕುಶ ರೇಣಕೆ, ಸಾಯಿ ಕೋಸಂದರ, ಯಲ್ಲಪ್ಪ ದುರದುಂಡಿ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!