ಹಿಂದುತ್ವ ಬಿಜೆಪಿಯವರ ಮನೆ ಆಸ್ತಿ ಅಲ್ಲ

KannadaprabhaNewsNetwork |  
Published : May 01, 2024, 01:16 AM IST
ವಿಜಯಪುರದಲ್ಲಿ ನಡೆದ ಮಾದಿಗ ಸಮುದಾಯದ ಬೃಹತ್ ಸಭೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿದರು. | Kannada Prabha

ಸಾರಾಂಶ

ಹಿಂದುಳಿದ ಜಾತಿಯವರ ಮತ ಕೇಳಲು ಸಂವಿಧಾನ ವಿರೋಧಿ ಬಿಜೆಪಿಗೆ ನೈತಿಕತೆ ಇಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಹಿಂದುಳಿದ ಜಾತಿಯವರ ಮತ ಕೇಳಲು ಸಂವಿಧಾನ ವಿರೋಧಿ ಬಿಜೆಪಿಗೆ ನೈತಿಕತೆ ಇಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.

ನಗರದಲ್ಲಿ ಮಂಗಳವಾರ ಮಾದಿಗ ಸಮುದಾಯದ ಬೃಹತ್ ಸಭೆಯಲ್ಲಿ ಮಾತನಾಡಿದ ಅವರು, ಹಿಂದುತ್ವ ಬಿಜೆಪಿಯವರ ಮನೆ ಆಸ್ತಿ ಅಲ್ಲ. ವಿಶ್ವದಲ್ಲಿ ಗೋಮಾಂಸ ರಫ್ತಿನಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ಮೊದಲು ಕಸಾಯಿಖಾನೆ ಬಂದ್ ಮಾಡಿ ಗೋಮಾತೆ ಬಗ್ಗೆ ನಿಜವಾದ ಪ್ರೀತಿ ತೋರಿಸಿ. ಚೀನಾ ಭೂಮಿ ಅತಿಕ್ರಮಿಸಿದೆ. ನಮ್ಮ ಪ್ರಧಾನಿ ದುರ್ಬಲ. ಅವರು ಯುವಕರ ತಲೆಕೆಡಿಸುತ್ತಾರೆ. ಇದೆಲ್ಲಕ್ಕೂ ಭಿನ್ನವಾಗಿರುವ ದಲಿತಪರ, ಜೀವಪರ ವ್ಯಕ್ತಿಯಾದ ಆಲಗೂರಗೆ ಮತ ಹಾಕಿ ಎಂದರು.

ಜಿಲ್ಲಾ ಉಸ್ತುವಾರಿ, ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ ಮಾತನಾಡಿ, ಕಾಂಗ್ರೆಸ್ ತನ್ನ ಅಧಿಕಾರಾವಧಿಯಲ್ಲಿ ಭಾರತವನ್ನು ಸರ್ವಾಂಗೀಣ ಅಭಿವೃದ್ಧಿ ಮಾಡಿದೆ. ಈ ದೇಶವನ್ನು ಸೂಜಿಯಿಂದ ವಿಮಾನಯಾನ, ಶಾಲೆಯಿಂದ ವಿಶ್ವವಿದ್ಯಾಲಯಗಳವರೆಗೆ ಕಟ್ಟಲಾಗಿದೆ. ರಾಜ್ಯದಲ್ಲೂ ನಮ್ಮ ಸರಕಾರ ನಿಮ್ಮ ಪ್ರಗತಿಪರವಾಗಿದೆ. ಇಲ್ಲಿ ಆಲಗೂರರು ತಮ್ಮೆಲ್ಲರ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದರು.

ಗ್ಯಾರಂಟಿ ಯೋಜನೆಗಳಿಂದ ನಿಮಗೆಲ್ಲ ಅನುಕೂಲವಾಗಿದೆ. ನಿಮ್ಮ ಮಕ್ಕಳು ಸುಶಿಕ್ಷಿತರಾಗಲು ಸರ್ಕಾರ ಶ್ರಮಿಸಿದೆ. ದಮನಿತರ ಏಳಿಗೆಗಾಗಿ ಕಾಂಗ್ರೆಸ್ ಯಾವತ್ತೂ ಮಿಡಿದಿದೆ. ಬಿಜೆಪಿ ಅಭ್ಯರ್ಥಿ ಮತ್ತು ಆ ಪಕ್ಷದಿಂದ ನಿಮಗೆ ಇಲ್ಲಿಯವರೆಗೆ ಯಾವುದೇ ಲಾಭವಾಗಿಲ್ಲ ಎಂದರು.

ಅಭ್ಯರ್ಥಿ ಪ್ರೊ.ರಾಜು ಆಲಗೂರ ಮಾತನಾಡಿ, ಕನಸಲ್ಲೂ ನಾನು ಎಡ-ಬಲ ಸಮಾಜ ಎಂದು ಬೇರೆ ಮಾಡಿಲ್ಲ. ನಾನು ಒಂದು ಪಂಗಡಕ್ಕೆ ಮಾತ್ರ ಸೀಮಿತವಾಗಲು ಇಚ್ಚಿಸುವುದಿಲ್ಲ. ಇದು ರಾಜಕಾರಣಕ್ಕಾಗಿ ನಾನು ಹೇಳುತ್ತಿಲ್ಲ ಎಂದ ಅವರು, ಕಾಂಗ್ರೆಸ್ ನಮಗೆ ಬಹಳ ಉಪಕಾರ ಮಾಡಿದೆ. ಶೋಷಿತ ಸಮಾಜ ಬದಲಾಗಲು ಕಾಂಗ್ರೆಸ್ ಕಾರಣವಾಗಿದೆ. ನಮಗೆ ಉಸಿರಾಡುವಂತೆ ಮಾಡಲಾಗಿದೆ. ಗ್ಯಾರಂಟಿಗಳ ಮೂಲಕ ಹೆಣ್ಣುಮಕ್ಕಳ ನಿತ್ಯ ಜೀವನ ಹಗುರಾಗಿದೆ. ನಿಮ್ಮ ಜೊತೆ ನಾನು ಯಾವತ್ತೂ ಇರುವೆ ಎಂದರು.

ಹಿರಿಯ ಮುಖಂಡ ಚಂದ್ರಶೇಖರ ಕೊಡಬಾಗಿ, ನಿವೃತ್ತ ಐಎಎಸ್ ಅಧಿಕಾರಿ ಎಚ್.ಆರ್. ಭೀಮಾಶಂಕರ, ವೇದಿಕೆಯಲ್ಲಿ ಇದ್ದರು. ಪಕ್ಷದ ಎಸ್ಸಿ ಘಟಕದ ಅಧ್ಯಕ್ಷ ರಮೇಶ ಗುಬ್ಬೇವಾಡ ಪ್ರಾಸ್ತಾವಿಕ ಮಾತನಾಡಿದರು. ಸುಭಾಷ ಕಾಲೇಬಾಗ, ಕೆ.ಕೆ.ಕಳಸದ ಸೇರಿದಂತೆ ಹಲವಾರು ಮುಖಂಡರು, ಸಮುದಾಯದ ಪ್ರಮುಖರು ಇದ್ದರು. ಇದೇ ಸಂದರ್ಭದಲ್ಲಿ ಲೋಕಸಭೆಯ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರರಿಗೆ ಬೆಂಬಲ ವ್ಯಕ್ತಪಡಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾಸ್‌ ಸಿಗದಿರುವುದಕ್ಕೆ ಸರ್ಕಾರದವಿರುದ್ಧ ಆಟೋ ಚಾಲಕರ ಆಕ್ರೋಶ
ಏಕ ಬಳಕೆ ಪ್ಲಾಸ್ಟಿಕ್ ಬಳಸಿದರೆ 5 ಲಕ್ಷ ದಂಡ : ಜಿಬಿಎ ಎಚ್ಚರಿಕೆ