ಭಕ್ತರ ಬದುಕು ಕಟ್ಟುತ್ತಿರುವ ಹಿರೇಕಲ್ಮಠ ಶ್ರೀ: ಬಿವೈಆರ್‌

KannadaprabhaNewsNetwork |  
Published : Oct 09, 2024, 01:36 AM IST
ಹೊನ್ನಾಳಿ ಫೋಟೋ 8ಎಚ್.ಎಲ್.ಐ1.ಪಟ್ಟಣದ ಹಿರೇಕಲ್ಮಠದ ಸಮುದಾಯಭವನದಲ್ಲಿ   ದಸರಾ ಮತ್ತು ಶರನ್ನವರಾತ್ರಿ ಕಾರ್ಯಕ್ರಮದ ಧರ್ಮಸಭೆಯನ್ನುದ್ದೇಶಿಸಿ  ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ಎವೈ. ರಾಘವೇಂದ್ರ ಅವರು ಮಾತನಾಡಿದರು. ಹಾವೇರಿಯ ಕರ್ಜಗಿ ಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ , ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ  ಶಿವಾಚಾರ್ಯ ಸ್ವಾಮೀಜಿ, ಹಾಗೂ ಅನೇಕ ಮುಖಂಡರು ಇದ್ದರು. | Kannada Prabha

ಸಾರಾಂಶ

ನಮ್ಮ ಕುಟುಂಬವು ರಾಜಕೀಯ ಕ್ಷೇತ್ರದಲ್ಲಿದ್ದು, ಸಾಮಾಜಿಕ ಸೇವೆ ಮಾಡುತ್ತಿರುವುದಕ್ಕೆ ಶಕ್ತಿ ಬಂದಿರುವುದು ಹೊನ್ನಾಳಿಯ ಹಿರೇಕಲ್ಮಠದ ಲಿಂ. ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳ ಆರ್ಶೀವಾದ ಫಲವೇ ಕಾರಣವಾಗಿದೆ ಎಂದು ಶಿವಮೊಗ್ಗ ಕ್ಷೇತ್ರ ಸಂಸದ ಬಿ.ವೈ.ರಾಘವೇಂದ್ರ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಹೊನ್ನಾಳಿ

ನಮ್ಮ ಕುಟುಂಬವು ರಾಜಕೀಯ ಕ್ಷೇತ್ರದಲ್ಲಿದ್ದು, ಸಾಮಾಜಿಕ ಸೇವೆ ಮಾಡುತ್ತಿರುವುದಕ್ಕೆ ಶಕ್ತಿ ಬಂದಿರುವುದು ಹೊನ್ನಾಳಿಯ ಹಿರೇಕಲ್ಮಠದ ಲಿಂ. ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳ ಆರ್ಶೀವಾದ ಫಲವೇ ಕಾರಣವಾಗಿದೆ ಎಂದು ಶಿವಮೊಗ್ಗ ಕ್ಷೇತ್ರ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಪಟ್ಟಣದ ಹಿರೇಕಲ್ಮಠ ಸಮುದಾಯ ಭವನದಲ್ಲಿ ದಸರಾ ಮತ್ತು ಶರನ್ನವರಾತ್ರಿ ಕಾರ್ಯಕ್ರಮದ ಧರ್ಮಸಭೆಯಲ್ಲಿ ಅವರು ಮಾತನಾಡಿದರು. ಈಗಿನ ಒಡೆಯರ್ ಡಾ.ಚನ್ನಮಲ್ಲಿಕಾರ್ಜುನ ಶ್ರೀಗಳವರು ಲಿಂ.ಶ್ರೀಗಳ ಆಣತಿಯಂತೆ ದೊಡ್ಡ ಯೋಜನೆಗಳನ್ನು ಹಾಕಿಕೊಂಡು ಕಾರ್ಯಪ್ರವೃತ್ತರಾಗಿದ್ದಾರೆ. ಮಾದರಿಯಾಗಿ ಕೃಷಿ ಮೇಳ ಅದ್ಧೂರಿಯಾಗಿ ಯಶಸ್ವಿಗೊಳಿಸಿ, ಭಕ್ತರ ಬದುಕನ್ನು ಕಟ್ಟುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ರೈತ ದೇಶದ ಬೆನ್ನೆಲುಬು ಎಂಬ ಮಾತಿನಂತೆ ಅವರ ಬದುಕು ಹಸನಾಗಿಲ್ಲ. ಭತ್ತ, ಮೆಕ್ಕೆಜೋಳ, ಅಡಕೆ ಮುಂತಾದ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ರೈತರಿಗೆ ನ್ಯಾಯವಾದ ಬೆಲೆ ಸಿಗದೇ ಮಧ್ಯವರ್ತಿಗಳಿಗೆ ಸಿಂಹಪಾಲು ಲಾಭ ದೊರಕುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಬೆಳೆಗಳಿಗೆ ಎಂ.ಆರ್.ಪಿ. ದರ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ರೈತರ 18 ಕೋಟಿ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಆನ್‍ಲೈನ್ ಮೂಲಕ ತಲಾ ₹2000 ವನ್ನು ಹಾಕಿದ್ದು, ರೈತರ ಗೊಬ್ಬರದ ಖರೀದಿಗೆ ₹2 ಲಕ್ಷ ಕೋಟಿ ಸಬ್ಸಿಡಿ ಹಣ ಕಾರ್ಖಾನೆಗಳಿಗೆ ಸಂದಾಯ ಮಾಡಿದ್ದಾರೆ. ಆ ಮೂಲಕ ನಮ್ಮದು ರೈತಪರ ಸರ್ಕಾರ ಎಂದು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ ಎಂದು ನಮೋದಿ ಆಡಳಿತ ವೈಖರಿ ಬಣ್ಣಿಸಿದರು.

ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ಬಿ.ಎಸ್.ಯಡಿಯೂರಪ್ಪ ಅವರು ಧರ್ಮದ ತಳಹದಿಯಲ್ಲಿ ರಾಜಕಾರಣ ಮಾಡಿದ್ದ ಅಪರೂಪದ ರಾಜಕಾರಣಿ. ಹೊನ್ನಾಳಿಯಲ್ಲಿ ಇಂದು ಸರ್ವಾಂಗೀಣ ಅಭಿವೃದ್ಧಿ ಆಗಿದ್ದರೆ ಅದಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ನೀಡಿದ ಅನುದಾನ ಕಾರಣ ಎಂದು ಅವಳಿ ತಾಲೂಗಳಲ್ಲಿನ ಸಾವಿರಾರು ಕೋಟಿ ರು.ಗಳ ವೆಚ್ಚದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮೆಲುಕು ಹಾಕಿದರು.

ಶಿಕ್ಷಕಿ ಶಾಂತಾ ಸುರೇಶ್ "ಮಹಿಳೆಯರ ಸ್ವಾವಲಂಬನೆ " ವಿಷಯದ ಕುರಿತು ಉಪನ್ಯಾಸ ನೀಡಿದರು. ಬಿ.ಇಡಿ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಜಯಪ್ಪ ಮಾತನಾಡಿದರು. ಹಾವೇರಿಯ ಕರ್ಜಗಿ ಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸಿದ್ದರು.

ಟಿಎಪಿಸಿಎಂಎಸ್ ಅಧ್ಯಕ್ಷ ಎಚ್.ಬಸವರಾಜ್, ಬಿಜೆಪಿ ಮಂಡಲ ತಾಲೂಕು ಅಧ್ಯಕ್ಷ ಜೆ.ಕೆ. ಸುರೇಶ್, ಪುರಸಭಾ ಸದಸ್ಯರಾದ ಕೆ.ವಿ.ಶ್ರೀಧರ್, ರಂಗನಾಥ್, ಸುರೇಶ್ ಹೊಸಕೇರಿ, ಶಿಕಾರಿಪುರದ ಅಖಿಲ ಭಾರತ ವೀರಶೈವ ಸಮಾಜದ ಅಧ್ಯಕ್ಷ ಸುಧೀರ್, ಮೆಸ್ಕಾಂ ಮಾಜಿ ನಿರ್ದೇಶಕ ರುದ್ರೇಶ್ ಹೊಸೂರು, ಕರವೇ ಅಧ್ಯಕ್ಷ ಶ್ರೀನಿವಾಸ್, ಮುಖಂಡರಾದ ಪೇಟೆ ಪ್ರಶಾಂತ್, ಸರಳಿನಮನೆ ಮಂಜಪ್ಪ, ಎಚ್.ಬಿ.ಸಿದ್ದಪ್ಪ, ಟಿ.ಎಂ.ಬಸವರಾಜಯ್ಯ ಶಾಸ್ತ್ರಿ ಮತ್ತಿತರರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಸುರಹೊನ್ನೆಯ ಶ್ರೀ ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಆಂಗ್ಲಮಾಧ್ಯಮ ಪ್ರೌಢಶಾಲೆ ಮಕ್ಕಳಿಂದ ನಡೆದ ಸಾಂಸ್ಕತಿಕ ಕಾರ್ಯಕ್ರಮಗಳು ಜನಮನಸೂರೆಗೊಂಡವು.

- - - -8ಎಚ್.ಎಲ್.ಐ1:

ಹೊನ್ನಾಳಿ ಪಟ್ಟಣದ ಹಿರೇಕಲ್ಮಠ ಸಮುದಾಯ ಭವನದಲ್ಲಿ ದಸರಾ ಮತ್ತು ಶರನ್ನವರಾತ್ರಿ ಕಾರ್ಯಕ್ರಮ ಧರ್ಮಸಭೆಯಲ್ಲಿ ಶಿವಮೊಗ್ಗ ಕ್ಷೇತ್ರ ಸಂಸದ ಬಿ.ಎವೈ. ರಾಘವೇಂದ್ರ ಮಾತನಾಡಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ