ಹೋಂ ಗಾರ್ಡ್ ಬದಲು ನೆಪ । ಹಗಲು, ರಾತ್ರಿ ಟಿಪ್ಪರ್ ಆರ್ಭಟ, ರಾಯಲ್ಟಿ ವಂಚನೆ । ಚೆಕ್ಪೋಸ್ಟ್ ಇದ್ದಾಗಲೇ ಅಕ್ರಮ
ಹೋಂ ಗಾರ್ಡ್ ಬದಲಾವಣೆ ನೆಪದಲ್ಲಿ ಹಿರೀಕಾಟಿ ಖನಿಜ ತನಿಖಾ ಠಾಣೆ ಬಾಗಿಲು ಮುಚ್ಚಿರುವ ಕಾರಣ ರಾಯಲ್ಟಿ/ಎಂಡಿಪಿ ವಂಚಿಸಿ ಹಗಲು ರಾತ್ರಿ ಇನ್ನದೆ ಕಲ್ಲು ಹಾಗೂ ಕ್ರಷರ್ ಉತ್ಪನ್ನಗಳು ರಾಜಾರೋಷವಾಗಿ ತೆರಳುತ್ತಿವೆ.
ಕನ್ನಡಪ್ರಭ ಪತ್ರಿಕೆಯ ನಿರಂತರ ವರದಿ ಹೋರಾಟದ ಫಲವಾಗಿ ಒಲ್ಲದ ಮನಸ್ಸಿನಿಂದಲೇ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ತಾಲೂಕಿನ ಹಿರೀಕಾಟಿ ಗೇಟ್ ಬಳಿ ಖನಿಜ ತನಿಖಾ ಠಾಣೆ ಆರಂಭಿಸಿತ್ತು.ಪ್ರತಿನಿತ್ಯ ಸರ್ಕಾರಕ್ಕೆ ಲಕ್ಷಾಂತರ ರು. ರಾಜಧನ ವಂಚನೆ ಆಗುತ್ತಿದೆ. ಆದರೂ ಜಿಲ್ಲಾಡಳಿತ ಹೋಂ ಗಾರ್ಡ್ ಬದಲಾವಣೆ ನೆಪದಲ್ಲಿ ಖನಿಜ ತನಿಖಾ ಠಾಣೆ ಬಂದ್ ಮಾಡುವ ಮೂಲಕ ರಾಜಧನ ಸೋರಿಕೆಗೆ ಜಿಲ್ಲಾಡಳಿತವೇ ಕಾರಣವಾಗಿದೆ.
ಹಿರೀಕಾಟಿ ಖನಿಜ ತನಿಖಾ ಠಾಣೆ ಸಿಬ್ಬಂದಿ ಇರುವಾಗಲೇ ಠಾಣೆಯ ಸಿಬ್ಬಂದಿ ಕಣ್ತಪ್ಪಿಸಿ ರಾಯಲ್ಟಿ ಹಾಗೂ ಎಂಡಿಪಿ ವಂಚಿಸಿ ಕರಗತ ಮಾಡಿಕೊಂಡಿರುವ ಕೆಲ ಕ್ರಷರ್, ಕ್ವಾರಿ ಮಾಲೀಕರು ಈಗ ಖನಿಜ ತನಿಖಾ ಠಾಣೆ ಬಾಗಿಲಿಗೆ ಬೀಗ ಹಾಕಿರುವಾಗ ಬಿಡುತ್ತಾರೆಯೇ ಎಂದು ಗ್ರಾಮದ ಪ್ರಸನ್ನ, ಶ್ರೀಧರ್ ಪ್ರಶ್ನಿಸುತ್ತಾರೆ.
ಕರೆ ಸ್ವೀಕರಿಸಿದ ಅಧಿಕಾರಿಗಳು: