ವೆಂಕಟೇಶ್ ಕಲಿಪಿ
ಚಾಲಕರು ಮಾನ್ಯತೆ ಹೊಂದಿದ ಚಾಲನಾ ಪರವಾನಗಿ ಹೊಂದಿದ್ದಾರೆಯೇ, ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿ ವಾಹನ ಮಾಲೀಕ(ಉದ್ಯೋಗದಾತರು)ರೇ ಹೊಂದಿರುತ್ತಾರೆ. ಪರವಾನಗಿ ಹೊಂದಿರದ ಚಾಲಕನಿಂದ ಅಪಘಾತವಾದರೆ ವಾಹನ ಮಾಲೀಕರೇ ಸಂತ್ರಸ್ತರಿಗೆ ಪರಿಹಾರ ನೀಡಬೇಕಾಗುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.
ಶಾಲಾ ವಾಹನವೊಂದು ನಿಯಂತ್ರಣ ಕಳೆದುಕೊಂಡು ನದಿಗೆ ಬಿದ್ದ ಪ್ರಕರಣದಲ್ಲಿ ಚಾಲಕ ಪರವಾನಗಿ ಹೊಂದಿರದ ಕಾರಣ ಮೃತ ಚಾಲಕನ ಕುಟುಂಬದವರಿಗೆ ಪರಿಹಾರ ಪಾವತಿಸುವಂತೆ ವಾಹನ ಮಾಲೀಕರೂ ಆದ ಶಾಲಾ ಮುಖ್ಯಶಿಕ್ಷಕನಿಗೆ ಕೋರ್ಟ್ ನಿರ್ದೇಶಿಸಿದೆ.ಈ ಆದೇಶದ ಅನ್ವಯ ವಾಹನಗಳ (ಉದ್ಯೋಗದಾತರು) ಮಾಲೀಕರು ಚಾಲಕರನ್ನು ನೇಮಿಸಿಕೊಳ್ಳುವಾಗ, ಅವರು ಮಾನ್ಯತೆ ಹೊಂದಿರುವ ಚಾಲನಾ ಪರವಾನಗಿ ಹೊಂದಿದ್ದಾರೆಯೇ ಎಂಬುದನ್ನು ಖಾತರಿಪಡಿಸಿಕೊಂಡು ಉದ್ಯೋಗ ನೀಡಬೇಕು. ಪರವಾನಗಿ ಹೊಂದಿರದ ಚಾಲಕನನ್ನು ಉದ್ಯೋಗಕ್ಕೆ ಸೇರಿಸಿಕೊಂಡರೆ ಅದು ವಿಮಾ ಪಾಲಿಸಿಯ ಷರತ್ತಿನ ಉಲ್ಲಂಘನೆ ಆಗಲಿದೆ. ಒಂದು ವೇಳೆ ಆ ವಾಹನ ಅಪಘಾತಕ್ಕೊಳಗಾದರೆ ಸಂತ್ರಸ್ತರಿಗೆ ವಾಹನ ಮಾಲೀಕರೇ ಪರಿಹಾರ ಕೊಡಬೇಕಾಗುತ್ತದೆ.
ಪ್ರಕರಣದ ಹಿನ್ನೆಲೆ:
ಹಾಗಾಗಿ ಮೃತನ ಪೋಷಕರು, ಪತ್ನಿ-ಮಕ್ಕಳು ಉದ್ಯೋಗ ನಿರ್ವಹಣೆ ಸಮಯದಲ್ಲಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ 13 ಲಕ್ಷ ರು. ಅನ್ನು ವಾರ್ಷಿಕ ಶೇ.12ರಷ್ಟು ಬಡ್ಡಿದರದಲ್ಲಿ ಪರಿಹಾರವಾಗಿ ಪಾವತಿಸಲು ಬಸ್ ಮಾಲೀಕರಾದ ಶಾಲೆ ಮುಖ್ಯಶಿಕ್ಷಕ ಮತ್ತು ಬಸ್ಗೆ ವಿಮಾ ಪಾಲಿಸಿ ಕಲ್ಪಿಸಿರುವ ಕಂಪನಿಗೆ ನಿರ್ದೇಶಿಸುವಂತೆ ಕೋರಿ ಕ್ಲೇಮು ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಹೈಕೋರ್ಟ್, ಘಟನೆ ಸಂಭವಿಸಿದ ವೇಳೆ ಬದ್ರುದ್ದೀನ್ ಅಪಘಾತಕ್ಕೆ ಒಳಗಾದ ಬಸ್ (7,500 ಕೆ.ಜಿ.ಗಿಂತ ಕಡಿಮೆ ತೂಕದ ವಾಹನ ) ಚಲಾಯಿಸಲು ಮಾನ್ಯತೆ ಹೊಂದಿರುವ (ಅಧಿಕೃತ) ಚಾಲನಾ ಪರವಾನಗಿ ಹೊಂದಿರಲಿಲ್ಲ. ಬದ್ರುದ್ದೀನ್ ಅಧಿಕೃತ ಚಾಲನಾ ಪರವಾನಗಿ ಹೊಂದಿದ್ದರು ಎಂದು ಬಸ್ ಮಾಲೀಕರಾದ ಶಾಲಾ ಮುಖ್ಯೋಪಾಧ್ಯಾಯರು ವಾದಿಸಿದರೂ, ಅದನ್ನು ನಂಬಲು ಅಗತ್ಯ ದಾಖಲೆಗಳನ್ನು ಸಲ್ಲಿಸಿಲ್ಲ. ಇದರಿಂದ ಬದ್ರುದ್ದೀನ್ ಕುಟುಂಬದವರಿಗೆ ಪರಿಹಾರ ಪಾವತಿಸುವ ಹೊಣೆಯನ್ನು ಶಾಲಾ ಮುಖ್ಯೋಪಾಧ್ಯಾಯರ ಹೆಗಲಿಗೆ ಹೊರಿಸಿ ಅಧೀನ ನ್ಯಾಯಾಲಯ ಹೊರಡಿಸಿದ ಆದೇಶ ಸೂಕ್ತವಾಗಿದೆ. ಅದರಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ ಎಂದು ತಿಳಿಸಿ, ಮೇಲ್ಮನವಿ ವಜಾಗೊಳಿಸಿತು.