13ಕ್ಕೆ 108 ಗ್ರಾಮಗಳ ಜೋಡೆತ್ತಿನ ರೈತರ ಐತಿಹಾಸಿಕ ಸಮಾವೇಶ

KannadaprabhaNewsNetwork |  
Published : Feb 10, 2026, 03:15 AM IST
ಫೆ.13ರಂದು 108 ಗ್ರಾಮಗಳ ಜೋಡೆತ್ತಿನ ರೈತರ ಐತಿಹಾಸಿಕ ಸಮಾವೇಶ | Kannada Prabha

ಸಾರಾಂಶ

ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿಯವರ ಕೃಪೆಯಿಂದ ಕೃಷಿ ಪದವೀಧರರಿಂದ ಪ್ರಾರಂಭವಾದ ನಂದಿ ಕೂಗು ಅಭಿಯಾನದ ಅಡಿಯಲ್ಲಿ ರೈತರ ಬಸವ ತತ್ವದ ಪುನರುತ್ಥಾನಕ್ಕೆ ಪೂರಕ ಯೋಜನೆ ಹಾಗೂ ಕಾನೂನು ಜಾರಿಗಾಗಿ ಹಕ್ಕೊತ್ತಾಯ ಮಾಡುವುದಕ್ಕಾಗಿ 108 ಗ್ರಾಮಗಳ ಜೋಡೆತ್ತಿನ ರೈತರ ಐತಿಹಾಸಿಕ ಸಮಾವೇಶವು ಫೆ.13 ರಂದು ಬೆಳಗ್ಗೆ 10ಕ್ಕೆ ಇಂಡಿ ತಾಲೂಕಿನ ಸಾಲೋಟಗಿ ಗ್ರಾಮದಲ್ಲಿ ಜರುಗಲಿದೆ ಎಂದು ಜೋಡೆತ್ತುಗಳ ಸಮಾವೇಶದ ನಂದಿ ಸೇನೆಯ ಪ್ರಮುಖ ಸೋಮನಾಥ ಶಿವೂರ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿಯವರ ಕೃಪೆಯಿಂದ ಕೃಷಿ ಪದವೀಧರರಿಂದ ಪ್ರಾರಂಭವಾದ ನಂದಿ ಕೂಗು ಅಭಿಯಾನದ ಅಡಿಯಲ್ಲಿ ರೈತರ ಬಸವ ತತ್ವದ ಪುನರುತ್ಥಾನಕ್ಕೆ ಪೂರಕ ಯೋಜನೆ ಹಾಗೂ ಕಾನೂನು ಜಾರಿಗಾಗಿ ಹಕ್ಕೊತ್ತಾಯ ಮಾಡುವುದಕ್ಕಾಗಿ 108 ಗ್ರಾಮಗಳ ಜೋಡೆತ್ತಿನ ರೈತರ ಐತಿಹಾಸಿಕ ಸಮಾವೇಶವು ಫೆ.13 ರಂದು ಬೆಳಗ್ಗೆ 10ಕ್ಕೆ ಇಂಡಿ ತಾಲೂಕಿನ ಸಾಲೋಟಗಿ ಗ್ರಾಮದಲ್ಲಿ ಜರುಗಲಿದೆ ಎಂದು ಜೋಡೆತ್ತುಗಳ ಸಮಾವೇಶದ ನಂದಿ ಸೇನೆಯ ಪ್ರಮುಖ ಸೋಮನಾಥ ಶಿವೂರ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ ವಿಶೇಷ ಎತ್ತುಗಳು ಹಾಗೂ ಬೀಜದ ಹೋರಿಗಳ ಪ್ರದರ್ಶನವಿರುತ್ತದೆ. ನಂದಿ ಹಾಗೂ ಗೋ ಉತ್ಪನ್ನಗಳ ಮಾರಾಟ ವ್ಯವಸ್ಥೆ ಇರುವುದು. ಆದ ಕಾರಣ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶ ಯಶಸ್ವಿಗೊಳಿಸಬೇಕು ಎಂದು ಕೋರಿದರು. ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ, ಜ್ಞಾನಯೋಗಾಶ್ರಮದ ಬಸವಲಿಂಗ ಮಹಾಸ್ವಾಮೀಜಿ, ಸಿಂದಗಿಯ ಸಾರಂಗಮಠದ ಡಾ.ವಿಶ್ವಪ್ರಭುದೇವ ಶಿವಾಚಾರ್ಯ ಸ್ವಾಮೀಜಿ, ಬುರಣಾಪುರದ ಮಾತೋಶ್ರೀ ಯೋಗೇಶ್ವರಿ ಮಾತಾಜಿ, ಸಾಲೋಟಗಿಯ ಸಿದ್ದೇಶ್ವರ ಆಶ್ರಮದ ಸಂಗಮೇಶ್ವರ ಸ್ವಾಮೀಜಿ, ನಂದಿ ಕೂಗು ಅಭಿಯಾನದ ಮಾರ್ಗದರ್ಶಕರಾದ ಬಿಜ್ಜರಗಿಯ ಸೋಮಲಿಂಗ ಅಜ್ಜನನವರು ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.ವಿಶ್ರಾಂತ ಕೃಷಿ ಅಧಿಕಾರಿ ಬಾಳಾಸಾಹೇಬ ಈಶ್ವರಗೊಂಡ ಮಾತನಾಡಿ, ವಿಶ್ವ ಗುರು ಬಸವಣ್ಣನವರು ಪ್ರತಿಪಾದಿಸಿದ ಬಸವ ತತ್ವದ ಮೂಲ ಬೇರುಗಳಾದ ಜೋಡೆತ್ತಿನ ಕೃಷಿಕರಿಗೆ ಪ್ರತಿ ತಿಂಗಳು ₹11 ಸಾವಿರ ಪ್ರೋತ್ಸಾಹ ಧನವನ್ನು ನೀಡುವ ಅಂಶವನ್ನು ಪ್ರಸಕ್ತ ಬಜೆಟ್‌ನಲ್ಲಿ ಸೇರ್ಪಡೆ ಮಾಡಿ ಬಸವ ತತ್ವದ ಪುನರುತ್ಥಾನಕ್ಕಾಗಿ ಬಜೆಟ್‌ನ ಶೇ.10 ರಷ್ಟು ಅನುದಾನ ಮೀಸಲಿರುಸುವಂತೆ ಒತ್ತಾಯಿಸಿದರು. ತೈಲ ತತ್ವ ಆಧಾರಿತ ಟ್ರ್ಯಾಕ್ಟರ್ ಸಂಸ್ಕೃತಿಯ ಕೃಷಿಯಿಂದ ಮಣ್ಣಿನ ಫಲವತ್ತತೆ ಹಾಳಾಗುತ್ತಿದೆ. ಬಸವ ತತ್ವ ಆಧಾರಿತ ಕೃಷಿ ಮಣ್ಣಿನ ಆರೋಗ್ಯ, ಮಾನವ ಆರೋಗ್ಯ ಹೀಗೆ ಎಲ್ಲವನ್ನೂ ಕೇಂದ್ರಿಕರಿಸಿದೆ. ಹೀಗಾಗಿ ಜೋಡೆತ್ತಿನ ಕೃಷಿಯನ್ನು ಈ ಹಿಂದೆಗಿಂತಲೂ ಹೆಚ್ಚು ಪರಿಣಾಮಕಾರಿಯಾಗಿ ಪ್ರೋತ್ಸಾಹಿಸಬೇಕಾದ ಅವಶ್ಯಕತೆ ಇದೆ ಎಂದರು. ಹೊಸ ತಂತ್ರಜ್ಞಾನಗಳಿಂದ ನಂದಿ ಶಕ್ತಿಯನ್ನು ಸಮರ್ಥವಾಗಿ ಬಳಸಿಕೊಂಡು ವಿದ್ಯುತ್, ಗ್ಯಾಸ್, ಅಡುಗೆ ಎಣ್ಣೆ, ಸಾವಯವ ಉತ್ಪನ್ನಗಳು. ಆರೋಗ್ಯ ವರ್ಧಕಗಳನ್ನು ಉತ್ಪಾದಿಸುವ ವಿವಿಧ ಯೋಜನೆಗಳನ್ನು ತರುವ ಮೂಲಕ ಗ್ರಾಮಗಳನ್ನು ಸ್ವಾವಲಂಬಿ ಗೊಳಿಸುವುದು ರೈತರ ಬಸವ ತತ್ವದ ಉದ್ದೇಶವಾಗಿದೆ. ಸಿದ್ಧೇಶ್ವರ ಸ್ವಾಮೀಜಿಯವರ ಕೃಪೆಯಿಂದ ಪ್ರಾರಂಭಿಸಿದ ನಂದಿ ಕೂಗು ಅಭಿಯಾನ ಹಾಗೂ ನಂದಿ ಸೇನೆ ಸಂಘಟನೆಯು ಸರ್ಕಾರದ ಮೂಲಕ ರೈತರ ಬಸವತತ್ವಕ್ಕೆ ಪೂರಕ ಯೋಜನೆಗಳನ್ನು ಜಾರಿಗೆ ತಂದು ಮುಂದಿನ 10 ವರ್ಷಗಳಲ್ಲಿ 10 ಪಟ್ಟು ನಂದಿ ಸಂಪತ್ತು ಹೆಚ್ಚಿಸಿ ಗ್ರಾಮಗಳನ್ನು ಸ್ವಾವಲಂಬಿಗೊಳಿಸುವ ಗುರಿ ಹೊಂದಿದೆ ಎಂದು ವಿವರಿಸಿದರು. ಗೋಷ್ಠಿಯಲ್ಲಿ ನಂದಿ ಕೂಗು ಅಭಿಯಾನದ ಪ್ರಮುಖರಾದ ಶಿವರಾಜ ಪಾರಗೊಂಡ, ಸಂಗಮೇಶ ಕಾಮನ್ನವರ, ಅಭಿಷೇಕ ಬಿರಾದಾರ, ಬಸವರಾಜ ಬಿರಾದಾರ ಉಪಸ್ಥಿತರಿದ್ದರು.ನಂದಿ ಸಂತತಿ ನಾಶವಾಗಿ ತಿನ್ನುವ ಅನ್ನ ವಿಷವಾಗುವ ಮುಂಚೆ ನಾವೆಲ್ಲರೂ ಒಗ್ಗೂಡಿ ಪರಿಹಾರ ಕಂಡುಕೊಳ್ಳುವ ಅವಶ್ಯಕತೆಯಿದೆ. ನಂದಿ ಕೃಷಿಕರಿಗೆ ಪೂರಕವಾದ ಕಾನೂನು ಹಾಗೂ ಯೋಜನೆಗಳನ್ನು ಜಾರಿಗೆ ತಂದು ಗ್ರಾಮಗಳನ್ನು ಸ್ವಾವಲಂಬಿ ಹಾಗೂ ಆರೋಗ್ಯಯುತವಾಗಿ ಇಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.

-ಸೋಮನಾಥ ಶಿವೂರ, ಜೋಡೆತ್ತುಗಳ ಸಮಾವೇಶದ ನಂದಿ ಸೇನೆಯ ಪ್ರಮುಖರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುನೀರಾವರಿಗಾಗಿ ಗುರ್ಲಾಪುರ ಮಾದರಿ ಹೋರಾಟ
ಬ್ರಹ್ಮಾಂಡವನ್ನೇ ತೂಗುವ ಶಕ್ತಿವಂತನೇ ಜ್ಞಾನಿ: ಲಿಂಗರಾಜ ಮಹಾರಾಜರ