ಮುಂಬೈ ಮಹಾನಗರಪಾಲಿಕೆ ಐತಿಹಾಸಿಕ ಗೆಲುವು

KannadaprabhaNewsNetwork |  
Published : Jan 17, 2026, 02:45 AM IST
16ಸಿಎಚ್‌ಎನ್‌55ಮಹಾರಾಷ್ಟ್ರದ ಮುಂಬೈ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಪ್ರಚಂಡ ಜಯಭೇರಿ ಭಾರಿಸಿ ಅಧಿಕಾರದ  ಗದ್ದುಗೆ  ಹಿಡಿದ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗು ಮುಖಂಡರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಅಚರಣೆ ಮಾಡಿದರು. | Kannada Prabha

ಸಾರಾಂಶ

ಮಹಾರಾಷ್ಟ್ರದ ಮುಂಬೈ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಪ್ರಚಂಡ ಜಯಭೇರಿ ಭಾರಿಸಿ ಅಧಿಕಾರದ ಗದ್ದುಗೆ ಹಿಡಿದ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗು ಮುಖಂಡರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಅಚರಣೆ ಮಾಡಿದರು.

ಕನ್ನಡಪ್ರಭ ವಾರ್ತೆ, ಚಾಮರಾಜನಗರ

ಮಹಾರಾಷ್ಟ್ರದ ಮುಂಬೈ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಪ್ರಚಂಡ ಜಯಭೇರಿ ಭಾರಿಸಿ ಅಧಿಕಾರದ ಗದ್ದುಗೆ ಹಿಡಿದ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗು ಮುಖಂಡರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಅಚರಣೆ ಮಾಡಿದರು.

ನಗರದ ಚಾಮರಾಜೇಶ್ವರ ಉದ್ಯಾನವನ ಮುಂಭಾಗದ ಬಿಜೆಪಿ ಮಂಡಲದ ಅಧ್ಯಕ್ಷ ಕಾಡಹಳ್ಳಿ ಕುಮಾರ್ ಹಾಗೂ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸೂರ್ಯಬಾಲರಾಜ್ ನೇತೃತ್ವದಲ್ಲಿ ಸಮಾವೇಶಗೊಂಡು ಬಿಜೆಪಿ ಬಾವುಟ ಹಿಡಿದು ಮೆರವಣಿಗೆ ನಡೆಸಿ, ಭುವನೇಶ್ವರಿ ವೃತ್ತದಲ್ಲಿ ಬಿಜೆಪಿ, ಶಿವಸೇನಾ, ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಮಹಾರಾಷ್ಟ್ರ ಸಿಎಂ ಪರ ಘೋಷಣೆಗಳನ್ನು ಕೂಗಿದರು. ನಂತರ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಚುಡಾ ಮಾಜಿ ಅಧ್ಯಕ್ಷ ಕುಲಗಾಣ ಶಾಂತಮೂರ್ತಿ ಮಾತನಾಡಿ, ಸುಭದ್ರ ಹಾಗೂ ಸದೃಢ ಭಾರತ ನಿರ್ಮಾಣ ಮಾಡುವಲ್ಲಿ ಬಿಜೆಪಿ ಹಾಗೂ ಶಿವಸೇನಾ ನೇತೃತ್ವದ ಮೈತ್ರಿಕೂಟದಿಂದ ಮಾತ್ರ ಸಾಧ್ಯ ಎಂಬುದನ್ನು ಅರಿತಿರುವ ಮಹಾರಾಷ್ಟ್ರದ ಪ್ರಜ್ಞಾವಂತ ಮತದಾರರು ಮತ್ತೋಮ್ಮೆ ಮಹಾನಗರ ಪಾಲಿಕೆಯಲ್ಲಿ ಸಾಬೀತು ಮಾಡಿದ್ದಾರೆ. ಮಹಾನಗರ ಪಾಲಿಕೆ ಅಭಿವೃದ್ಧಿ ಮತ್ತು ಮುಂಬೈ ನಗರವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಬಿಜೆಪಿ, ಶಿವಸೇನಾ ಮೈತ್ರಿಕೂಟಕ್ಕೆ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ಇದೊಂದು ಐತಿಹಾಸಿಕ ಗೆಲುವಾಗಿದ್ದು, ಮುಂದಿನ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ ಎಂದರು.

ಮಹಾರಾಷ್ಟ್ರ ಜನರರಿಗೆ ಕೃತಜ್ಞತೆ ಹಾಗೂ ಅಲ್ಲಿನ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರಿಗೆ ಚಾಮರಾಜಗನರ ಜಿಲ್ಲೆಯ ಜನತೆ ಪರವಾಗಿ ಹಾಗೂ ಪಕ್ಷದ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಶಾಂತಮೂರ್ತಿ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಕಾಡಹಳ್ಳಿಕುಮಾರ್, ನಗರ ಮಂಡಲದ ಅಧ್ಯಕ್ಷ ಶಿವರಾಜ್, ಯುವ ಮೋರ್ಚಾ ಅಧ್ಯಕ್ಷ ಸೂರ್ಯ ಬಾಲರಾಜ್, ಮುಖಂಡರಾದ ನಗರಸಭಾ ಮಾಜಿ ಸದಸ್ಯ ಮನೋಜ್‌ಪಟೇಲ್, ಚಂದ್ರಶೇಖರ್, ವೇಣುಗೋಪಾಲ್, ಶಿವಣ್ಣ, ಕುಮಾರಸ್ವಾಮಿ, ವೀರಭದ್ರಸ್ವಾಮಿ, ಮಂಜುಬೆಣ್ಣೆ, ಮಂಜುನಾಥ್, ಅಗರರಾಜು, ಡ್ರೈವರ್ ಮಹದೇವಯ್ಯ, ಹೇಮಂತ್‌ಕುಮಾರ್, ಜಯರಾಮಶೆಟ್ಟಿ, ನಾಗೇಂದ್ರ ಬಾಬು, ಮಾಲಂಗಿ ಮೂರ್ತಿ, ಭಾಸ್ಕರ್, ಪ್ರವೀಣ್, ರವಿ, ಆನಂದ್, ಬಸವರಾಜು, ಕೇಬಲ್ ರಂಗಸ್ವಾಮಿ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಂದಾರ ಶಾಲೆಯಲ್ಲಿ ಸುಗ್ಗಿ ಹಬ್ಬದ ಸಂಭ್ರಮ
ಮೂಡುಬಿದಿರೆ ಸಿಂಥೆಟಿಕ್ ಟ್ರ್ಯಾಕ್ ಗೆ 11 ವರ್ಷ ಕ್ರೀಡಾಭಿಮಾನಿಗಳ ಹರ್ಷ