ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ, ಸಿನಿಮೊಗೆ ಶಿವಮೊಗ್ಗ ಚಿತ್ರ ಸಮಾಜ, ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಿನಿಮಾ ವಸ್ತು ನೋಡುವ ಬಗೆ ಮತ್ತು ಶಿಕ್ಷಣ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜಕ್ಕೆ ಶಿಕ್ಷಣ ನೀಡುತ್ತಿದ್ದ ಅಂದಿನ ಸಿನಿಮಾಗಳು ಸದಾ ಸ್ಮರಣೀಯ. ತುಂಬು ಕುಟುಂಬದ ಅವಶ್ಯಕತೆ, ವ್ಯಕ್ತಿತ್ವ ವಿಕಸನ, ಸಮಾಜಕ್ಕೆ ಕೊಡುಗೆ ನೀಡುವಂತಹ ಪ್ರೇರಣೆ ನೀಡುತ್ತಿದ್ದ ಸಿನಿಮಾಗಳು ಇತಿಹಾಸದ ಪುಟಗಳಲ್ಲಿ ಸೇರಿ ಹೋಗಿವೆ. ಇಂದು ಕುಟುಂಬ ಸಹಿತ ಸಿನಿಮಾಗಳು ನೋಡಲು ಮುಜುಗರವಾಗುವ ಸಂದರ್ಭ ಸೃಷ್ಟಿಯಾಗುತ್ತಿದೆ ಎಂದರು.ಕನ್ನಡ ಚಿತ್ರರಂಗಕ್ಕೆ ಅದ್ಭುತ ಕಲಾತ್ಮಕ ಸಿನಿಮಾಗಳನ್ನು ನೀಡುತ್ತ ಮೇರು ಸದೃಶ್ಯದ ವ್ಯಕ್ತಿತ್ವವಾಗಿ ರೂಪಗೊಂಡವರು ಗಿರೀಶ್ ಕಾಸರವಳ್ಳಿ. ಸತ್ವಯುತ ಸಿನಿಮಾಗಳು ರೂಪಿಸುವ ಅವಶ್ಯಕತೆಗಳಿಗೆ ನಮ್ಮ ಪೂರ್ವಿಕ ಸಿನಿಮಾ ನಿರ್ದೇಶಕರು ಕಲಾವಿದರು ಆಶಾಕಿರಣವಾಗಿ ನಿಲ್ಲಲಿದ್ದಾರೆ.
ಸಿನಿಮಾ ಟಾಕೀಸ್ ಮಾಯವಾಗಿ ದೊಡ್ಡ ಮಾಲ್ಗಳಾಗಿವೆ. ಇತಿಹಾಸವನ್ನು ಅರಿಯದಾತ ಎಂದಿಗೂ ಭವಿಷ್ಯವನ್ನು ರೂಪಿಸಿ ಕೊಳ್ಳಲಾರ. ಕಲಿಯುವ ವಿದ್ಯೆಯಲ್ಲಿ ಏರಿಳಿತವಾದರೂ ಪರವಾಗಿಲ್ಲ ಸಂಸ್ಕಾರ ಕಲಿಸುವಲ್ಲಿ ಏರಿಳಿತವಾಗದಿರಲಿ. ವಿದ್ಯೆ ಕಲಿತ ವರು ಭ್ರಷ್ಟರಾಗಬಹುದು, ಅದರೇ ಸಂಸ್ಕಾರ ಕಲಿತವರು ಎಂದೂ ದಾರಿ ತಪ್ಪುವುದಿಲ್ಲ ಎಂದು ಹೇಳಿದರು. ಅಂತಹ ಸಂಸ್ಕಾರ ನೀಡುವ ಸಿನಿಮಾಗಳನ್ನು ಅಧ್ಯಯನ ನಡೆಸುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎನ್.ಕೆ.ಚಿದಾನಂದ ಅಧ್ಯಕ್ಷತೆ ವಹಿಸಿ ದ್ದರು. ರಾಷ್ಟ್ರೀಯ ಶಿಕ್ಷಣ ಸಮಿತಿ ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಸಿನಿಮೊಗೆ ಶಿವಮೊಗ್ಗ ಚಿತ್ರ ಸಮಾಜ ಸಂಚಾಲಕ ಎಚ್.ಯು.ವೈದ್ಯನಾಥ, ಮೈತ್ರಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಶಾಲಿನಿ, ಅಲ್ ಮೊಹಮದ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸೋಮಶೇಖರ್, ಕುವೆಂಪು ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಜಿ.ಮಧು, ಸಂಯೋಜಕಿ ಡಾ.ಈ.ಲಾವಣ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.