ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದ ಬೂದಿಗುಂಡಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ರಾಜ್ಯದ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಬೌದ್ಧನೆಲೆಯ ಉತ್ಖನನಕ್ಕೆ ಚಾಲನೆ ನೀಡುವ ಮೂಲಕ ಅವರು ಮಾತನಾಡಿದರು.
ರಾಜಘಟ್ಟ ಗ್ರಾಮದಲ್ಲಿ ಬೌದ್ಧನೆಲೆಯ ಕುರಿತಾದ ಸ್ತೂಪಗಳು ಹಾಗೂ ವಿವಿಧ ಅವಶೇಷಗಳು ಪತ್ತೆಯಾಗಿದ್ದು, ಕಾರಣಾಂತರದಿಂದ ಅಪೂರ್ಣಗೊಂಡಿದ್ದ ಉತ್ಖನನಕ್ಕೆ, ಕೇಂದ್ರ ಪುರಾತತ್ವ ಇಲಾಖೆ ಅನುಮೋದನೆಯೊಂದಿಗೆ ಈಗ ರಾಜ್ಯ ಸರ್ಕಾರದಿಂದ ಮರು ಚಾಲನೆ ನೀಡಲಾಗಿದೆ. ಪ್ರೊ. ಎಮ್.ಎಸ್. ಕೃಷ್ಣ ಮೂರ್ತಿ ಅವರು ಈ ಉತ್ಖನನದ ಪ್ರಧಾನ ನಿರ್ದೇಶಕರಾಗಿರುತ್ತಾರೆ ಎಂದರು.2001 ಮತ್ತು 2004ರಲ್ಲಿ ಸಂಶೋಧಕ ಪ್ರೊ.ಎಂ.ಎಸ್.ಕೃಷ್ಣಮೂರ್ತಿ ಮಾರ್ಗದರ್ಶನದಲ್ಲಿ ರಾಜಘಟ್ಟದಲ್ಲಿ ಕ್ರಮಬದ್ಧವಾಗಿ ಉತ್ಖನನ ಕಾರ್ಯ ನಡೆದಿತ್ತು. ಅದರ ಫಲವಾಗಿ ಬೌದ್ದ ಧರ್ಮಿಯರು ಚೈತ್ಯಾಲಯ ಮತ್ತು ಅದರ ಸುತ್ತಲೂ ನಿರ್ಮಿತವಾಗಿದ್ದ ಬೌದ್ಧ ವಿಹಾರದ ಪಾಯದ ಅವಶೇಷಗಳು ಬೆಳಕಿಗೆ ಬಂದವು. ಈಗ ನಡೆಯಲಿರುವ ಈ ಮಹತ್ತರ ಉತ್ಖನನ ಕಾರ್ಯಕ್ರಮದಿಂದ ಬೌದ್ಧಧರ್ಮದ ಇತಿಹಾಸ, ಕುರುಹುಗಳು, ಮಾರ್ಗದರ್ಶನ ಹಾಗೂ ಬುದ್ದನ ಸಂದೇಶ ಅರಿಯಲು ಸಹಕಾರಿಯಾಗಲಿದೆ ಎಂದರು.
ಬುದ್ಧನ ಸಂದೇಶಗಳು ಜನರ ಬದುಕಿಗೆ ಸಮೀಪವಾಗಿದ್ದು, ನಾವೆಲ್ಲರೂ ಬುದ್ಧನ ಸಂದೇಶಗಳನ್ನು ಅರಿಯಬೇಕು, ಅವರ ಸಂದೇಶಗಳೇ ನಮಗೆ ಪ್ರೇರಣೆ ಎಂದರಲ್ಲದೆ, ಉತ್ಖನನ ಕಾರ್ಯಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವ ಡಾ.ಎಚ್.ಕೆ ಪಾಟೀಲ್ ಅವರು ಸೂಚಿಸಿದರು.ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಹಾಗೂ ಸಂಶೋಧಕ ಎಂ.ಎಸ್ ಕೃಷ್ಣಮೂರ್ತಿ, ಸಾಹಿತಿಗಳಾದ ಡಾ.ಎಲ್. ಹನುಮಂತಯ್ಯ, ನಾಡೋಜ ಪ್ರೊ.ಹಂಪ ನಾಗರಾಜ್, ಮೈಸೂರಿನ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತರು ದೇವರಾಜು ಎ., ದೊಡ್ಡಬಳ್ಳಾಪುರ ಮಾಜಿ ಶಾಸಕರಾದ ವೆಂಕಟರಮಣಯ್ಯ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ರಾಜಣ್ಣ, ರಾಜಾಘಟ್ಟ ಉತ್ಖನನ ಭೂಮಾಲೀಕರು ಕೃಷ್ಣಪ್ಪ ಎನ್.ಅಂಜಿನಪ್ಪ, ಸ್ಥಳೀಯ ಜನ ಪ್ರತಿನಿಧಿಗಳು, ಇತರರು ಉಪಸ್ಥಿತರಿದ್ದರು.