ಸತತ ಪ್ರಯತ್ನದಿಂದ ಇತಿಹಾಸ ಸೃಷ್ಟಿ ಸಾಧ್ಯ: ಕೆ.ಎಸ್.ಕಲ್ಮಠ್

KannadaprabhaNewsNetwork |  
Published : Apr 11, 2026, 01:15 AM IST
ಪೋಟೋ, 10ಎಚ್‌ಎಸ್‌ಡಿ2: ಪಟ್ಟಣದ ಎಸ್.ನಿಜಲಿಂಗಪ್ಪ ಪಿಯು ಕಾಲೇಜಿನಲ್ಲಿ ಈ ಬಾರಿ ಪರೀಕ್ಷೆಯಲ್ಲಿ  ಹೆಚ್ಚು ಅಂಕಗಳಿಸಿ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಎಸ್.ನಿಜಲಿಂಗಪ್ಪ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರು ಶುಕ್ರವಾರ ಸನ್ಮಾನಿಸಿ, ಅಭಿನಂದಿಸಲಾಯಿತು. | Kannada Prabha

ಸಾರಾಂಶ

ಸತತ ಪ್ರಯತ್ನದಿಂದ ಹೊಸ ಇತಿಹಾಸ ಸೃಷ್ಟಿಸಲು ಸಾಧ್ಯ ಎಂದು ಎಸ್.ನಿಜಲಿಂಗಪ್ಪ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕೆ.ಎಸ್.ಕಲ್ಮಠ್ ಹೇಳಿದರು.

ಕನ್ನಡಪ್ರಭ ವಾರ್ತೆ ಹೊಸದುರ್ಗ

ಸತತ ಪ್ರಯತ್ನದಿಂದ ಹೊಸ ಇತಿಹಾಸ ಸೃಷ್ಟಿಸಲು ಸಾಧ್ಯ ಎಂದು ಎಸ್.ನಿಜಲಿಂಗಪ್ಪ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕೆ.ಎಸ್.ಕಲ್ಮಠ್ ಹೇಳಿದರು.

ಪಟ್ಟಣದ ಎಸ್.ನಿಜಲಿಂಗಪ್ಪ ಪಿಯು ಕಾಲೇಜಿನಲ್ಲಿ ಶುಕ್ರವಾರ ಈ ಬಾರಿ ಹೆಚ್ಚು ಅಂಕಗಳಿಸಿ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಶಿಕ್ಷಣ ಸಂಸ್ಥೆ ವತಿಯಿಂದ ಸನ್ಮಾನಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಕೇವಲ ಸರ್ಕಾರಿ ಕೆಲಸಕ್ಕೆ ಹೋಗುವುದಕ್ಕೆ ಸೀಮಿತವಾಗದೇ, ಸ್ವತಃ ಉದ್ಯೋಗ ಸೃಷ್ಟಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು. ಇಂತಹ ಸಾಮರ್ಥ್ಯ ಹಾಗೂ ಕೌಶಲ್ಯ ಬೆಳೆಸಲು ನಮ್ಮ ಸಂಸ್ಥೆ ಬದ್ಧವಾಗಿದೆ. ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಸಮಯಕ್ಕೆ ಹೆಚ್ಚು ಮಹತ್ವ ಕೊಟ್ಟು, ನುರಿತ ಅನುಭವಿ ಅಧ್ಯಾಪಕರಿಂದ ಗುಣಮಟ್ಟದ ಶಿಕ್ಷಣ ಕೊಡಿಸುತ್ತಿರುವುದರಿಂದ ಉತ್ತಮ ಫಲಿತಾಂಶ ಬರಲಿಕ್ಕೆ ಸಾಧ್ಯವಾಗಿದೆ ಎಂದರು.

ಅಕಾಡೆಮಿಕ್ ಡೈರೆಕ್ಟರ್ ಎಂ.ಬಿ.ತಿಪ್ಪೇಸ್ವಾಮಿ ಮಾತನಾಡಿ, ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಪ್ರಯತ್ನ ಪಟ್ಟರೆ ಫಲಿತಾಂಶದಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯಬಹುದು. ಆದರೂ ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೂ ನಮ್ಮ ಸಂಸ್ಥೆಯಲ್ಲಿ ಪ್ರವೇಶ ಕಲ್ಪಿಸಿ, ಇಷ್ಟೊಂದು ಫಲಿತಾಂಶ ಬಂದಿರುವುದು ಶ್ಲಾಘನೀಯ. ಈ ರೀತಿ ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಯನ್ನು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣನಾಗುವಂತೆ ಮಾಡುವುದು ನಮ್ಮ ಸಂಸ್ಥೆಯ ಧ್ಯೇಯ ಎಂದು ತಿಳಿಸಿದರು.

ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷ ಎಂ. ಶಿವಲಿಂಗಪ್ಪ, ಪ್ರಾಂಶುಪಾಲ ದಯಾನಂದ್, ವಿದ್ಯಾನಿಧಿ ಸಂಯೋಜಕ ರತ್ನಕುಮಾರ್, ಸೌಭಾಗ್ಯ, ಮಲ್ಲಿಕಾರ್ಜುನ್, ಕಾಲೇಜು ಸಿಬ್ಬಂದಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಸರೀಘಟ್ಟ ಚೌಡೇಶ್ವರಿ ದೇವಿ ಜಾತ್ರಾಮಹೋತ್ಸವ
ಗ್ರಾಮೀಣ ಜನರಿಗೆ ಗ್ರಾಮ-ನೆಟ್ ಭಾರತ ಯೋಜನೆ ವರದಾನ