ಕನ್ನಡಪ್ರಭ ವಾರ್ತೆ ಬೆಳಗಾವಿ
ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ ಮಾತನಾಡಿ, ಕುಟುಂಬ ಸಮೇತರಾಗಿ ಆಗಮಿಸಿ ಮತದಾನದ ಹಕ್ಕು ಚಲಾಯಿಸಿದ್ದೇವೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಮನವಿ ಮಾಡಿದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಸುಳೇಬಾವಿ ಮಹಾಲಕ್ಷ್ಮೀ ದೇವಿ, ಉಚಗಾಂವ ಮಳಿಕರಣಿದೇವಿ ಆಶೀರ್ವಾದ ಪಡೆದ ಮತ ಹಾಕಿದ್ದೇವೆ. ಈ ಬಾರಿ ಬೆಳಗಾವಿ ಸ್ವಾಭಿಮಾನ ಗೆಲ್ಲುತ್ತದೆ. ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ ಒಳಗೊಂಡು ಎಲ್ಲ ಕಾಂಗ್ರೆಸ್ ಮುಖಂಡರು, ಶಾಸಕರು ಒಗ್ಗಟ್ಟು ಪ್ರದರ್ಶಿಸಿದ್ದೇವೆ. ಆದ್ದರಿಂದ ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ಗೆದ್ದೆ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಭಾರತ ಪ್ರಜಾಪ್ರಭುತ್ವದ ಅತೀ ದೊಡ್ಡ ಹಬ್ಬ ಮತದಾನದ ದಿನ. ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಉತ್ತಮ ಜನ ಪ್ರತಿನಿಧಿ ಆಯ್ಕೆ ಮಾಡಬೇಕು ಎಂದು ಕೋರಿದರು.
----------------------------------ಕೋಟ್.....ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ ಪರ ಉತ್ತಮ ಅಲೆಯಿದೆ. ಕ್ಷೇತ್ರದಲ್ಲಿ ಜಯ ದಾಖಲಿಸುವ ಮೂಲಕ ಕಾಂಗ್ರೆಸ್ ಹೊಸ ಇತಿಹಾಸ ಸೃಷ್ಟಿಸಲಿದೆ. ನನ್ನ ಸಹೋದರ, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಪಡೆಯೇ ನನ್ನ ದೊಡ್ಡ ಶಕ್ತಿ. ಅರಬಾವಿ, ಗೋಕಾಕ, ಬೆಳಗಾವಿ ಉತ್ತರ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮುನ್ನಡೆಗಳಿಸಲಿದೆ. ಅಜ್ಜಯ್ಯನವರ (ನೊಣವಿನಕೆರೆಯ ಕಾಡಾಸಿದ್ದೇಶ್ವರದ ಸ್ವಾಮೀಜಿ) ಆಶೀರ್ವಾದವಿದೆ.-ಲಕ್ಷ್ಮೀ ಹೆಬ್ಬಾಳಕರ್, ಸಚಿವೆ.--------------------------------------
ಇದು ನಮ್ಮ ಹಕ್ಕು. ದೇಶ ಕಟ್ಟಲು ಮತ್ತು ಒಳ್ಳೆಯ ಸರ್ಕಾರ ಬರಲು ಪ್ರತಿಯೊಬ್ಬರು ಮತ ಹಾಕಬೇಕು. ಬಹಳ ವಾತಾವರಣ ಕ್ಷೇತ್ರದಲ್ಲಿದ್ದು, ಈ ಬಾರಿ ನೂರಕ್ಕೆ ನೂರು ಗೆಲ್ಲುವ ವಿಶ್ವಾಸವಿದೆ. ಬೆಳಗಾವಿ ಲೋಕಸಭೆಯಲ್ಲಿ ಇತಿಹಾಸ ನಿರ್ಮಾಣ ಆಗುತ್ತದೆ.- ಮೃಣಾಲ್ ಹೆಬ್ಬಾಳಕರ, ಬೆಳಗಾವಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ.----------------------
ಲಕ್ಷ್ಮೀ ಹೆಬ್ಬಾಳಕರವರ 25 ವರ್ಷಗಳ ರಾಜಕೀಯ ಸಂಘರ್ಷ, ಜನರ ಜತೆಗಿನ ಅವರ ಸಂಬಂಧ ಮತ್ತು ಸಂಪರ್ಕ, ಜಿಲ್ಲಾದಾದ್ಯಂತ ಅವರ ಅಭಿಮಾನಿ ಬಳಗ ಸೇರಿ ಎಲ್ಲ ವರ್ಕೌಟ್ ಆಗುತ್ತದೆ. ಗೋಕಾಕ, ಅರಬಾವಿ, ಬೆಳಗಾವಿ ದಕ್ಷಿಣದಲ್ಲಿ ಅಚ್ಚರಿ ಫಲಿತಾಂಶ ಆಗುತ್ತದೆ.-ಚನ್ನರಾಜ ಹಟ್ಟಿಹೊಳಿ, ವಿಧಾನ ಪರಿಷತ್ ಸದಸ್ಯ.-----------------------------------------