ಎಚ್.ಐ.ವಿ. ಏಡ್ಸ್ ಜಾಗೃತಿ ಕಾರ್ಯಕ್ರಮ

KannadaprabhaNewsNetwork |  
Published : Sep 17, 2025, 01:08 AM IST

ಸಾರಾಂಶ

ಎಚ್‌ಐವಿ ಏಡ್ಸ್‌ ಜಾಗೃತಿಗಾಗಿ ಬೈಕ್ ರ್ಯಾಲಿ ನಡೆಯಿತು. ಕಾರ್ಯಕ್ರಮದಲ್ಲಿ ಗಣ್ಯರು ಮತ್ತು ಅಧಿಕಾರಿಗಳು ಪಾಲ್ಗೊಂಡರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಪ್ರಸಕ್ತ (2025-26) ಸಾಲಿನ ಯುವಜನೋತ್ಸವ ಎಚ್‍ಐ.ವಿ/ಏಡ್ಸ್ ಅರಿವು ಆಂದೋಲನ-ಕಾರ್ಯಕ್ರಮದ ಅಂಗವಾಗಿ (ಬೈಕ್ ರ್ಯಾಲಿ, ಎಚ್‍ಐವಿ/ಏಡ್ಸ್ ನಿಯಂತ್ರಣಕ್ಕಾಗಿ ಯುವಜನತೆ) ಎಚ್‍ಐವಿ/ಏಡ್ಸ್ ಜಾಗೃತಿಗಾಗಿ ಬೈಕ್ ರ್ಯಾಲಿ ನಡೆಯಿತು.

ಈ ಸ್ಪರ್ಧೆಯ ಮುಖ್ಯ ಉದ್ದೇಶ ಎಚ್‍ಐವಿ/ಏಡ್ಸ್ ಬಗ್ಗೆ ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದು, ಉಚಿತ ರಾಷ್ಟ್ರೀಯ ಸಹಾಯವಾಣಿ 1097, ಎಚ್.ಐ.ವಿ/ಎಡ್ಸ್ (ತಡೆಗಟ್ಟುವಿಕೆ ಹಾಗೂ ನಿಯಂತ್ರಣ) ಕಾಯಿದೆ 2017 ಮತ್ತಿತರ ಕುರಿತು ಅರಿವು ಮೂಡಿಸಲಾಯಿತು.

ಅದರಂತೆ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಎಚ್.ಐ.ವಿ/ಏಡ್ಸ್ ಅರಿವು ಆಂದೋಲನ 2025-26ರ ಕಾರ್ಯಕ್ರಮದ ಅಂಗವಾಗಿ ಗುರುವಾರ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ಜಿಲ್ಲೆ ಇವರ ವತಿಯಿಂದ ಬೈಕ್ ರ್ಯಾಲಿ ನಡೆಯಿತು.

ಈ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಕುಮಾರ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಚಕ್ರವರ್ತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ದೀಪಕ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಸನತ್ ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|| ಶ್ರೀನಿವಾಸ್ ಅವರು ಹಸಿರು ನಿಶಾನೆ ಮುಖಾಂತರ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಅರುಣ್ ಕುಮಾರ್‌, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಜಿಲ್ಲಾ ಮೇಲ್ವಿಚಾರಕರಾದ ಸುನೀತ ಮುತ್ತಣ್ಣ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಉಷಾ, ಕಮಲ ಮತ್ತು ಐಸಿಟಿಸಿ, ಏ.ಆರ್.ಟಿ. ಚೈತನ್ಯ ಆರೈಕೆ ಮತ್ತು ಬೆಂಬಲ ಕೇಂದ್ರ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಬೈಕ್ ರ್ಯಾಲಿಯು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಿಂದ ಹೊರಟು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ತಲುಪಿತು.

PREV

Recommended Stories

ಗ್ರಾಮೀಣ ಭಜನಾ ಮಂಡಳಿಗಳಲ್ಲಿ ತತ್ವಪದಗಳು ಜೀವಂತ
ರಾಮದುರ್ಗ ಧನಲಕ್ಷ್ಮೀ ಶುಗರ್ ಚುನಾವಣೆ: ಸತತ 4ನೇ ಬಾರಿಗೆ ಯಾದವಾಡರ ನೇತೃತ್ವಕ್ಕೆ ಜಯ