ಜಿ.ಶಂಕರ್‌ ಕಾಲೇಜಿನಲ್ಲಿ ಎಚ್‌ಐವಿ ಏಡ್ಸ್‌ ಮಾಹಿತಿ, ಜಾಗೃತಿ ಕಾರ್ಯಕ್ರಮ

KannadaprabhaNewsNetwork |  
Published : Mar 21, 2025, 12:31 AM IST
20ಏಡ್ಸ್ | Kannada Prabha

ಸಾರಾಂಶ

ಅಜ್ಜರಕಾಡು ಡಾ. ಜಿ. ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಎಚ್.ಐ.ವಿ - ಏಡ್ಸ್ ಕುರಿತು ಅರಿವು ಮತ್ತು ಜಾಗೃತಿ ಕಾರ್ಯಕ್ರಮ ಕಾಲೇಜಿನ ಯು.ಜಿ. ಸಭಾಂಗಣದಲ್ಲಿ ನೆರವೇರಿತು.

ಕನ್ನಡಪ್ರಭ ವಾರ್ತೆ ಉಡುಪಿ

ನಗರದ ಅಜ್ಜರಕಾಡು ಡಾ. ಜಿ. ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಎಚ್.ಐ.ವಿ - ಏಡ್ಸ್ ಕುರಿತು ಅರಿವು ಮತ್ತು ಜಾಗೃತಿ ಕಾರ್ಯಕ್ರಮ ಕಾಲೇಜಿನ ಯು.ಜಿ. ಸಭಾಂಗಣದಲ್ಲಿ ನೆರವೇರಿತು. ರಾಷ್ಟ್ರೀಯ ಸೇವಾ ಯೋಜನೆ, ಐ.ಕ್ಯೂ.ಎ.ಸಿ, ರೆಡ್‌ ರಿಬ್ಬನ್ ಕ್ಲಬ್ ಮತ್ತು ಉಡುಪಿ ಜಿಲ್ಲಾ ಏಡ್ಸ್ ನಿಂಯತ್ರಣ ಹಾಗು ತಡೆಗಟ್ಟುವ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಉಪಸ್ಥಿತರಿದ್ದ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಘಟಕದ ಅಧೀಕ್ಷಕ ಮಹಾಬಲೇಶ್ವರ ಬಿ. ಮಾತನಾಡಿ, ಉಡುಪಿ ಜಿಲ್ಲೆಯನ್ನು ಏಡ್ಸ್ ಮುಕ್ತವಾಗಿಸುವುದು ನಮ್ಮೆಲ್ಲರ ಜವಾಬ್ದಾರಿ. ಅದಕ್ಕಾಗಿ ಎಚ್.ಐ.ವಿ. - ಏಡ್ಸ್‌ನಂತಹ ಮಹಾಮಾರಿ ಕಾಯಿಲೆಯ ಕುರಿತು ಯುವ ಜನರಲ್ಲಿ ಮುಖ್ಯವಾಗಿ ವಿದ್ಯಾರ್ಥಿಗಳಲ್ಲಿ ಅರಿವು ಮತ್ತು ಜಾಗೃತಿ ಇರುವುದು ಬಹು ಮುಖ್ಯವಾಗಿದೆ ಎಂದರು.

ಆಸರೆ ಫೌಂಡೇಶನ್‌ನ ಸಂಜೀವ ವಂಡ್ಸೆ ಮುಖ್ಯ ಅಥಿತಿಯಾಗಿ ಉಪಸ್ಥಿತರಿದ್ದು, ತಮ್ಮ ಜೀವನದ ಅನುಭವವನ್ನು ವಿದ್ಯಾರ್ಥಿನಿಯರೊಂದಿಗೆ ಹಂಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಧರ್ ಪ್ರಸಾದ್ ಕೆ. ವಹಿಸಿದ್ದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ. ನಿಕೇತನಾ ಪ್ರಸ್ತಾವಿಕವಾಗಿ ಮಾತನಾಡಿ ಅಥಿತಿಗಳನ್ನು ಸ್ವಾಗತಿಸಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ ಡಿ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಜೆಪಿ ಎಷ್ಟು ಕೇಸ್‌ ಸಿಬಿಐಗೆ ನೀಡಿದೆ? : ಸಿಎಂ
ರಾಷ್ಟ್ರಧ್ವಜ ತಯಾರಿಸ್ತಿ ದ್ದ ಕೈಗಳಲ್ಲೀಗ ಕೆಲಸವಿಲ್ಲ!