ಸಂತ ಸೆಬಾಸ್ಟೀನ್ ದೇವಾಲಯದಲ್ಲಿ ಧ್ವಜಾರೋಹಣ, ವಿಶೇಷ ಬಲಿ ಪೂಜೆ

KannadaprabhaNewsNetwork |  
Published : May 07, 2024, 01:03 AM IST
ವಾರ್ಷಿಕೋತ್ಸವ | Kannada Prabha

ಸಾರಾಂಶ

ಸಂಜೆ ದೇವಾಲಯದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ನೂತನ ದೇವಾಲಯದಲ್ಲಿ ಹಬ್ಬದ ಆರಾಧನೆ ಮತ್ತು ವಿಶೇಷ ಬಲಿ ಪೂಜೆ ಸಲ್ಲಿಸಲಾಯಿತು. ಕೊನೆಯಲ್ಲಿ ಆಶೀರ್ವಚನ ನೀಡುವ ಮೂಲಕ 2 ದಿನದ ವಾರ್ಷಿಕೋತ್ಸವ ಸಮಾರಂಭಕ್ಕೆ ತೆರೆ ಎಳೆಯಲಾಯಿತು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

7ನೇ ಹೊಸಕೋಟೆ ಸಂತ ಸೆಬಾಸ್ಟೀನ್ ಅವರ ದೇವಾಲಯದ ವಾರ್ಷಿಕೋತ್ಸವದ 2 ದಿನದ ವಿಶೇಷ ಪೂಜೆ ಸೇರಿದಂತೆ ಆರಾಧನೆ, ಮಕ್ಕಳಿಗೆ ಪ್ರಥಮ ಪರಮ ಪ್ರಸಾದ ಹಾಗೂ ದೇವಾಲಯದ ಸುತ್ತ ಸಂತ ಸೆಬಾಸ್ಟೀನ್ ಅವರ ಮೂರ್ತಿಯ ಮೆರವಣಿಗೆಯನ್ನು ನೆರವೇರಿಸಲಾಯಿತು.

ಶನಿವಾರ ಸಂತ ಸೆಬಾಸ್ಟೀನ್ ರವರ ದೇವಾಲಯದ ಧರ್ಮಗುರು ವಂ.ರೆ.ಫಾದರ್ ಸೆಬಾಸ್ಟೀನ್ ಪೂವತ್ತಿಗಲ್ ಅವರು ಸಂಜೆ ದೇವಾಲಯದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ನೂತನ ದೇವಾಲಯದಲ್ಲಿ ಹಬ್ಬದ ಆರಾಧನೆ ಹಾಗೂ ವಿಶೇಷ ಬಲಿ ಪೂಜೆ ಸಲ್ಲಿಸಿದರು.

ಭಾನುವಾರ ಬೆಳಗ್ಗೆ 10 ಗಂಟೆಗೆ ಸಂತ ಸೆಬಾಸ್ಟೀನ್ ಅವರ ವಾರ್ಷಿಕೋತ್ಸವದ ಅಂಗವಾಗಿ ಮಡಿಕೇರಿ, ಸುಂಟಿಕೊಪ್ಪ, ಕೊಡಗರಹಳ್ಳಿ, ಕಂಬಿಬಾಣೆ, ಕುಶಾಲನಗರ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಕ್ರೈಸ್ತ ಬಾಂಧವರು ಅಂಬು ಕಾಣಿಕೆಯ ಹರಕೆಗಳನ್ನು ಸಲ್ಲಿಸಿದರು. ನಂತರ ಬೆಳ್ತಂಗಡಿ ಧರ್ಮಕ್ಷೇತ್ರದ ಧರ್ಮಗುರು ವಂ.ರೆ.ಫಾದರ್ ಟೋಮಿ ಕಳ್ಳಿಪಾತ್ ಅವರು ಹಬ್ಬದ ಆಡಂಬರ ಬಲಿಪೂಜೆ ಹಾಗೂ ಮಕ್ಕಳಿಗೆ ನೂತನ ಪರಮ ಪ್ರಸಾದವನ್ನು ನೀಡಿದರು. ನಂತರ ಸಂತ ಸಬಾಸ್ಟೀನ್ ಅವರ ಮೂರ್ತಿಯನ್ನು ಹಿಡಿದು ದೇವಾಲಯದ ಆವರಣದಲ್ಲಿ ಮೆರವಣಿಗೆಯನ್ನು ನಡೆಸಲಾಯಿತು. ಕೊನೆಯಲ್ಲಿ ಆಶೀರ್ವಚನವನ್ನು ನೀಡುವ ಮೂಲಕ 2 ದಿನದ ವಾರ್ಷಿಕೋತ್ಸವ ಸಮಾರಂಭಕ್ಕೆ ತೆರೆ ಎಳೆದರು.

ಇದೇ ಸಂದರ್ಭ ನೂತನ ದೇವಾಲಯ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಮರದ ಕೆತ್ತನೆ ಕೆಲಸ ನಿರ್ವಹಿಸಿದ್ದ ಕೆತ್ತನೆಗಾರರಿಗೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ಸೇಕ್ರೆಟ್ ಆರ್ಟ್ ಕನ್ಯಾಸ್ತ್ರೀ ಮಠದ ಕನ್ಯಾಸ್ತ್ರೀಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತುಮಕೂರಿನ ಠಾಣೆಯಲ್ಲಿ ಲಾಕಪ್‌ ಡೆತ್‌!
ವಿಚ್ಛೇದಿತ ಪತ್ನಿ, ಮಗಳ ಮೇಲೆಯೇ ಆ್ಯಸಿಡ್‌ ದಾಳಿ