ಕನ್ನಡಪ್ರಭ ವಾರ್ತೆ ಬೆಂಗಳೂರು
ಇದೇ ವೇಳೆ ಸ್ವಾತಂತ್ರ್ಯ ಹೋರಾಟ ಮತ್ತು ಸಂವಿಧಾನ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಗಾಂಧೀಜಿ ಮತ್ತು ಡಾ। ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು. ಬಳಿಕ ಮಾತನಾಡಿದ ಗಣ್ಯರು ಭಾರತಕ್ಕೆ ಸ್ವಾತಂತ್ರ್ಯ ದೊರೆತ ಇತಿಹಾಸ, ಇದಕ್ಕಾಗಿ ಗಾಂಧೀಜಿ, ನೆಹರು, ವಲ್ಲಭಬಾಯಿ ಪಟೇಲ್ ಸೇರಿದಂತೆ ಹೋರಾಟ ನಡೆಸಿದ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಾಣ ತೆತ್ತ ಮನನೀಯರನ್ನು ಸ್ಮರಿಸಿದರು. ನಂತರ ಭವ್ಯ ಭಾರತದ ಉಜ್ವಲ ಭವಿಷ್ಯಕ್ಕಾಗಿ ವಿಶ್ವದಲ್ಲೇ ಅಂತ್ಯಂತ ಶ್ರೇಷ್ಠ ಸಂವಿಧಾನ ರಚಿಸಿಕೊಟ್ಟ ಡಾ। ಬಿ.ಆರ್.ಅಂಬೇಡ್ಕರ್ ಸೇರಿದಂತೆ ಇತರೆ ಸಂವಿಧಾನ ರಚನಾ ಸಮಿತಿ ಸದಸ್ಯರ ಕೊಡುಗೆಯನ್ನು ನೆನೆದು ಸಂವಿಧಾನದ ಆಶಯಗಳನ್ನು ಈಡೇರಿಸುವತ್ತ ಪ್ರತಿಯೊಬ್ಬರು ಹೆಜ್ಜೆ ಇಡಬೇಕೆಂದು ಕರೆ ನೀಡಿದರು.
ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ದೇಶಭಕ್ತಿ ಗೀತೆಗಳ ಗಾಯನ, ನೃತ್ಯ ಪ್ರದರ್ಶನ ಮನಸೂರೆಗೊಂಡಿತು.ಸಂವಿಧಾನವೇ ದಾರಿದೀಪ: ಗಾಂಧಿಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಕೂಡ ಕುಲಪತಿ ಡಾ। ಲಿಂಗರಾಜ ಗಾಂಧಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿ ನಮ್ಮ ಸಂವಿಧಾನವೇ ನಮಗೆ ಒಂದು ಮಹಾಕಾವ್ಯ. ವಿವಿಧ ಧರ್ಮ, ಜಾತಿ, ಬಹು ಸಂಸ್ಕೃತಿಗಳಿಂದ ಕೂಡಿರುವ ಭಾರತದಲ್ಲಿ ಸಾಮಾಜಿಕ ನ್ಯಾಯ, ಸಮಾನತೆ, ಸಹಬಾಳ್ವೆಯ ಜೀವನಕ್ಕೆ ಸಂವಿಧಾನವೊಂದೇ ದಾರಿ ದೀಪ ಎಂದರು. ಈ ವೇಳೆ ಕುಲ ಸಚಿವ (ಆಡಳಿತ) ಡಾ। ಜವರೇಗೌಡ, ಮೌಲ್ಯಮಾಪನ ಕುಲಸಚಿವ ಡಾ। ಆನಂದ್ ಕುಮಾರ್ ಸೇರಿದಂತೆ ವಿವಿಯ ಅಧಿಕಾರಿಗಳು, ಬೋಧಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಬೆಂ.ವಿವಿಯಲ್ಲಿ ಧ್ವಜಾರೋಹಣ
ವಿನಾಯಕ ಶಾಲೆ:
ವಿನಾಯಕ ವಿದ್ಯಾಸಂಸ್ಥೆಯ ಉಪಾಧ್ಯಕ್ಷೆ ಗಾಯತ್ರಿ ಚಂದ್ರಮೂರ್ತಿ, ಕಾರ್ಯದರ್ಶಿ ಕೋದಂಡರಾಮಯ್ಯ ಹಾಗೂ ಶಾಲೆಯ ಸಿಬ್ಬಂದಿ ಉಪಸ್ಥಿತರಿದ್ದರು.
ರಾಜಾಜಿನಗರ ಪೇರೆಂಟ್ಸ್ ಎಜುಕೇಷನ್ ಸೊಸೈಟಿಯಲ್ಲಿ ನಡೆದ 75ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಕಾಸಿಯಾ ಉಪಾಧ್ಯಕ್ಷ ಎಂ.ಜಿ.ರಾಜಗೋಪಾಲ್ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಲೆಫ್ಟಿನೆಂಟ್ ಜನರಲ್ ಬಿ.ಎಸ್.ರಾಜು ಅವರು ಪ್ರತಿಯೊಬ್ಬ ವಿದ್ಯಾರ್ಥಿಗಳು ದೇಶಪ್ರೇಮವನ್ನು ಬೆಳೆಸಿಕೊಳ್ಳಬೇಕು. ನಮ್ಮನ್ನು ಹೆತ್ತ ತಾಯಿ ಮತ್ತು ಜನ್ಮಭೂಮಿ ಸ್ವರ್ಗಕ್ಕಿಂತಲೂ ಮಿಗಿಲಾದುದು ಎಂಬುದನ್ನು ಅರಿಯಬೇಕು ಎಂದು ಕರೆ ನೀಡಿದರು. ಡಾ। ಜಿ.ಬಿ.ಪರಮಶಿವಯ್ಯ, ಆರ್.ರಾಜು, ಎಂ.ಎಸ್.ಮೃತ್ಯುಂಜನಯ್ ಇದ್ದರು.
ಕರ್ನಾಟಕ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯು ಲಗ್ಗೆರೆ ಮುಖ್ಯರಸ್ತೆಯ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ನೆರೆದಿದ್ದ ಸಭಿಕರಿಗೆ ಸಂವಿಧಾನದ ಪ್ರಸ್ತಾವನೆ ಪ್ರಮಾಣ ವಚನ ಬೋಧಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಹಲವು ಗಣ್ಯರಿಗೆ ಸಂಸ್ಥೆಯ ಅಧ್ಯಕ್ಷ ಡಾ। ಸಿ.ಎಂ.ಗಣೇಶ್ ಗೌಡ ಅವರು ಪ್ರಶಸ್ತಿ ನೀಡಿ ಸನ್ಮಾನಿಸಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ವತಿಯಿಂದ ಅರಮನೆ ರಸ್ತೆಯ ಶಾಂತಿಗೃಹದಲ್ಲಿ ಗಣರಾಜ್ಯೋತ್ಸವ ನೆರವೇರಿತು. ಸಂಸ್ಥೆಯ ಉಪಾಧ್ಯಕ್ಷ ಕೊಂಡಜ್ಜಿ ಜಿ ಷಣ್ಮುಖಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಗಣರಾಜ್ಯೋತ್ಸವದ ಅಂಗವಾಗಿ ಕೆ.ಆರ್.ವೃತ್ತದ ಬಳಿಯ ಯುವಿಸಿಇ ಅಲ್ಯೂಮ್ನಿ ಭವನದಲ್ಲಿ ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ನಮ್ಮ ನಡಿಗೆ ಆಯೋಜಿಸಲಾಗಿತ್ತು. ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್, ಚಿಂತಕ ವಡ್ಡಗೆರೆ ನಾಗರಾಜಯ್ಯ, ಬಸವರಾಜ ಕೌತಾಳ್ ಮತ್ತಿತರ ಗಣ್ಯರು ಪಾಲ್ಗೊಂಡು ಸಂವಿಧಾನ ದಿನದ ಸಾರವನ್ನು ತಿಳಿಸಿಕೊಟ್ಟರು.