ರವಿ ಕಾಂಬಳೆ
ರಾಷ್ಟ್ರದ ಏಕತೆ ಮತ್ತು ಸಾರ್ವಭೌಮತ್ವ ಸಾರಲು 77ನೇ ಸ್ವಾತಂತ್ರ್ಯೋತ್ಸವವನ್ನು ವಿಶೇಷವಾಗಿ ಆಚರಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಮುಂದಾಗಿದೆ. ಇದರೊಂದಿಗೆ ಗ್ರಾಮ ಪಂಚಾಯತಿಗಳು ಸಂಭ್ರಮದ ಸ್ವಾತಂತ್ರ್ಯೋತ್ಸವಕ್ಕೆ ಸಿದ್ಧತೆ ಕೈಗೊಂಡಿವೆ. ಈ ದಿಸೆಯಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಮೃತ ಸರೋವರ ಯೋಜನೆಯಡಿ ಅಭಿವೃದ್ಧಿಪಡಿಸಿದ ಕೆರೆಗಳ ಬಳಿ ಆ.15 ರಂದು ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ ಆಚರಿಸಲು ಯೋಜನೆ ರೂಪಿಸಲಾಗಿದೆ. ಪರಿಸರದ ಸುಸ್ಥಿರತೆ ಮತ್ತು ಜಲಸಂರಕ್ಷಣೆಯ ದೃಷ್ಟಿಯಿಂದ ಅನುಷ್ಠಾನಗೊಳಿಸಿರುವ ಅಮೃತ ಸರೋವರಗಳ ದಂಡೆಯ ಮೇಲೆ ಮಾತೃಭೂಮಿಗಾಗಿ ಪ್ರತಿದಿನ ಎಂಬ ಸಂದೇಶ ಸಾರಲು ಹೊರಟಿದೆ.
ರಾಷ್ಟ್ರದ ಅಖಂಡತೆ ಸಾರಲು ಶಾಲಾ ಮಕ್ಕಳು, ಜನಪ್ರತಿನಿಧಿಗಳು, ಸ್ವ-ಸಹಾಯ ಸಂಘಗಳ ಸದಸ್ಯರು ಮತ್ತು ಗ್ರಾಮಸ್ಥರು ಎಲ್ಲರನ್ನು ಒಳಗೊಂಡು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸ್ವಾತಂತ್ರ್ಯೋತ್ಸವ ಆಚರಿಸಲು ಗ್ರಾಪಂಗಳು ಅಣಿಯಾಗಿವೆ. ಆಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಎರಡು ವರ್ಷಗಳ ಹಿಂದೆ ಜಿಲ್ಲೆಯ 200ಕ್ಕೂ ಹೆಚ್ಚು ಗ್ರಾಮಗಳ ಕೆರೆ, ಕಟ್ಟೆ ಸೇರಿ ಜಲಮೂಲಗಳನ್ನು ಅಮೃತ ಸರೋವರ ಹೆಸರಲ್ಲಿ ಅಭಿವೃದ್ಧಿಪಡಿಸಲು ಹಿಂದೆ ಯೋಜನೆಯನ್ನು ರೂಪಿಸಲಾಗಿತ್ತು. ಈಗ ಬಹುತೇಕ ಅಮೃತ ಸರೋವರ ನಿರ್ಮಾಣ ಕಾರ್ಯ ಮುಗಿದಿದ್ದು, ಈ ಹಿನ್ನೆಲೆಯಲ್ಲಿ ಅಲ್ಲಿ ವಿಶೇಷವಾಗಿ ಈ ಬಾರಿಯ ಸ್ವಾತಂತ್ರ್ಯೋತ್ಸವ ಆಚರಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತರು ಆದೇಶಿಸಿದ್ದಾರೆ.ಮಾತೃಭೂಮಿಗಾಗಿ ಪ್ರತಿದಿನ:
ಏನೇನು ಕಾರ್ಯಕ್ರಮ:
ಬಾಕ್
ಅದರನ್ವಯ ಹುಕ್ಕೇರಿ ತಾಲೂಕಿನ 11 ಹಳ್ಳಿಗಳು ಸೇರಿದಂತೆ ಬೆಳಗಾವಿ ಜಿಲ್ಲೆಯ 228 ಗ್ರಾಮಗಳಲ್ಲಿ ಸಿದ್ಧಗೊಂಡಿರುವ ಅಮೃತ ಸರೋವರಗಳ ಬಳಿ ಸ್ವಾತಂತ್ರ್ಯೋತ್ಸವದ ವೈವಿಧ್ಯಮಯ ಕಾರ್ಯಕ್ರಮ ಅನುರಣಿಸಲಿವೆ. ತಾಲೂಕಿನ ಗುಡಸ, ಹೊಸೂರ, ಬಡಕುಂದ್ರಿ, ಹೊಸಪೇಟೆ, ಇಸ್ಲಾಂಪುರ, ಕೊಟಬಾಗಿ, ದಡ್ಡಿ, ನಾಗನೂರ ಕೆ.ಡಿ.ಯ ಅಮೃತ ಸರೋವರ ದಡದ ಸುತ್ತ ತಿರಂಗಾ ಯಾತ್ರೆ ನಡೆಯಲಿದೆ.
--- ಕೋಟ್ ---
ರಾಹುಲ್ ಶಿಂಧೆ, ಜಿಪಂ ಸಿಇಒ
ಹುಕ್ಕೇರಿ ತಾಲೂಕಿನ 11 ಅಮೃತ ಸರೋವರಗಳ ದಡದಲ್ಲಿ ಈ ಸಲದ ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ರಾಷ್ಟ್ರದ ಏಕತೆ ಮತ್ತು ಸಾರ್ವಭೌಮತ್ವ ಎತ್ತಿ ಹಿಡಿಯುವ ವಿಶಿಷ್ಟ ಕಾರ್ಯಕ್ರಮ ಇದಾಗಿದೆ. ಅಮೃತ ಸರೋವರಗಳ ಸ್ಮರಣೀಯ ಸ್ವಾತಂತ್ರ್ಯೋತ್ಸವಕ್ಕೆ ಈಗಾಗಲೇ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ.
- ಟಿ.ಆರ್.ಮಲ್ಲಾಡದ, ತಾಪಂ ಇಒ