ಸಂಭ್ರಮದಿಂದ ಜರುಗಿದ ಹೊಳೆ ಹುಚ್ಚೇಶ್ವರ ರಥೋತ್ಸವ

KannadaprabhaNewsNetwork |  
Published : Mar 01, 2024, 02:18 AM IST
ಕಮತಗಿಪಟ್ಟಣದ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ ಜಾತ್ರಾಮಹೋತ್ಸವದ ಅಂಗವಾಗಿ ಗುರುವಾರ ಸಂಜೆ ಬಂಗಾರದ ಕಳಶ, ಉತ್ಸವ ಮೂರ್ತಿ ಹೊತ್ತ ರಥೋತ್ಸವವು ಅಸಂಖ್ಯಾತ ಭಕ್ತರ ಸಮ್ಮುಖದಲ್ಲಿ ಜರುಗಿತು. | Kannada Prabha

ಸಾರಾಂಶ

ಕಮತಗಿ ಪಟ್ಟಣದ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ ಹೊಳೆ ಹುಚ್ಚೇಶ್ವರ ಜಾತ್ರಾ ಮಹೋತ್ಸವದಲ್ಲಿ ಬಂಗಾರದ ಕಳಶ ಹಾಗೂ ಉತ್ಸವ ಮೂರ್ತಿ ಹೊತ್ತ ರಥೋತ್ಸವ ರಥ ಬೀದಿಯಲ್ಲಿ ಸಹಸ್ರಾರು ಭಕ್ತಸಮೂಹದ ಮಧ್ಯೆ ಗುರುವಾರ ಜರುಗಿತು.

ಕನ್ನಡಪ್ರಭ ವಾರ್ತೆ ಕಮತಗಿ

ಪಟ್ಟಣದ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ ಹೊಳೆ ಹುಚ್ಚೇಶ್ವರ ಜಾತ್ರಾ ಮಹೋತ್ಸವದಲ್ಲಿ ಬಂಗಾರದ ಕಳಶ ಹಾಗೂ ಉತ್ಸವ ಮೂರ್ತಿ ಹೊತ್ತ ರಥೋತ್ಸವ ರಥ ಬೀದಿಯಲ್ಲಿ ನಾಡಿನ ವಿವಿಧ ಮಠಾಧೀಶರು, ಮುಖಂಡರು, ಭಕ್ತಸಮೂಹದ ಮಧ್ಯೆ ಗುರುವಾರ ಸಂಜೆ ಸಂಭ್ರಮದಿಂದ ಜರುಗಿತು.

ಚಿನ್ನದ ಕಳಶಹೊತ್ತ ರಥವು ರಥ ಬೀದಿಯಲ್ಲಿ ರಾಜ ನಡಿಗೆ ಹಾಕುತ್ತಿದ್ದಾಗ ಅಸಂಖ್ಯಾತ ಭಕ್ತ ಸಮೂಹ ಉತ್ತತ್ತಿ, ಬಾಳೆಹಣ್ಣು, ಲಿಂಬೆಹಣ್ಣು ಸಮರ್ಪಿಸಿ ಭಕ್ತಿಯ ಪರಾಕಾಷ್ಠೆ ಮೆರೆದರು.

ಮುರಗೋಡ ಮಹಾಂತ ದುರದುಂಡೇಶ್ವರಮಠದ ನೀಲಕಂಠ ಸ್ವಾಮೀಜಿ, ಕಮತಗಿ ಹೊಳೆ ಹುಚ್ಚೇಶ್ವರ ಸ್ವಾಮೀಜಿ, ಮುನವಳ್ಳಿ ಸೋಮಶೇಖರಮಠದ ಮುರಘೇಂದ್ರ ಸ್ವಾಮೀಜಿ, ಗಂಗಾವತಿ ಕಲ್ಮಠದ ಕೊಟ್ಟೂರ ಸ್ವಾಮೀಜಿ, ಗುಳೇದಗುಡ್ಡ ಮುರುಘಾಮಠದ ಕಾಶೀನಾಥ ಸ್ವಾಮೀಜಿ, ಕುಂದರಗಿ ಅಡವಿಸಿದ್ದೇಶ್ವರಮಠದ ಅಮರಸಿದ್ದೇಶ್ವರ ಸ್ವಾಮೀಜಿ, ಬಸವಣ್ಣೆಮ್ಮ ಬಸರಕೋಡ, ಕಮತಪುರ ಉತ್ಸವ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಕಮತಗಿ ಪಟ್ಟಣ ಹಾಗೂ ಸುತ್ತ ಮುತ್ತಲಿನ ಗ್ರಾಮಗಳ ಗ್ರಾಮಸ್ಥರು ರಥೋತ್ಸವದಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ