ಗುಂಡಿಬಿದ್ದ ಸುಬ್ರಹ್ಮಣ್ಯಸ್ವಾಮಿ ದೇವಾಲಯ ರಸ್ತೆ

KannadaprabhaNewsNetwork |  
Published : Aug 24, 2025, 02:00 AM IST
23ಎಚ್ಎಸ್ಎನ್6 : ರಾಮನಾಥಪುರ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ರಸ್ತೆಯ ಸ್ಥಿತಿ. | Kannada Prabha

ಸಾರಾಂಶ

ಕಾವೇರಿ ನದಿ- ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಹೋಗುವ ರಸ್ತೆಯು ಗುಂಡಿ ಬಿದ್ದು ಹಾಳಾಗಿದ್ದು, ಸಂಚಾರಕ್ಕೆ ತೊಂದರೆ ಉಂಟಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ರಾಜ್ಯದ ಹೆದ್ದಾರಿಯ ಮುಖ್ಯರಸ್ತೆಯಿಂದ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದವರೆಗೆ ಸುಮಾರು 500 ಮೀಟರ್ ಉದ್ದದ ರಸ್ತೆ ಮೂಲಕ ಪ್ರತಿನಿತ್ಯ ನೂರಾರು ವಾಹನಗಳು ಬರುತ್ತವೆ. ಈ ರಸ್ತೆಯು ಗುಂಡಿ ಬಿದ್ದಿರುವುದರಿಂದ ಬೈಕ್, ಆಟೋ, ಕಾರ್ ಮತ್ತಿತರೆ ವಾಹನಗಳ ಓಡಾಟಕ್ಕೆ ತೀರ ಸಮಸ್ಯೆಯಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ರಾಮನಾಥಪುರ: ಇಲ್ಲಿಯ ಕಾವೇರಿ ನದಿ- ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಹೋಗುವ ರಸ್ತೆಯು ಗುಂಡಿ ಬಿದ್ದು ಹಾಳಾಗಿದ್ದು, ಸಂಚಾರಕ್ಕೆ ತೊಂದರೆ ಉಂಟಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ರಾಜ್ಯದ ಹೆದ್ದಾರಿಯ ಮುಖ್ಯರಸ್ತೆಯಿಂದ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದವರೆಗೆ ಸುಮಾರು 500 ಮೀಟರ್ ಉದ್ದದ ರಸ್ತೆ ಮೂಲಕ ಪ್ರತಿನಿತ್ಯ ನೂರಾರು ವಾಹನಗಳು ಬರುತ್ತವೆ. ಈ ರಸ್ತೆಯು ಗುಂಡಿ ಬಿದ್ದಿರುವುದರಿಂದ ಬೈಕ್, ಆಟೋ, ಕಾರ್ ಮತ್ತಿತರೆ ವಾಹನಗಳ ಓಡಾಟಕ್ಕೆ ತೀರ ಸಮಸ್ಯೆಯಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಲೋಕೋಪಯೋಗಿ ಇಲಾಖೆಗೆ ಸೇರಿದ ಈ ರಸ್ತೆಯು ಹಾಳಾಗಿ ಎರಡು ವರ್ಷ ಕಳೆದರೂ ಗುಂಡಿ ಮುಚ್ಚುವ ಕೆಲಸ ಆಗಿಲ್ಲ, ಕೇಳಿದರೆ ಕೇವಲ ಭರವಸೆಯಷ್ಟೇ ದೊರೆಯುತ್ತದೆ. ತಾಲೂಕಿನ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇತ್ತ ಗಮನ ಹರಿಸಿ, ಈ ಗುಂಡಿಗಳನ್ನು ಮುಚ್ಚಿಸಿ ಡಾಂಬರೀಕರಣ ಮಾಡಿಸಿ ಎರಡು ಬದಿ ಚರಂಡಿ ಮಾಡಿಸುವಂತೆ ಇಲ್ಲಿಯ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಳಮೀಸಲು ಹೆಚ್ಚಳ: ಸಿದ್ದು vs ಬೆಲ್ಲದ್‌ ಜಟಾಪಟಿ
ಎಚ್ಚೆತ್ತ ಬೆಂ.ವಿವಿ: ಲೋಪ ಸರಿಪಡಿಸಿ 400 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ