ಪರಶಿವಮೂರ್ತಿ ದೋಟಿಹಾಳ
ಬರಗಾಲದ ಹಿನ್ನೆಲೆಯಲ್ಲಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಆರಂಭ ಮಾಡಿದ ಬಿಸಿಯೂಟ ಯೋಜನೆ ತಾಲೂಕಿನ ಸಾವಿರಾರು ವಿದ್ಯಾರ್ಥಿಗಳಿಗೆ ವರದಾನವಾಗಿದೆ.
ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಸಮರ್ಪಕವಾದ ಮಳೆಯಾಗದ ಕಾರಣ ಬರಗಾಲ ಆವರಿಸಿದ್ದು, ಕುಷ್ಟಗಿ ತಾಲೂಕು ಬರಗಾಲ ಪೀಡಿತ ಎಂದು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಶಾಲಾ ಮಕ್ಕಳು ಬಿಸಿಯೂಟದಿಂದ ವಂಚನೆಯಾಗಬಾರದು ಎಂದು ಬೇಸಿಗೆಯ ರಜೆಯ ಅವಧಿಯಲ್ಲಿಯೂ ಬಿಸಿಯೂಟ ಯೋಜನೆ ಆರಂಭ ಮಾಡಿದ್ದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.ಕುಷ್ಟಗಿ ತಾಲೂಕಿನಲ್ಲಿ 262 ಶಾಲೆಗಳಿದ್ದು, 201 ಶಾಲೆಗಳಲ್ಲಿ ಬಿಸಿಯೂಟ ಯೋಜನೆ ಆರಂಭವಾಗಿದೆ. ಈ ಪೈಕಿ 35124 ಮಕ್ಕಳು ಬಿಸಿಯೂಟಕ್ಕಾಗಿ ಒಪ್ಪಿಗೆ ಪತ್ರದ ಮೂಲಕ ನೋಂದಣಿ ಮಾಡಿಕೊಂಡಿದ್ದು, ಸುಮಾರು 23000 ಮಕ್ಕಳು ಊಟ ಸವಿಯುತ್ತಿದ್ದಾರೆ. ಪಟ್ಟಣ ಸೇರಿದಂತೆ ತಾಲೂಕಿನ ಶಾಲೆಗಳಲ್ಲಿ ಆರಂಭವಾದ ಬಿಸಿಯೂಟ ಯೋಜನೆಯಲ್ಲಿ ಮಕ್ಕಳು ಅನ್ನ ಸಾಂಬಾರು, ಉಪ್ಪಿಟ್ಟು, ಪಲಾವ್ ಸೇವನೆ ಮಾಡುತ್ತಿದ್ದಾರೆ.
ಗ್ರಾಮೀಣ ಮಕ್ಕಳಿಗೆ ಅನುಕೂಲ
ನೋಡಲ್ ಅಧಿಕಾರಿಗಳು
ಈ ಬಿಸಿಯೂಟ ಯೋಜನೆಯಲ್ಲಿ 210 ಶಿಕ್ಷಕರು ಹಾಗೂ 580 ಜನ ಅಡುಗೆದಾರರು ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಲಿದ್ದು, ಕೆಲವೊಂದು ಶಾಲೆಯಲ್ಲಿ ಖುದ್ದಾಗಿ ಶಿಕ್ಷಕರು ಮಕ್ಕಳ ಮನೆಗೆ ಹೋಗಿ ಊಟಕ್ಕೆ ಕರೆದುಕೊಂಡು ಬರುವ ಮೂಲಕ ಮಕ್ಕಳಿಗೆ ಬಿಸಿಯೂಟ ನೀಡುವ ಕೆಲಸ ಮಾಡುತ್ತಿದ್ದಾರೆ.
ಶಾಲೆಗಳು ರಜೆ ಇದ್ದ ಹಿನ್ನೆಲೆಯಲ್ಲಿ ಕೆಲವು ಮಕ್ಕಳು ಕೋಚಿಂಗ್ ಕ್ಲಾಸ್ಗಳು, ಅಜ್ಜ, ಅಜ್ಜಿಯ ಮನೆಗೆ ಹಾಗೂ ಸಂಬಂಧಿಕರ ಮನೆಗೆ ಹಾಗೂ ಬೇರೆ ಬೇರೆ ಊರುಗಳಿಗೆ ಜಾತ್ರೆ, ಮದುವೆ ಕಾರ್ಯಕ್ರಮಗಳಿಗೆ ಹೋಗುತ್ತಿರುವ ಹಿನ್ನೆಲೆಯಲ್ಲಿ ಶೇಕಡಾ 30ರಷ್ಟು ಮಕ್ಕಳು ಯೋಜನೆಯಿಂದ ವಂಚಿತರಾಗಿದ್ದಾರೆ ಎನ್ನಬಹದು.ಮಕ್ಕಳಿಗೆ ಅನುಕೂಲ
ಕೆ ಶರಣಪ್ಪ ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ಕುಷ್ಟಗಿ40-50 ಮಕ್ಕಳು
ಅಮರಗುಂಡಯ್ಯ ಹಿರೇಮಠ ಪ್ರಭಾರಿ ಮುಖ್ಯ ಗುರುಗಳು ಸಹಿಪ್ರಾಶಾ ಕೇಸೂರು.