ಮನೆಗೆ ಕಳವು: 2 ಲಕ್ಷ ಮೌಲ್ಯದ ಚಿನ್ನಾಭರಣ ವಶ

KannadaprabhaNewsNetwork |  
Published : Feb 07, 2024, 01:46 AM IST
ಬೀರೂರು ಪೊಲೀಸರು ಚಿನ್ನಾಭರಣವನ್ನು ವಶಪಡಿಸಿಕೊಂಡಿರುವುದು.ಡಿವೈಎಸ್ಪಿ ಹಾಲಮೂರ್ತಿರಾವ್, ಸಿಪಿಐ ಎಸ್.ಎನ್.ಶ್ರೀಕಾಂತ್ ಪಿಎಸ್ಐ ಸಜಿತ್ ಕುಮಾರ್  ಮತ್ತು ಅಪರಾಧ ಸಿಬ್ಬಂದಿ ಇದ್ದರು | Kannada Prabha

ಸಾರಾಂಶ

ಸಮೀಪದ ಹೊಗರೇಹಳ್ಳಿ ಗ್ರಾಮದ ಮನೆಗೆ ನುಗ್ಗಿ 2.05 ಲಕ್ಷ ಮೌಲ್ಯದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದ ಕಳ್ಳನನ್ನು ಬೀರೂರು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಮಂಗಳವಾರ ಒಪ್ಪಿಸಿದ್ದಾರೆ

ಕನ್ನಡಪ್ರಭ ವಾರ್ತೆ, ಬೀರೂರು

ಸಮೀಪದ ಹೊಗರೇಹಳ್ಳಿ ಗ್ರಾಮದ ಮನೆಗೆ ನುಗ್ಗಿ 2.05 ಲಕ್ಷ ಮೌಲ್ಯದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದ ಕಳ್ಳನನ್ನು ಬೀರೂರು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಮಂಗಳವಾರ ಒಪ್ಪಿಸಿದ್ದಾರೆ.

ಹೊಗರೇಹಳ್ಳಿ ಗ್ರಾಮದ ಕುಮಾರ್ ಬಂಧಿತ ಆರೋಪಿಯಾಗಿದ್ದು. ಕಳೆದ ಜ.10ರಂದು ಹೊಗರೇಹಳ್ಳಿ ಗ್ರಾಮದ ಆರೋಪಿ ಮನೆ ಹಿಂಭಾಗದ ಗೋವಿಂದರಾಜು ಎಂಬುವವರ ಮನೆಗೆ ನುಗ್ಗಿ ಮನೆ ಬೀರುವಿನಲ್ಲಿದ್ದ ಚಿನ್ನಾಭರಣ ದೋಚಿ ಕಾಲ್ಕಿತ್ತಿದ್ದಾನೆ.‌ ಪ್ರಕರಣ ದಾಖಲಿಸಿಕೊಂಡಿದ್ದ ಬೀರೂರು ಪೊಲೀಸರು ಡಿವೈಎಸ್ಪಿ ಹಾಲಮೂರ್ತಿರಾವ್ ಮಾರ್ಗದರ್ಶನ ದಲ್ಲಿ ಸಿಪಿಐ ಎಸ್.ಎನ್.ಶ್ರೀಕಾಂತ್ ಪಿಎಸ್ಐ ಸಜಿತ್ ಕುಮಾರ್ ನೇತೃತ್ವದ ತಂಡ ಕಾರ್ಯಚರಣೆ ನಡೆಸಿ ಬೀರೂರಿನಲ್ಲಿ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿ ಕುಮಾರ್ ನನ್ನು ಖಚಿತ ಮಾಹಿತಿ ಮೇರೆಗೆ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿ ಚಿನ್ನಾಭರಣವನ್ನು ಕಳ್ಳತನ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ. ಆತನಿಂದ 20ಗ್ರಾಂ ಎರಡು ಚಿನ್ನದ ಉಂಗುರಗಳು, 6ಗ್ರಾಂ ಚಿನ್ನದ ಹ್ಯಾಂಗಿಂಗ್ಸ್, 7ಗ್ರಾಂ ಜುಮುಕಿ ಓಲೆ, ತಲಾ 4ಗ್ರಾಂ ಜುಮುಕಿ ಓಲೆ ಮತ್ತು ಚಿನ್ನದ‌ ಮಾಟಿಯನ್ನು ವಶ ಪಡಿಸಿಕೊಂಡಿದ್ದಾರೆ.

ಕಾರ್ಯಚರಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಗಳಾದ ಡಿ.ವಿ. ಹೇಮಂತ್ ಕುಮಾರ್, ಬಿ.ಪಿ.ಕೃಷ್ಣಮೂರ್ತಿ, ಶಿವಕುಮಾರ್, ರಾಜಪ್ಪ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀಮಠದಲ್ಲಿ ಗುರುಶಾಂತವೀರ ಶ್ರೀಗಳ ಅಂತ್ಯಕ್ರಿಯೆ
ಸಿದ್ಧೇಶ್ವರ ಜಾತ್ರೆಯಲ್ಲಿ ಭಾರ ಎತ್ತುವ ಸ್ಪರ್ಧೆ