ಕೊಲ್ಲೂರು ದೇವಳಕ್ಕೆ ಗೃಹ ಸಚಿವ ಡಾ.ಪರಮೇಶ್ವರ್‌ ಭೇಟಿ

KannadaprabhaNewsNetwork |  
Published : Jun 16, 2025, 04:34 AM IST
ಗೃಹ  | Kannada Prabha

ಸಾರಾಂಶ

ಗೃಹ ಸಚಿವ ಡಾ. ಜಿ.ಪರಮೇಶ್ವರ್ ಶನಿವಾರ ಬೆಳಗ್ಗೆ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಭಾಗಿಯಾದರು.

ಕನ್ನಡಪ್ರಭ ವಾರ್ತೆ ಕುಂದಾಪುರ

ಗೃಹ ಸಚಿವ ಡಾ. ಜಿ.ಪರಮೇಶ್ವರ್ ಶನಿವಾರ ಬೆಳಗ್ಗೆ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಭಾಗಿಯಾದರು.

ದೇವಳದ ಹಿರಿಯ ಅರ್ಚಕ ಡಾ. ಎನ್. ನರಸಿಂಹ ಅಡಿಗರ ನೇತೃತ್ವದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ಈ ವೇಳೆ ಬಂದರು ಮತ್ತು ಮೀನುಗಾರಿಕಾ ಇಲಾಖೆ ಸಚಿವ ಮಂಕಾಳ್ ವೈದ್ಯ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ತಗ್ಗರ್ಸೆ, ಡಾ. ಅಭಿಲಾಷ್ ಪಿ.ವಿ., ರಘುರಾಮ ದೇವಾಡಿಗ ಆಲೂರು, ಸುರೇಂದ್ರ ಶೆಟ್ಟಿ, ಮಹಾಲಿಂಗ ನಾಯ್ಕ್, ಧನಾಕ್ಷಿ ವಿಶ್ವನಾಥ ಪೂಜಾರಿ, ಕೆ. ಸುಧಾ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ಪ್ರಮುಖರಾದ ಎಂ.ಎ. ಗಫೂರ್, ಉದಯಕುಮಾರ್ ಶೆಟ್ಟಿ ಮುನಿಯಾಲು, ಎಸ್. ರಾಜು ಪೂಜಾರಿ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಸದಾಶಿವ ಡಿ. ಪಡುವರಿ ಮೊದಲಾದವರಿದ್ದರು.

ಕೊಲ್ಲೂರು ಭೇಟಿ ವೈಯಕ್ತಿಕ:

ಈ ವೇಳೆ ಮಾತನಾಡಿದ ಗೃಹ ಸಚಿವರು, ದೇವಾಲಯಕ್ಕೆ ಭೇಟಿ ನನ್ನ ವೈಯಕ್ತಿಕ ವಿಚಾರವಾಗಿದ್ದು, ಈ ಬಗ್ಗೆ ನಾನು ಹೆಚ್ಚೇನು ಮಾತನಾಡುವುದಿಲ್ಲ. ದೇವಸ್ಥಾನಕ್ಕೆ ಹೋಗುವುದು ನಮ್ಮ ಸಂಪ್ರದಾಯ. ಅದರಂತೆ ಮೂಕಾಂಬಿಕಾ ತಾಯಿಗೆ ನಮಸ್ಕಾರ ಮಾಡಿ ಬಂದಿದ್ದೇನೆ. ಯಾಕೆ ಏನು ಅಂತ ನೀವು ಕೇಳಬಾರದು. ನಾನು ಹೇಳಬಾರದು ಎಂದು ಮಾರ್ಮಿಕವಾಗಿ ಪ್ರತಿಕ್ರಿಯೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ