ಗೃಹ ಸಚಿವರಿಂದ ಪೊಲೀಸ್ ಇಲಾಖೆಯ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ

KannadaprabhaNewsNetwork |  
Published : Mar 27, 2025, 01:03 AM IST
ವಾಹನಗಳನ್ನು ಹಸ್ತಾಂತರಿಸಿದರು  | Kannada Prabha

ಸಾರಾಂಶ

₹3 ಕೋಟಿ ವೆಚ್ಚದಲ್ಲಿ ಖರೀದಿಸಿದ 20 ಹೊಸ ವಾಹನಗಳಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಪೊಲೀಸ್ ಇಲಾಖೆಗೆ ಹಸ್ತಾಂತರಿಸಿದರು.

ಕಾರವಾರ: ಜಿಲ್ಲೆಯ ವಿಧಾನಸಭಾ, ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯ ₹3 ಕೋಟಿ ವೆಚ್ಚದಲ್ಲಿ ಖರೀದಿಸಿದ 20 ಹೊಸ ವಾಹನಗಳಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಪೊಲೀಸ್ ಇಲಾಖೆಗೆ ಹಸ್ತಾಂತರಿಸಿದರು.

ಬಳಿಕ ₹1.15 ಕೋಟಿ ವೆಚ್ಚದಲ್ಲಿ ನವೀಕರಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಜಿಲ್ಲಾ ಪೊಲೀಸ್ ತಾಂತ್ರಿಕ ತರಬೇತಿ ಕೇಂದ್ರ, ಸೈಬರ್ ಮತ್ತು ಆರ್ಥಿಕ ಅಪರಾಧಗಳು, ಮಾದಕ ದ್ರವ್ಯ ನಿಯಂತ್ರ ಪೊಲೀಸ್ ಠಾಣೆ. ಸಿ.ಡಿ.ಆರ್ ವಿಭಾಗ, ತ್ರಿನೇತ್ರ ಸಾಮಾಜಿಕ ಜಾಲತಾಣ ನಿಗಾ ಕೇಂದ್ರ, ವಿಡಿಯೋ ಕಾನ್ಫರೆನ್ಸ್ ಸಭಾಂಗಣ, ಗಣಕಯಂತ್ರ ತರಬೇತಿ ಕೇಂದ್ರ, ಪೊಲೀಸ್ ವರಿಷ್ಠಾಧಿಕಾರಿ ಕೊಠಡಿ ಸೇರಿದಂತೆ ವಿವಿಧ ವಿಭಾಗಗಳನ್ನು ಉದ್ಘಾಟಿಸಿದರು.

ಶಿರಸಿ ಪಟ್ಟಣದ ಟ್ರಾಫಿಕ್ ಪೊಲೀಸ್ ಠಾಣೆಯನ್ನು ವೆಬ್ ಕಾಸ್ಟ್ ಮೂಲಕ ಉದ್ಘಾಟಿಸಿದರು. ಮಾದಕ ವಸ್ತು ಮತ್ತು ಸೈಬರ್ ಅಪರಾಧಗಳ ಬಗ್ಗೆ ಸಾರ್ವಜನಿಕರು ಜಾಗೃತರಾಗಿರಲು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಘಟಕದಿಂದ ಚಿತ್ರಿಸಲಾಗಿರುವ ವಿಡಿಯೋಗಳ ಬಿಡುಗಡೆ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ, ರಾಜ್ಯ ಮಾರ್ಕೆಟಿಂಗ್ ಕನ್ಸಲ್ಟಂಟ್‌ ಆ್ಯಂಡ್ ಏಜೆನ್ಸಿಸ್ ಅಧ್ಯಕ್ಷ ಸತೀಶ್ ಕೆ.ಸೈಲ್, ಶಾಸಕರಾದ ಶಿವರಾಮ ಹೆಬ್ಬಾರ್, ಭೀಮಣ್ಣ ಟಿ. ನಾಯ್ಕ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸತೀಶ ನಾಯ್ಕ, ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕ ಅಮೀತ್ ಸಿಂಗ್, ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!