ಮುಳ್ಕಟ್ಟಮ್ಮದೇವಿಗೆ ಗೃಹ ಸಚಿವರಿಂದ ವಿಶೇಷ ಪೂಜೆ

KannadaprabhaNewsNetwork |  
Published : Dec 23, 2025, 02:00 AM IST
ಮಾಗಡಿ ತಾಲ್ಲೂಕಿನ ತಿಪ್ಪಸಂದ್ರ ಹೋಬಳಿಯ ಹೆಬ್ಬಾಳಲು ಗ್ರಾಮದ ಮುಳ್ಕಟ್ಟಮ್ಮ ದೇವಿಗೆ  ಗೃಹ ಸಚಿವರಾದ ಜಿ.ಪರಮೇಶ್ವರ್ ದಂಪತಿಗಳು ವಿಶೇಷ ಪೂಜೆಸಲ್ಲಿಸಿದರು. | Kannada Prabha

ಸಾರಾಂಶ

ಮಾಗಡಿ: ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿರುವ ಮುಳ್ಕಟ್ಟಮ್ಮ ದೇವಿಗೆ ಗೃಹ ಸಚಿವರಾದ ಜಿ.ಪರಮೇಶ್ವರ್ ಅವರ ಧರ್ಮಪತ್ನಿ ಕನ್ನಿಕಾ ಪರಮೇಶ್ವರಿ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಮಾಗಡಿ: ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿರುವ ಮುಳ್ಕಟ್ಟಮ್ಮ ದೇವಿಗೆ ಗೃಹ ಸಚಿವರಾದ ಜಿ.ಪರಮೇಶ್ವರ್ ಅವರ ಧರ್ಮಪತ್ನಿ ಕನ್ನಿಕಾ ಪರಮೇಶ್ವರಿ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಮುಗಿಸಿ ಬಂದು ಮುಳ್ಕಟ್ಟಮ್ಮ ದೇವಿಯ ಆಶೀರ್ವಾದ ಪಡೆದರು. ನನಗೆ ರಾಜಕೀಯವಾಗಿ ಸ್ಥಾನಮಾನ ಸಿಕ್ಕಿದ್ದು ದೇವಿಯ ಕೈಪೆಯಿಂದಲೆ. ವರ್ಷದಿಂದ ವರ್ಷಕ್ಕೆ ದೇವಸ್ಥಾನ ಸಾಕಷ್ಟು ಅಭಿವೃದ್ಧಿ ಹೊಂದುತ್ತಿದೆ ಎಂದರು. ಈ ವೇಳೆ ಬೆಸ್ಕಾಂ ಮಾಜಿ ನಿರ್ದೇಶಕ ಬಿ.ವಿ.ಜಯರಾಂ, ಕಾಂಗ್ರೆಸ್ ಮುಖಂಡರು ಹಾಗೂ ಗ್ರಾಮಸ್ಥರು ಜತೆಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟ್ರಂಪ್‌ಗೆ ಸಿದ್ದು ಆರ್ಥಿಕ ಸಚಿವರಾಗಲಿ: ಎಚ್ಡಿಕೆ!
‘ನರೇಗಾ’ ಬದಲಾವಣೆ ವಿರುದ್ಧ ಹೋರಾಟ : ಪೈಲಟ್‌