- ಉಚಿತ ಆರೋಗ್ಯ ತಪಾಸಣೆ- ಔಷಧ ವಿತರಣೆ ಕಾರ್ಯಕ್ರಮದಲ್ಲಿ ನ್ಯಾ. ರಾಜೇಶ್ವರ ಹೆಗಡೆ- - - ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಜಿಲ್ಲಾ ವಕೀಲರ ಭವನದಲ್ಲಿ ಶನಿವಾರ ಆಯುಷ್ ಇಲಾಖೆ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ವಕೀಲರು, ನ್ಯಾಯಾಧೀಶರು ಹಾಗೂ ನ್ಯಾಯಾಲಯ ಸಿಬ್ಬಂದಿಗೆ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಔಷಧ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆಯುಷ್ ಸೇರಿದಂತೆ ಆರೋಗ್ಯಕ್ಕೆ ಸಂಬಂಧಿಸಿದಂತೆ ಸರ್ಕಾರದ ಇಲಾಖೆಗಳು ಸಾಕಷ್ಟು ಯೋಜನೆ, ಕಾರ್ಯಕ್ರಮ ಜಾರಿಗೊಳಿಸುತ್ತಿದೆ. ಆದರೂ ಜನರಿಗೆ ಅವುಗಳ ಲಾಭ ತಲುಪುತ್ತಿಲ್ಲ. ಮಾಧ್ಯಮಗಳಲ್ಲಿ ಬರುವ ಸುದ್ದಿಯನ್ನಾದರೂ ನೋಡಿ ಜನರು ಇದರ ಲಾಭ ಪಡೆದುಕೊಳ್ಳಲು ಮುಂದಾಗಬೇಕಿದೆ ಎಂದರು.ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಮಾತನಾಡಿ, ವಕೀಲರು, ನ್ಯಾಯಾಧೀಶರು, ಸಿಬ್ಬಂದಿ ತಿಂಗಳಿಗೊಮ್ಮೆಯಾದರೂ ಮಧುಮೇಹ ಹಾಗೂ ರಕ್ತದೊತ್ತಡ ಪರೀಕ್ಷಿಸಿಕೊಳ್ಳಬೇಕು. ದಿನದ ಒಂದು ಗಂಟೆಯಾದರೂ ಯೋಗ ಮತ್ತು ಧ್ಯಾನಕ್ಕೆ ಸಮಯ ಮೀಸಲಿಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣ ಕುಮಾರ್ ಅಧ್ಯಕ್ಷತೆ ವಹಿಸಿ, ಜಿಲ್ಲಾಸ್ಪತ್ರೆ ಸೇರಿದಂತೆ ಬೇರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಕ್ಕೆ ಬೇರೆ ಕಡೆ ಚೀಟಿ ಬರೆಯುವುದು ಸರ್ವೇಸಾಮಾನ್ಯ ಆದರೆ, ಆಯುಷ್ ಆಸ್ಪತ್ರೆಯಲ್ಲಿ ಯಾವುದೇ ಚೀಟಿಯನ್ನು ಹೊರಗೆ ಬರೆದುಕೊಡುವುದಿಲ್ಲ. ಆಹಾರವೇ ಔಷಧ ಎಂಬಂತೆ ಆಯುಷ್ ಇಲಾಖೆಯ ಸಲಹೆ ಪಡೆದು ನಾವು ಬದಲಾಗಬೇಕಿದೆ ಎಂದರು.
- - -
- ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ್, ನ್ಯಾಯಾಧೀಶ
ದಾವಣಗೆರೆಯಲ್ಲಿ ಜಿಲ್ಲಾ ವಕೀಲರ ಸಂಘದಿಂದ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನ್ಯಾ. ರಾಜೇಶ್ವರಿ ಎನ್. ಹೆಗಡೆ ಉದ್ಘಾಟಿಸಿದರು.