ಕನ್ನಡಪ್ರಭ ವಾರ್ತೆ ಮಂಗಳೂರು
ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಹಿರಿಯ ಕಾರ್ಯಕರ್ತರ ಮನೆ ಭೇಟಿ ಅಭಿಯಾನದ ಅಂಗವಾಗಿ ಸ್ಥಳೀಯ ಹಿರಿಯ ಕಾರ್ಯಕರ್ತ ಚಂದ್ರಹಾಸ ಅವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಈ ಮಾತು ಹೇಳಿದರು.ಜನಸಂಘದ ಕಾಲದಿಂದಲೂ ಪಕ್ಷದ ಕಾರ್ಯಕರ್ತರಾದ ಚಂದ್ರಹಾಸ ಮಾತನಾಡಿ, ತುರ್ತು ಪರಿಸ್ಥಿತಿಯ ಕರಾಳ ದಿನಗಳು, 1992ರ ಕರಸೇವೆ, ರಾಮ ಮಂದಿರ ನಿರ್ಮಾಣ ಹೋರಾಟ, ಬಿಜೆಪಿಯ ಆರಂಭಿಕ ದಿನಗಳಲ್ಲಿನ ಪಕ್ಷ ಸಂಘಟನೆ, ಸೇರಿದಂತೆ ಹಲವು ವಿಷಯಗಳ ಮೇಲೆ ಬೆಳಕು ಚೆಲ್ಲಿದರು.
ಈ ಸಂದರ್ಭದಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಂಡಲದ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ,ಪಾಲಿಕೆ ಸದಸ್ಯರಾದ ಪೂರ್ಣಿಮಾ, ಗಣೇಶ್ ಕುಲಾಲ್, ಲೀಲಾವತಿ, ಜಯಲಕ್ಷ್ಮಿ ಶೆಟ್ಟಿ, ಲೋಕಸಭಾ ಚುನಾವಣೆಯ ಜಿಲ್ಲಾ ಸಂಚಾಲಕ ನಿತಿನ್ ಕುಮಾರ್, ರೂಪಾ.ಡಿ ಬಂಗೇರ, ರಾಜಗೋಪಾಲ್ ರೈ, ರಮೇಶ್ ಹೆಗ್ಡೆ ಮತ್ತಿತರರಿದ್ದರು.