ಸಹಕಾರಿ ಲೆಕ್ಕಪತ್ರಗಳಲ್ಲಿ ಪ್ರಾಮಾಣಿಕತೆ ಕಾಣಬಹುದು

KannadaprabhaNewsNetwork |  
Published : Dec 12, 2024, 12:31 AM IST
ಪೋಟೋ೧೧ಸಿಎಲ್‌ಕೆ೩ ಚಳ್ಳಕೆರೆ ನಗರದ ಪಾವಗಡ ರಸ್ತೆಯ ಶ್ರೀಸಾಯಿಬಾಬಾ ಮಂದಿರದಲ್ಲಿ ನಡೆದ ತರಬೇತಿ ಶಿಬಿರವನ್ನು ಸಹಕಾರ ರತ್ನ ಪ್ರಶಸ್ತಿ ವಿಜೇತ, ನಿರ್ದೇಶಕ ಆರ್.ರಾಮರೆಡ್ಡಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಸಹಕಾರ ಕ್ಷೇತ್ರದ ಲೆಕ್ಕಪತ್ರಗಳಲ್ಲಿ ಪ್ರಾಮಾಣಿಕತೆಯನ್ನು ನಾವು ಕಾಣಬಹುದಾಗಿದೆ. ಇತ್ತೀಚಿನ ದಿನಗಳಲ್ಲಿ ಎಲ್ಲಾ ಸಹಕಾರ ಕ್ಷೇತ್ರದಲ್ಲಿ ಉತ್ತಮ ವಹಿವಾಟು ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಸಹಕಾರಿ ಯೂನಿಯನ್ ದುರೀಣ, ಸಹಕಾರ ರತ್ನ ಪ್ರಶಸ್ತಿ ವಿಜೇತ, ನಿರ್ದೇಶಕ ಆರ್. ರಾಮರೆಡ್ಡಿ ಅಭಿಪ್ರಾಯಪಟ್ಟರು.

ಕನ್ನಡಪ್ರಭವಾರ್ತೆ ಚಳ್ಳಕೆರೆ

ಸಹಕಾರ ಕ್ಷೇತ್ರದ ಲೆಕ್ಕಪತ್ರಗಳಲ್ಲಿ ಪ್ರಾಮಾಣಿಕತೆಯನ್ನು ನಾವು ಕಾಣಬಹುದಾಗಿದೆ. ಇತ್ತೀಚಿನ ದಿನಗಳಲ್ಲಿ ಎಲ್ಲಾ ಸಹಕಾರ ಕ್ಷೇತ್ರದಲ್ಲಿ ಉತ್ತಮ ವಹಿವಾಟು ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಸಹಕಾರಿ ಯೂನಿಯನ್ ದುರೀಣ, ಸಹಕಾರ ರತ್ನ ಪ್ರಶಸ್ತಿ ವಿಜೇತ, ನಿರ್ದೇಶಕ ಆರ್. ರಾಮರೆಡ್ಡಿ ಅಭಿಪ್ರಾಯಪಟ್ಟರು.

ಪಟ್ಟಣದ ಪಾವಗಡ ರಸ್ತೆಯ ಶ್ರೀಸಾಯಿಬಾಬಾ ಮಂದಿರದಲ್ಲಿ ಚಳ್ಳಕೆರೆ, ಹಿರಿಯೂರು ಮತ್ತು ಮೊಳಕಾಲ್ಮೂರು ವ್ಯಾಪ್ತಿಯ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಗಳಿಗೆ ಆಯೋಜಿಸಿದ್ದ ಒಂದು ದಿನದ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.

ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಗಳಿಗೆ ತರಬೇತಿ ನೀಡುವ ಮೂಲಕ ಹಾಲು ಉತ್ಪಾದನೆ ಮತ್ತು ಮಾರಾಟದ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಿದಂತಾಗುತ್ತದೆ. ಹಾಲು ಉತ್ಪಾದಕರ ಸಂಘವನ್ನು ಲಾಭದತ್ತ ಮುನ್ನಡೆಸಬೇಕಿದೆ. ರೈತರು ತಮ್ಮ ಕೃಷಿಯ ಜೊತೆಗೆ ಹೈನುಗಾರಿಕೆಯನ್ನು ಸಹ ನಡೆಸಬೇಕು. ಈ ನಿಟ್ಟಿನಲ್ಲಿ ಸಂಘದ ಕಾರ್ಯದರ್ಶಿಗಳು ರೈತರನ್ನು ಜಾಗೃತೆಗೊಳಿಸಬೇಕು ಎಂದರು.

ಶಿವಮೊಗ್ಗ ಹಾಲುಒಕ್ಕೂಟದ ಜಿಲ್ಲಾ ನಿರ್ದೇಶಕ ಬಿ.ಸಿ. ಸಂಜೀವಮೂರ್ತಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಶಿವಮೊಗ್ಗ ಹಾಲು ಒಕ್ಕೂಟದ ಉತ್ಪಾದನಾ ಕೇಂದ್ರಗಳು ಉತ್ತಮ ಆಡಳಿತ ನಡೆಸುವ ಮೂಲಕ ಒಕ್ಕೂಟದ ಬಲವರ್ಧನೆಗೆ ಕಾರಣಕರ್ತರಾಗಿದ್ದಾರೆ. ಶಿವಮೊಗ್ಗ ಹಾಲು ಒಕ್ಕೂಟ ಕಳೆದ ಹಲವಾರು ದಶಕಗಳಿಂದ ಹೈನುಗಾರಿಕೆಯನ್ನು ಪ್ರೋತ್ಸಾಹಿಸುತ್ತಾ ಬಂದಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ರೈತರೊಂದಿಗೆ ಕೈಜೋಡಿಸಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಜಿ.ಬಿ. ಶೇಖರಪ್ಪ, ಮಾತೃಶ್ರೀ ಎನ್. ಮಂಜುನಾಥ, ಎಚ್., ದ್ಯಾಮಣ್ಣ ಕೋಗುಂಡೆ, ಕೆ. ಜಗ್ಗಣ್ಣ, ಎನ್.ಪಿ. ಜಯಪ್ರಕಾಶ್, ಶೇಖರಪ್ಪ, ಶಿವಾನಂದಪ್ಪ, ಜಯಶ್ರೀ ಹುನುಗುಂದ, ವ್ಯವಸ್ಥಾಪಕಿ ಸೌಮ್ಯ, ನಾಗರಾಜು ಪಾಟೀಲ್, ಸುರೇಶ್‌ಬಾಬು ಮುಂತಾದವರು ಉಪಸ್ಥಿತರಿದ್ದರು.

PREV

Recommended Stories

ರಾಹುಲ್‌ ಗಾಂಧಿ ಧರಣಿಗೆ 4500 ಪೊಲೀಸರ ಭದ್ರತೆ
ಹಳಿತಪ್ಪಿದ ಬೆಂಗಳೂರು ಉಪನಗರ ರೈಲು ಯೋಜನೆ : ಕೆ-ರೈಡ್ ಜತೆಗಿನ ಎಲ್‌ ಆ್ಯಂಡ್‌ ಟಿ ಗುತ್ತಿಗೆ ರದ್ದು