ಕನ್ನಡಪ್ರಭ ವಾರ್ತೆ ಬಂಟ್ವಾಳ
ಮಂಗಳೂರಿನ ಯುವತಿಯೋರ್ವಳ ಮದುವೆ ಉದ್ದೇಶಕ್ಕಾಗಿ ಅಲ್ ಮದೀನಾ ಟ್ರಸ್ಟ್ ಹೆಸರಿನಲ್ಲಿ ಅಕ್ಬರ್ ಸಿದ್ದಿಕ್ ಹಣ ಸಂಗ್ರಹ ಮಾಡುತ್ತಿದ್ದರು. ಆದರೆ ಹಣ ಹೆಚ್ಚು ಸಂಗ್ರಹವಾಗದೇ ಇದ್ದು, ಮದುವೆಯಾಗುವ ಯುವತಿಯ ಸೋದರಿ ಎಂಬ ಹೆಸರಲ್ಲಿ ಏ. 8ರಂದು ರಾತ್ರಿ ಮಿನಾಜ್ ಹೆಸರಿನ ಮಹಿಳೆ ವಾಟ್ಸಾಪ್ ಕರೆ ಮಾಡಿ ನೀವು ಇಷ್ಟು ಹಣ ಸಂಗ್ರಹ ಮಾಡಿದರೆ ಸಾಲದು. ದೊಡ್ಡ ಮೊತ್ತದ ಹಣ ಸಂಗ್ರಹ ಮಾಡಬೇಕು. ಇದಕ್ಕೆ ಬೇಕಾದರೆ ನಿಮ್ಮ ಜೊತೆಗೆ ಎಲ್ಲದಕ್ಕೂ ಸಹಕರಿಸುತ್ತೇನೆಂದು ಹೇಳಿದ್ದಲ್ಲದೆ, ವಾಟ್ಸಪ್ ಚಾಟಿಂಗ್ ಮತ್ತು ವಿಡಿಯೋ ಕರೆಯನ್ನೂ ಮಾಡಿದ್ದಳು.
ಮರುದಿನ ಆಸಿಫ್ ಆಪತ್ಪಾಂಧವ ಮತ್ತು ರವೂಫ್ ಬೆಂಗರೆ ಮಿನಾಜ್ ಎಂಬ ಮಹಿಳೆಯ ಜೊತೆಗಿನ ಚಾಟಿಂಗ್ ಮತ್ತು ವಿಡಿಯೋ ಕರೆಯ ಸ್ಕ್ರೀನ್ ಶಾಟ್ ಮುಂದಿಟ್ಟು ಅಕ್ಬರ್ ಸಿದ್ದಿಕ್ ಗೆ ಕರೆ ಮಾಡಿದ್ದು, ಮೂರು ಲಕ್ಷ ನಗದು ಮತ್ತು ಮೂರು ಪವನ್ ಚಿನ್ನ ನೀಡಬೇಕೆಂದು ಒತ್ತಾಯಿಸಿದ್ದಾರೆ. ಏ. 10ರ ಒಳಗಾಗಿ ಹಣ ಸಂದಾಯ ಮಾಡದಿದ್ದರೆ ಚಾಟಿಂಗ್ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡುವುದಾಗಿ ಬ್ಲ್ಯಾಕ್ ಮೇಲ್ ಮಾಡಿದ್ದು, ಇದರಿಂದ ಭೀತಿಗೊಳಗಾದ ಅಕ್ಬರ್ ಸಿದ್ದಿಕ್ ಏ.12 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಕೇಸು ದಾಖಲಾಗಿದ್ದು,ಮುಂದಿನ ತನಿಖೆ ನಡೆಯುತ್ತಿದೆ.