ಕನ್ನಡಪ್ರಭ ವಾರ್ತೆ, ದಾವಣಗೆರೆ
ಜಯಮೃತ್ಯುಂಜಯ ಶ್ರೀ ಮಾತನಾಡಿ, ಐಎಎಸ್, ಐಪಿಎಸ್ನಂಥ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ನಿಮ್ಮ ಸಂಸ್ಥೆ ಬಗ್ಗೆ ಕೇಳಿದ್ದೇನೆ. ನೀವು ಇಲ್ಲಿಗೆ ಬಂದಿದ್ದೀರಾ. ಆಶೀರ್ವಾದ ಯಾವಾಗಲೂ ಇರುತ್ತದೆ. ನಿಮಗೆ ಒಳಿತಾಗಲಿ ಎಂದು ಹಾರೈಸಿದರು.
ಜಿ.ಬಿ. ವಿನಯಕುಮಾರ್ ಮಾತನಾಡಿ, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಈಗಾಗಲೇ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಕಾಂಗ್ರೆಸ್ ಟಿಕೆಟ್ ಸಿಗುವ ವಿಶ್ವಾಸ ಇತ್ತು. ಆದರೆ, ಕೊನೆ ಗಳಿಗೆಯಲ್ಲಿ ಕೈ ತಪ್ಪಿತು. ಹಾಗಾಗಿ, ಪಕ್ಷೇತರನಾಗಿ ಸ್ಪರ್ಧೆ ಮಾಡಿದ್ದು, ಎಲ್ಲರೂ ಪ್ರೀತಿ- ವಿಶ್ವಾಸ ತೋರುತ್ತಿದ್ದಾರೆ ಎಂದು ಹೇಳಿದರು.ಜಿಲ್ಲೆಯ ಬಹುತೇಕ ಹಳ್ಳಿಗಳಲ್ಲಿ ಪಾದಯಾತ್ರೆ ನಡೆಸಿದ್ದೇನೆ. ಜನರ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಜನಾಭಿಪ್ರಾಯಕ್ಕೆ ಮಣಿದು ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ. ಜನರು ತೋರಿರುವ ಪ್ರೀತಿ, ವಿಶ್ವಾಸ ಹಾಗೂ ತುಂಬಿರುವ ಆತ್ಮಸ್ಥೈರ್ಯದಿಂದ ಚುನಾವಣೆಗೆ ಸ್ಪರ್ಧಿಸಿದ್ದು, ನಿಮ್ಮ ಆಶೀರ್ವಾದ ಬೇಕು ಎಂದು ಕೋರಿದರು.
ಹೊನ್ನಾಳಿಯಲ್ಲಿ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ್ ಉಭಯ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.