ಸುರತ್ಕಲ್‌ ಗೋವಿಂದ ದಾಸ ಕಾಲೇಜಿನ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

KannadaprabhaNewsNetwork |  
Published : Jun 14, 2025, 12:27 AM IST
ಸುರತ್ಕಲ್‌ ಗೋವಿಂದ ದಾಸ ಕಾಲೇಜಿನ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ  | Kannada Prabha

ಸಾರಾಂಶ

ಸುರತ್ಕಲ್‌ ಗೋವಿಂದ ದಾಸ ಪದವಿ ಪೂರ್ವ ಕಾಲೇಜಿನಲ್ಲಿ 2024-25 ನೇ ಶೈಕ್ಷಣಿಕ ವರ್ಷದಲ್ಲಿ ರಾಜ್ಯಮಟ್ಟದಲ್ಲಿ ಸ್ಥಾನ ಪಡೆದ ಮತ್ತು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕನ್ನಡಪ್ರಭವಾರ್ತೆ ಮೂಲ್ಕಿ

ವಿದ್ಯಾರ್ಥಿಗಳು ಬುದ್ಧಿ ಜ್ಞಾನ ಶಕ್ತಿ, ಛಲ - ಬಲದೊಂದಿಗೆ ಜೀವನೋತ್ಸಾಹವನ್ನು ಸದಾ ಇರಿಸಿಕೊಳ್ಳಬೇಕು. ಉತ್ತಮ ವಿದ್ಯಾಭ್ಯಾಸದೊಂದಿಗೆ ಉತ್ತಮ ಕಾರ್ಯಯೋಜನೆಯನ್ನು ಗುರಿಯಾಗಿಸಬೇಕು ಎಂದು ಯಶೋಮತಿ ರವೀಂದ್ರನಾಥ್ ಹೇಳಿದರು.

ಸುರತ್ಕಲ್‌ ಗೋವಿಂದ ದಾಸ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 2024-25 ನೇ ಶೈಕ್ಷಣಿಕ ವರ್ಷದಲ್ಲಿ ರಾಜ್ಯಮಟ್ಟದಲ್ಲಿ ಸ್ಥಾನ ಪಡೆದ ಮತ್ತು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.

ಸುರತ್ಕಲ್‌ ಹಿಂದು ವಿದ್ಯಾದಾಯಿನೀ ಸಂಘದ ಕಾರ್ಯದರ್ಶಿ ಶ್ರೀರಂಗ ಎಚ್‌ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು ರಾಜ್ಯಕ್ಕೆ ಚತುರ್ಥ ಸ್ಥಾನವನ್ನು ಗಳಿಸಿದ ಮಿನಲ್ ಬಿನು, ಜಿಲ್ಲೆಗೆ 8 ನೇ ಸ್ಥಾನ ಗಳಿಸಿದ ಕರ್ಕೇರ ತೇಜಸ್ವಿ ಪ್ರವೀಣ್, ಬಹುಲರನ್ನು ಗೌರವಿಸಲಾಯಿತು. ಕಾಲೇಜಿನ ಆಡಳಿತ ನಿರ್ದೇಶಕ ಪ್ರೋ ರಮೇಶ್ ಭಟ್‌ ಎಸ್ ಜಿ, ಕಾಲೇಜಿನ ಪ್ರಾಂಶುಪಾಲೆ ಲಕ್ಷ್ಮೀ, ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್ ವಿ ಶುಭ ಹಾರೈಸಿದರು. ವಾಣಿಜ್ಯ ಸಂಘದ ಅಧ್ಯಕ್ಷೆ ಅಶ್ವಿನಿ, ವಿಜ್ಞಾನ ಸಂಘದ ಅಧ್ಯಕ್ಷೆ ಪೂರ್ಣಿಮ, ವಿದ್ಯಾರ್ಥಿ ಕ್ಷೇಮಪಾಲ ವೆಂಕಟರಮಣ ಉಪಸ್ಥಿತರಿದ್ದರು. ಸೇಜಲ್‌ ಕೋಟ್ಯಾನ್ ಸ್ವಾಗತಿಸಿದರು. ಶರಣ್ಯ ಪ್ರಮೋದ್‌ ಕುಮಾರ್ ವಂದಿಸಿದರು. ಸ್ತುತಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತೋಟಗಾರಿಕೆ ವಿವಿಯಲ್ಲಿ ರೈತ ಸಂಪರ್ಕ ಕೇಂದ್ರ ಸ್ಥಾಪಿಸಿ
ದೈವಾರಾಧನೆ ಬಗ್ಗೆ ಮಾತಿನಲ್ಲಿ ಎಚ್ಚರ ಇರಲಿ: ಸುರೇಶ್‌ ನಾವೂರು