ಕ್ರೀಡಾ ಸಾಧಕಿ ಶಗುನ್‌ಗೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಸನ್ಮಾನ

KannadaprabhaNewsNetwork |  
Published : Dec 24, 2025, 03:15 AM IST
ಕ್ರೀಡಾ ಸಾಧಕಿ ಶಗುನ್‌ ಎಸ್‌. ವರ್ಮ ಹೆಗ್ಡೆ ಅವರನ್ನು ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಚೀನಾದ ಶಾಂಗ್ಲೋದಲ್ಲಿ ಡಿ.3ರಿಂದ 13ರವರೆಗೆ ನಡೆದ ವಿಶ್ವ ಶಾಲಾ ಮಕ್ಕಳ 15 ವರ್ಷದೊಳಗಿನ ವಯೋಮಿತಿಯ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ತ ಕಿಂಗ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಶಗುನ್ ಎಸ್. ವರ್ಮ ಹೆಗ್ಡೆ ನಾಯಕಿಯಾಗಿ ಭಾರತ ತಂಡವನ್ನು ಮುನ್ನಡೆಸಿದ್ದು ಅವರಿಗೆ ಎಸ್ಸ್‌ ಸಿ ಡಿಸಿಸಿ ಬ್ಯಾಂಕ್ಕ್‌ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು.

ಮಂಗಳೂರು: ಚೀನಾದ ಶಾಂಗ್ಲೋದಲ್ಲಿ ಡಿ.3ರಿಂದ 13ರವರೆಗೆ ನಡೆದ ವಿಶ್ವ ಶಾಲಾ ಮಕ್ಕಳ 15 ವರ್ಷದೊಳಗಿನ ವಯೋಮಿತಿಯ ವಾಲಿಬಾಲ್ ಪಂದ್ಯಾಟದಲ್ಲಿ ಭಾರತದ ಬಾಲಕಿಯರ ತಂಡ ಭಾಗವಹಿಸಿದ್ದು, ಈ ತಂಡಕ್ಕೆ ಕಾರ್ಕಳ ಕ್ರೈಸ್ತ ಕಿಂಗ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಶಗುನ್ ಎಸ್. ವರ್ಮ ಹೆಗ್ಡೆ ನಾಯಕಿಯಾಗಿ ಭಾರತ ತಂಡವನ್ನು ಮುನ್ನಡೆಸಿದ್ದರು. ಅವರ ಈ ಕ್ರೀಡಾ ಸಾಧನೆಯನ್ನು ಗುರುತಿಸಿ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಸೋಮವಾರ ಬ್ಯಾಂಕಿನಲ್ಲಿ ಸನ್ಮಾನಿಸಿದರು.

ಕರಾವಳಿಗೆ ಹೆಮ್ಮೆ:

ಡಾ.ಎಂ.ಎನ್. ರಾಜೇಂದ್ರ ಕುಮಾರ್ ಈ ಸಂದರ್ಭ ಮಾತನಾಡಿ, ಶಗುನ್ ಎಸ್. ವರ್ಮ ಹೆಗ್ಡೆ ಅವರು ಕಾರ್ಕಳದ ನಿವಾಸಿಗಳಾದ ಶೃತಿರಾಜ್ ಮತ್ತು ಸಂದೇಶ್ ವರ್ಮ ದಂಪತಿ ಪುತ್ರಿಯಾಗಿದ್ದು, ಕ್ರೀಡಾ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೇರಿದ ಮಹಾನ್ ಸಾಧಕಿ. ಪ್ರತಿಭಾನ್ವಿತ ಆಟಗಾರ್ತಿ ಆಗಿರುವ ಶಗುನ್ ಇವರು ವಿಶ್ವ ಶಾಲಾ ಮಕ್ಕಳ ಭಾರತ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದಿರುವ 12 ಆಟಗಾರ್ತಿಯರಲ್ಲಿ ಕರ್ನಾಟಕದಿಂದ ಆಯ್ಕೆಯಾದ ಏಕೈಕ ಆಟಗಾರ್ತಿಯಾಗಿದ್ದಾರೆ. ಮಾತ್ರವಲ್ಲ ತಂಡದ ನಾಯಕಿ ಅಗಿಯೂ ಉತ್ತಮ ಪ್ರದರ್ಶನವನ್ನು ನೀಡಿರುವುದು ನಮ್ಮ ಕರಾವಳಿ ಭಾಗಕ್ಕೆ ಹೆಮ್ಮೆಯ ವಿಚಾರ. ಅವರ ಕ್ರೀಡಾ ಪ್ರತಿಭೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇನ್ನಷ್ಟೂ ಪ್ರಜ್ವಲಮಾನವಾಗಿ ಬೆಳಗಿ, ಹಲವಾರು ಪ್ರಶಸ್ತಿಗಳು ಅವರ ಕ್ರೀಡಾ ಸಾಧನೆಗೆ ಲಭಿಸಲಿ ಎಂದು ಶುಭ ಹಾರೈಸಿದರು.

ಶಗುನ್‌ಗೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ 1 ಲಕ್ಷ :

ಶಗುನ್ ಎಸ್. ವರ್ಮ ಹೆಗ್ಡೆ ಅವರನ್ನು ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಶಾಲು, ಫಲಪುಷ್ಪ, ಹಾರ, ಬೆಳ್ಳಿಯ ಸ್ಮರಣಿಕೆಯೊಂದಿಗೆ 1 ಲಕ್ಷ ರು. ಚೆಕ್ ನೀಡಿ ಗೌರವಿಸಿದರು.

ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಬ್ಯಾಂಕಿನ ನಿರ್ದೇಶಕರಾದ ಟಿ.ಜಿ.ರಾಜರಾಮ ಭಟ್, ಮೋನಪ್ಪ ಶೆಟ್ಟಿ ಎಕ್ಕಾರು, ಜೈರಾಜ್ ಬಿ.ರೈ, ಸದಾಶಿವ ಉಳ್ಳಾಲ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಟ್ರಸ್ಟಿ ಮೇಘರಾಜ್ ಆರ್. ಜೈನ್, ಉದ್ಯಮಿಗಳಾದ ಪುಷ್ಪರಾಜ್ ಜೈನ್, ಜಯಪ್ರಕಾಶ್ ತುಂಬೆ, ಸಿನಿಮಾ ನಟ ಸಂತೋಷ್ ಶೆಟ್ಟಿ ಹಾಗೂ ಶಗುನ್ ಅವರ ತಂದೆ ಸಂದೇಶ್ ವರ್ಮ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೃಷಿಯಲ್ಲಿ ಹೊರ ದೇಶಗಳೊಂದಿಗೆ ಪೈಪೋಟಿ ನಡೆಸಿ
ತುಳು 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವಂತೆ ಮತ್ತೊಮ್ಮೆ ಸಂಸತ್ತಿನಲ್ಲಿ ಪ್ರಸ್ತಾಪ: ಹೆಗ್ಗಡೆ